<p><strong>ಮೈಸೂರು:</strong> ರಾಜ್ಕುಮಾರ್ ಕಲಾ ಸೇವಾ ಟ್ರಸ್ಟ್ನಿಂದ ರಾಜ್ಕುಮಾರ್ ಅವರ 96ನೇ ಜಯಂತಿ ಪ್ರಯುಕ್ತ ನಾದಬ್ರಹ್ಮ ಸಭಾಂಗಣದಲ್ಲಿ ನಡೆಯುತ್ತಿರುವ ನೆನಪಿನೋತ್ಸವದಲ್ಲಿ ಬುಧವಾರ ವಿವಿಧ ಕ್ಷೇತ್ರಗಳ 10 ಮಂದಿ ಸಾಧಕ ಕಲಾವಿದರಿಗೆ ‘ರಾಜ್ ಕಲಾ ಸೇವಾರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಿದರು.</p>.<p>ಡ್ರಂ ವಾದಕ ಸಿ.ಆರ್.ರಾಘವೇಂದ್ರ ಪ್ರಸಾದ್, ಗಾಯಕರಾದ ಶಾರದಮ್ಮ, ಸರ್ವಮಂಗಳ, ತಬಲಾ ವಾದಕ ಎಂ.ಸಿ.ಜಗದೀಶ್, ರಂಗಭೂಮಿ ಕಲಾವಿದೆ ಮೇರಿ ವಸಂತ, ರಿದಂ ಪ್ಯಾಡ್ ವಾದಕ ಆ್ಯಂಡ್ರ್ಯು, ಗಾಯಕರಾದ ರಾ.ಬಿ.ನಾಗರಾಜು, ವೈ.ರಮೇಶ್, ನೃತ್ಯ ನಿರ್ದೇಶಕ ಮೈಸೂರು ರಾಜು, ಗಾಯಕ ಆರ್. ರವಿ ಪ್ರಶಸ್ತಿಗೆ ಭಾಜನರಾದರು.</p>.<p>ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಉದ್ಯಮಿ ರವಿಗೌಡ, ‘ಅಣ್ಣಾವ್ರ ಚಿತ್ರಗಳನ್ನು ನೋಡಿ ಅದರಿಂದ ಪ್ರಭಾವಿತನಾಗಿ ಸಾಕಷ್ಟು ಕಲಿತಿದ್ದೇನೆ. ಆಯೋಜಕ ಮೈಸೂರು ಜಯರಾಂ ‘ಶತಮಾನೋತ್ಸವ ಸಂಭ್ರಮ’ಕ್ಕೂ ಸಿದ್ಧತೆ ನಡೆಸುತ್ತಿರುವುದು ಅಭಿನಂದನೀಯ’ ಎಂದರು.</p>.<p>ಮೈಸೂರು ಜಯರಾಂ ಮಾತನಾಡಿ, ‘ಮನೆಯಲ್ಲಿ ಇಷ್ಟೊಂದು ಸಾಲ ಮಾಡಿ ಏಕೆ ಕಾರ್ಯಕ್ರಮ ಮಾಡುತ್ತೀರಿ ಎಂದು ಪ್ರಶ್ನಿಸುತ್ತಾರೆ. ಆದರೆ, ಈ ಕಷ್ಟಗಳು ನನ್ನ ಅಭಿಮಾನವನ್ನು ತಡೆಯುವುದಿಲ್ಲ’ ಎಂದು ಭಾವುಕರಾಗಿ ನುಡಿದರು.</p>.<p>ರಾಜ್ಕುಮಾರ್ ಅವರು ಅಭಿನಯಿಸಿರುವ ಚಲನಚಿತ್ರಗೀತೆಗಳು ಸಭಾಂಗಣದಲ್ಲಿ ಮೇ 30ರವರೆಗೆ ಪ್ರಸ್ತುತಗೊಳ್ಳಲಿವೆ.</p>.<p>ಗೌರವಾಧ್ಯಕ್ಷ ವೈ.ಡಿ.ರಾಜಣ್ಣ, ನಿರೂಪಕ ಸುಧೀಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜ್ಕುಮಾರ್ ಕಲಾ ಸೇವಾ ಟ್ರಸ್ಟ್ನಿಂದ ರಾಜ್ಕುಮಾರ್ ಅವರ 96ನೇ ಜಯಂತಿ ಪ್ರಯುಕ್ತ ನಾದಬ್ರಹ್ಮ ಸಭಾಂಗಣದಲ್ಲಿ ನಡೆಯುತ್ತಿರುವ ನೆನಪಿನೋತ್ಸವದಲ್ಲಿ ಬುಧವಾರ ವಿವಿಧ ಕ್ಷೇತ್ರಗಳ 10 ಮಂದಿ ಸಾಧಕ ಕಲಾವಿದರಿಗೆ ‘ರಾಜ್ ಕಲಾ ಸೇವಾರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಿದರು.</p>.<p>ಡ್ರಂ ವಾದಕ ಸಿ.ಆರ್.ರಾಘವೇಂದ್ರ ಪ್ರಸಾದ್, ಗಾಯಕರಾದ ಶಾರದಮ್ಮ, ಸರ್ವಮಂಗಳ, ತಬಲಾ ವಾದಕ ಎಂ.ಸಿ.ಜಗದೀಶ್, ರಂಗಭೂಮಿ ಕಲಾವಿದೆ ಮೇರಿ ವಸಂತ, ರಿದಂ ಪ್ಯಾಡ್ ವಾದಕ ಆ್ಯಂಡ್ರ್ಯು, ಗಾಯಕರಾದ ರಾ.ಬಿ.ನಾಗರಾಜು, ವೈ.ರಮೇಶ್, ನೃತ್ಯ ನಿರ್ದೇಶಕ ಮೈಸೂರು ರಾಜು, ಗಾಯಕ ಆರ್. ರವಿ ಪ್ರಶಸ್ತಿಗೆ ಭಾಜನರಾದರು.</p>.<p>ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಉದ್ಯಮಿ ರವಿಗೌಡ, ‘ಅಣ್ಣಾವ್ರ ಚಿತ್ರಗಳನ್ನು ನೋಡಿ ಅದರಿಂದ ಪ್ರಭಾವಿತನಾಗಿ ಸಾಕಷ್ಟು ಕಲಿತಿದ್ದೇನೆ. ಆಯೋಜಕ ಮೈಸೂರು ಜಯರಾಂ ‘ಶತಮಾನೋತ್ಸವ ಸಂಭ್ರಮ’ಕ್ಕೂ ಸಿದ್ಧತೆ ನಡೆಸುತ್ತಿರುವುದು ಅಭಿನಂದನೀಯ’ ಎಂದರು.</p>.<p>ಮೈಸೂರು ಜಯರಾಂ ಮಾತನಾಡಿ, ‘ಮನೆಯಲ್ಲಿ ಇಷ್ಟೊಂದು ಸಾಲ ಮಾಡಿ ಏಕೆ ಕಾರ್ಯಕ್ರಮ ಮಾಡುತ್ತೀರಿ ಎಂದು ಪ್ರಶ್ನಿಸುತ್ತಾರೆ. ಆದರೆ, ಈ ಕಷ್ಟಗಳು ನನ್ನ ಅಭಿಮಾನವನ್ನು ತಡೆಯುವುದಿಲ್ಲ’ ಎಂದು ಭಾವುಕರಾಗಿ ನುಡಿದರು.</p>.<p>ರಾಜ್ಕುಮಾರ್ ಅವರು ಅಭಿನಯಿಸಿರುವ ಚಲನಚಿತ್ರಗೀತೆಗಳು ಸಭಾಂಗಣದಲ್ಲಿ ಮೇ 30ರವರೆಗೆ ಪ್ರಸ್ತುತಗೊಳ್ಳಲಿವೆ.</p>.<p>ಗೌರವಾಧ್ಯಕ್ಷ ವೈ.ಡಿ.ರಾಜಣ್ಣ, ನಿರೂಪಕ ಸುಧೀಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>