<p><strong>ಮೈಸೂರು:</strong> ಮೈಸೂರು ಭಾಗದ ಮೈಸೂರು, ಚಾಮರಾಜನಗರ, ಕೊಡಗಿನಲ್ಲಿ ಮಂಗಳವಾರ ಮುಂಜಾನೆ ಹಾಗೂ ಹಾಸನದಲ್ಲಿ ಸಂಜೆ ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಉತ್ತಮ ಮಳೆಯಾಯಿತು. ಹಾಸನ ಜಿಲ್ಲೆಯ ಅರಸೀಕೆರೆ ಮತ್ತು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ವಿವಿಧೆಡೆ ಆಲಿಕಲ್ಲು ಮಳೆಯೂ ಸುರಿಯಿತು.</p>.<p>ಮೈಸೂರಿನಲ್ಲಿ ಜಿಲ್ಲಾ ಕೇಂದ್ರದ ಸಹಿತ ವಿವಿಧ ತಾಲ್ಲೂಕುಗಳಲ್ಲಿ ಮುಂಜಾನೆ 2 ಗಂಟೆಯ ಸಮಯದಲ್ಲಿ ಜೋರು ಮಳೆಯಾಯಿತು. ಆರಂಭದಲ್ಲಿ ಬಿರುಗಾಳಿ ಸಹಿತ ಮಳೆಯಾದರೆ ಬಳಿಕ ಶಾಂತವಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಜನರಿಗೆ ಸಂತಸ ನೀಡಿತು. ಕೊಂಚ ವಿರಾಮದ ಬಳಿಕ 3 ಗಂಟೆಗೆ ಮತ್ತೆ ಜೋರು ಮಳೆಯಾಯಿತು. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವಾರದೊಳಗೆ ಸುರಿದ ಎರಡನೇ ಮಳೆ ತುಸು ನೆಮ್ಮದಿ ತಂದಿದೆ.</p>.<p>ಹಾಸನ ನಗರವೂ ಸೇರಿದಂತೆ ಜಿಲ್ಲೆಯ ಹೊಳೆನರಸೀಪುರ, ಅರಸೀಕೆರೆ, ಹಳೇಬೀಡು, ಜಾವಗಲ್, ಬಾಣಾವರ, ಆಲೂರಿನಲ್ಲಿ ಮುಕ್ಕಾಲು ಗಂಟೆಗೂ ಹೆಚ್ಚು ಉತ್ತಮ ಮಳೆಯಾಯಿತು.</p>.<p>ಚಾಮರಾಜನಗರ ಜಿಲ್ಲಾ ಕೇಂದ್ರ ಸೇರಿದಂತೆ ವಿವಿಧೆಡೆ ರಾತ್ರಿ 2 ಗಂಟೆಯ ನಂತರ ಉತ್ತಮ ಮಳೆಯಾಯಿತು. ಅಲ್ಲಲ್ಲಿ ಬೆಳೆಗಳಿಗೆ ಹಾನಿಯಾಗಿದೆ. ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 1.51 ಸೆಂ.ಮೀ ಮಳೆಯಾಗಿದೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ 2.23 ಸೆಂ.ಮೀ ಮಳೆ ಸುರಿದಿದೆ.</p>.<p>ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಗೋಣಿಕೊಪ್ಪಲು ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಹೆಚ್ಚಿತ್ತು. ಮಳೆ ಕಡಿಮೆ ಇತ್ತು.</p>.<p>ಮಂಡ್ಯ ನಗರದ ಕೆ.ವಿ.ಶಂಕರಗೌಡ ರಸ್ತೆಯಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ಮರದ ಬೃಹತ್ ಕೊಂಬೆ ಕಾರಿನ ಮೇಲೆ ಮುರಿದು ಬಿದ್ದು, ತಾಲ್ಲೂಕಿನ ಜಿ.