<p><strong>ಮೈಸೂರು:</strong> ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ಒಂದು ತಾಸಿಗೂ ಹೆಚ್ಚಿನ ಅವಧಿ ವರ್ಷಧಾರೆಯಾಯ್ತು.</p>.<p>ಮೈಸೂರು ನಗರದಲ್ಲಿ ರಾತ್ರಿ ವೇಳೆ ಜೋರಾಗಿ ಮಳೆ ಸುರಿದಿದ್ದರಿಂದ, ಹಲವು ರಸ್ತೆಗಳ ಮೇಲೆ ನೀರು ಹರಿಯಿತು. ಕೆಲ ಹೊತ್ತು ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು.</p>.<p>ಮಳೆ ನೀರಿನಿಂದ ಚರಂಡಿಗಳು ತುಂಬಿ ರಸ್ತೆಯಲ್ಲೆಲ್ಲಾ ನೀರು ಹರಿಯಿತು. ಕೆಲವೊಂದು ರಸ್ತೆಗಳಲ್ಲಿ ಅರ್ಧ ಅಡಿಗೂ ಹೆಚ್ಚಿನ ನೀರು ಹರಿದಿದ್ದು ಕಂಡು ಬಂದಿತು. ರಸ್ತೆ ಗುಂಡಿಗಳಲ್ಲಿ ಮಳೆ ನೀರು ತುಂಬಿದ್ದರಿಂದ ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸಿದರು.</p>.<p>ತಗ್ಗು ಪ್ರದೇಶಗಳು ಮಳೆ ನೀರಿನಿಂದ ಆವೃತಗೊಂಡಿದ್ದವು. ರಾತ್ರಿ ವೇಳೆ ರಸ್ತೆ ಬದಿ ಕುರುಕಲು ತಿಂಡಿ, ಪಾನಿಪೂರಿ, ಗೋಬಿ, ಚಾಟ್ಸ್, ಊಟ–ಉಪಾಹಾರದ ವಹಿವಾಟು ನಡೆಸುವ ವ್ಯಾಪಾರಿಗಳು ಮಳೆಯಿಂದ ಕಂಗಾಲಾದರು. ಗ್ರಾಹಕರು ಬರದಿದ್ದರಿಂದ ಪರಿತಪಿಸಿದರು.</p>.<p>ತಿ.ನರಸೀಪುರ, ಕೆ.ಆರ್.ನಗರ, ಹುಣಸೂರು, ನಂಜನಗೂಡು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ಪಟ್ಟಣ ಸೇರಿದಂತೆ ಆಯಾ ತಾಲ್ಲೂಕಿನ ವಿವಿಧೆಡೆ ಚದುರಿದಂತೆ ಮಳೆಯಾಗಿದೆ. ಕೆಲವೆಡೆ ಜೋರು ಮಳೆ ಸುರಿದಿದ್ದರೆ, ಹಲವೆಡೆ ಸಾಧಾರಣ ಮಳೆಯಾಗಿದೆ.</p>.<p>ಮೈಸೂರು ತಾಲ್ಲೂಕಿನ ವರುಣಾ, ಜಯಪುರ ಸುತ್ತಮುತ್ತಲೂ ಬಿರುಸಿನಿಂದ ಮಳೆ ಸುರಿದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮಗಳ ಸುತ್ತಮುತ್ತಲೂ ಮಳೆಯಾಗಿದೆ.</p>.<p>ಜಿಲ್ಲೆಯ ಗ್ರಾಮೀಣ ಪರಿಸರದಲ್ಲೂ ಮಳೆಯಾಗಿದ್ದರಿಂದ ರೈತ ಸಮೂಹದಲ್ಲಿ ಹರ್ಷ ವ್ಯಕ್ತವಾಗಿದೆ. ಭತ್ತದ ನಾಟಿ ಮಾಡಿದ್ದವರಿಗೆ, ಮಾಡುತ್ತಿರುವವರಿಗೆ ಈ ಮಳೆ ಪೂರಕವಾಗಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ಒಂದು ತಾಸಿಗೂ ಹೆಚ್ಚಿನ ಅವಧಿ ವರ್ಷಧಾರೆಯಾಯ್ತು.