ನಗರದ ತಾಪಮಾನ ಕಳೆದ ಎರಡು ದಿನದಲ್ಲಿ ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ನಷ್ಟು ತಲುಪಿದೆ. ಬಿರು ಬಿಸಿಲಿನಿಂದ ಜನ ಹೈರಾಣಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ತತ್ವಾರ ಉಂಟಾಗಿದೆ. ಇಂತಹ ಹೊತ್ತಿನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಈ ಬಾರಿ ಮುಂಗಾರು ಫಲಪ್ರದವಾಗಿರಲಿದೆ ಎಂದು ಹವಾಮಾನ ಇಲಾಖೆಯು ಅಂದಾಜು ಮಾಡಿದ್ದು, ಇದು ಜನರಲ್ಲಿ ಆಶಾಭಾವ ಮೂಡಿಸಿದೆ.