ಬೊಮ್ಮನಹಳ್ಳಿಯ ಕಾರ್ತಿಕ್ (27) ಮೃತಪಟ್ಟು, ಅವರ ಸ್ನೇಹಿತರಾದ ಸುನೀಲ್, ಮಂಜು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು ಭಾಗದ ಮೈಸೂರು, ಚಾಮರಾಜನಗರ, ಕೊಡಗಿನಲ್ಲಿ ಮಂಗಳವಾರ ಮುಂಜಾನೆ ಹಾಗೂ ಹಾಸನದಲ್ಲಿ ಸಂಜೆ ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಉತ್ತಮ ಮಳೆಯಾಯಿತು. ಹಾಸನ ಜಿಲ್ಲೆಯ ಅರಸೀಕೆರೆ ಮತ್ತು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ವಿವಿಧೆಡೆ ಆಲಿಕಲ್ಲು ಮಳೆಯೂ ಸುರಿಯಿತು.</p>.<p>ಮೈಸೂರಿನಲ್ಲಿ ಜಿಲ್ಲಾ ಕೇಂದ್ರದ ಸಹಿತ ವಿವಿಧ ತಾಲ್ಲೂಕುಗಳಲ್ಲಿ ಮುಂಜಾನೆ 2 ಗಂಟೆಯ ಸಮಯದಲ್ಲಿ ಜೋರು ಮಳೆಯಾಯಿತು. ಆರಂಭದಲ್ಲಿ ಬಿರುಗಾಳಿ ಸಹಿತ ಮಳೆಯಾದರೆ ಬಳಿಕ ಶಾಂತವಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಜನರಿಗೆ ಸಂತಸ ನೀಡಿತು. ಕೊಂಚ ವಿರಾಮದ ಬಳಿಕ 3 ಗಂಟೆಗೆ ಮತ್ತೆ ಜೋರು ಮಳೆಯಾಯಿತು. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವಾರದೊಳಗೆ ಸುರಿದ ಎರಡನೇ ಮಳೆ ತುಸು ನೆಮ್ಮದಿ ತಂದಿದೆ.</p>.<p>ಹಾಸನ ನಗರವೂ ಸೇರಿದಂತೆ ಜಿಲ್ಲೆಯ ಹೊಳೆನರಸೀಪುರ, ಅರಸೀಕೆರೆ, ಹಳೇಬೀಡು, ಜಾವಗಲ್, ಬಾಣಾವರ, ಆಲೂರಿನಲ್ಲಿ ಮುಕ್ಕಾಲು ಗಂಟೆಗೂ ಹೆಚ್ಚು ಉತ್ತಮ ಮಳೆಯಾಯಿತು.</p>.<p>ಚಾಮರಾಜನಗರ ಜಿಲ್ಲಾ ಕೇಂದ್ರ ಸೇರಿದಂತೆ ವಿವಿಧೆಡೆ ರಾತ್ರಿ 2 ಗಂಟೆಯ ನಂತರ ಉತ್ತಮ ಮಳೆಯಾಯಿತು. ಅಲ್ಲಲ್ಲಿ ಬೆಳೆಗಳಿಗೆ ಹಾನಿಯಾಗಿದೆ. ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 1.51 ಸೆಂ.ಮೀ ಮಳೆಯಾಗಿದೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ 2.23 ಸೆಂ.ಮೀ ಮಳೆ ಸುರಿದಿದೆ.</p>.<p>ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಗೋಣಿಕೊಪ್ಪಲು ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಹೆಚ್ಚಿತ್ತು. ಮಳೆ ಕಡಿಮೆ ಇತ್ತು.</p>.<p>ಮಂಡ್ಯ ನಗರದ ಕೆ.ವಿ.ಶಂಕರಗೌಡ ರಸ್ತೆಯಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ಮರದ ಬೃಹತ್ ಕೊಂಬೆ ಕಾರಿನ ಮೇಲೆ ಮುರಿದು ಬಿದ್ದು, ತಾಲ್ಲೂಕಿನ ಜಿ.ಬೊಮ್ಮನಹಳ್ಳಿಯ ಕಾರ್ತಿಕ್ (27) ಮೃತಪಟ್ಟು, ಅವರ ಸ್ನೇಹಿತರಾದ ಸುನೀಲ್, ಮಂಜು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>