</p>.<p>ಮೈಸೂರು ನಗರದಲ್ಲಿ ರಾತ್ರಿ ವೇಳೆ ಜೋರಾಗಿ ಮಳೆ ಸುರಿದಿದ್ದರಿಂದ, ಹಲವು ರಸ್ತೆಗಳ ಮೇಲೆ ನೀರು ಹರಿಯಿತು. ಕೆಲ ಹೊತ್ತು ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು.</p>.<p>ಮಳೆ ನೀರಿನಿಂದ ಚರಂಡಿಗಳು ತುಂಬಿ ರಸ್ತೆಯಲ್ಲೆಲ್ಲಾ ನೀರು ಹರಿಯಿತು. ಕೆಲವೊಂದು ರಸ್ತೆಗಳಲ್ಲಿ ಅರ್ಧ ಅಡಿಗೂ ಹೆಚ್ಚಿನ ನೀರು ಹರಿದಿದ್ದು ಕಂಡು ಬಂದಿತು. ರಸ್ತೆ ಗುಂಡಿಗಳಲ್ಲಿ ಮಳೆ ನೀರು ತುಂಬಿದ್ದರಿಂದ ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸಿದರು.</p>.<p>ತಗ್ಗು ಪ್ರದೇಶಗಳು ಮಳೆ ನೀರಿನಿಂದ ಆವೃತಗೊಂಡಿದ್ದವು. ರಾತ್ರಿ ವೇಳೆ ರಸ್ತೆ ಬದಿ ಕುರುಕಲು ತಿಂಡಿ, ಪಾನಿಪೂರಿ, ಗೋಬಿ, ಚಾಟ್ಸ್, ಊಟ–ಉಪಾಹಾರದ ವಹಿವಾಟು ನಡೆಸುವ ವ್ಯಾಪಾರಿಗಳು ಮಳೆಯಿಂದ ಕಂಗಾಲಾದರು. ಗ್ರಾಹಕರು ಬರದಿದ್ದರಿಂದ ಪರಿತಪಿಸಿದರು.</p>.<p>ತಿ.ನರಸೀಪುರ, ಕೆ.ಆರ್.ನಗರ, ಹುಣಸೂರು, ನಂಜನಗೂಡು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ಪಟ್ಟಣ ಸೇರಿದಂತೆ ಆಯಾ ತಾಲ್ಲೂಕಿನ ವಿವಿಧೆಡೆ ಚದುರಿದಂತೆ ಮಳೆಯಾಗಿದೆ. ಕೆಲವೆಡೆ ಜೋರು ಮಳೆ ಸುರಿದಿದ್ದರೆ, ಹಲವೆಡೆ ಸಾಧಾರಣ ಮಳೆಯಾಗಿದೆ.</p>.<p>ಮೈಸೂರು ತಾಲ್ಲೂಕಿನ ವರುಣಾ, ಜಯಪುರ ಸುತ್ತಮುತ್ತಲೂ ಬಿರುಸಿನಿಂದ ಮಳೆ ಸುರಿದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮಗಳ ಸುತ್ತಮುತ್ತಲೂ ಮಳೆಯಾಗಿದೆ.</p>.<p>ಜಿಲ್ಲೆಯ ಗ್ರಾಮೀಣ ಪರಿಸರದಲ್ಲೂ ಮಳೆಯಾಗಿದ್ದರಿಂದ ರೈತ ಸಮೂಹದಲ್ಲಿ ಹರ್ಷ ವ್ಯಕ್ತವಾಗಿದೆ. ಭತ್ತದ ನಾಟಿ ಮಾಡಿದ್ದವರಿಗೆ, ಮಾಡುತ್ತಿರುವವರಿಗೆ ಈ ಮಳೆ ಪೂರಕವಾಗಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>