ಸೋಮವಾರ ರಾತ್ರಿ ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ, ಕೆ.ಆರ್. ಪೇಟೆ ತಾಲ್ಲೂಕಿನ ಹರಳಹಳ್ಳಿ ಹಾಗೂ ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿಯಲ್ಲಿ ತಲಾ 12 ಸೆಂ.ಮೀ. ಮಳೆ ಬಿದ್ದಿದೆ. ಶ್ರೀರಂಗಪಟ್ಟಣದ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ರಸ್ತೆ ಜಲಾವೃತವಾಗಿದ್ದ ಕಾರಣ ಮಂಗಳವಾರ ಬೆಳಿಗ್ಗೆ ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು. ಜಿಲ್ಲೆಯಲ್ಲಿ ಜೋರು ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ.