<p><strong>ಮೈಸೂರು:</strong> ಶಾಲೆಯಲ್ಲಿ ಮಾತ್ರವಲ್ಲ ಮನೆಯಲ್ಲೂ ಮಕ್ಕಳು ಇಂಗ್ಲಿಷ್ ಮಾತನಾಡುವಂತಾದರೆ ನಮ್ಮ ಭಾಷೆ ಉಳಿಯುವುದಾದರೂ ಹೇಗೆ ಎಂದು ರಂಗಕರ್ಮಿ ರಾಜಶೇಖರ ಕದಂಬ ಪ್ರಶ್ನಿಸಿದರು.</p>.<p>ಇಲ್ಲಿನ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಶನಿವಾರ ಜೆಎಸ್ಎಸ್ ಮಹಾವಿದ್ಯಾಪೀಠ, ಜೆಎಸ್ಎಸ್ ವಾಕ್ ಮತ್ತು ಶ್ರವಣ ಕಾಲೇಜು, ಫಿಸಿಯೋಥೆರಫಿ ಕಾಲೇಜು, ನರ್ಸಿಂಗ್ ಕಾಲೇಜು ಮತ್ತು ನರ್ಸಿಂಗ್ ಶಾಲೆಯ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಮ್ಮ ಭವಿಷ್ಯಕ್ಕಾಗಿ, ಜೀವನಕ್ಕಾಗಿ ಬೇರೆ ಭಾಷೆಗಳನ್ನು ಕಲಿಯಬೇಕು. ಕನ್ನಡ ನಮ್ಮ ತಾಯಿಯಾದರೆ ಬೇರೆ ಭಾಷೆಗಳು ನಮ್ಮ ಸಂಬಂಧಿಕರು. ಆದರೆ, ನಮ್ಮ ಭಾಷೆಯನ್ನು ಬಿಡಬಾರದು. ಎಲ್ಲ ಸಂವಹನಗಳೂ ಕನ್ನಡದಲ್ಲಿಯೇ ನಡೆಯಬೇಕು ಎಂದು ಅವರು ಹೇಳಿದರು.</p>.<p>ನವೆಂಬರ್ ತಿಂಗಳಿನಲ್ಲಿ ಮಾತ್ರವೇ ಕನ್ನಡಾಭಿಮಾನ ಕಾಣುತ್ತದೆ. ಉಳಿದ ತಿಂಗಳುಗಳಲ್ಲಿ ಇದು ಕಾಣುವುದಿಲ್ಲ. ಈ ಪ್ರವೃತ್ತಿ ನಿಜಕ್ಕೂ ಸರಿಯಲ್ಲ ಎಂದರು.</p>.<p>ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಕನ್ನಡದ ಹಾಡುಗಳನ್ನು ಹಾಡಿದರು. ಮಲೆಯಾಳಂ ಮಾತೃಭಾಷೆಯಾಗಿರುವ ಯುವತಿಯೋರ್ವರು ‘ಈ ಕನ್ನಡ ಮಣ್ಣನು ಮರಿಬೇಡ.. ಓ ಅಭಿಮಾನಿ’ ಎಂದು ಹಾಡಿದ ಹಾಡು ಪ್ರೇಕ್ಷಕರ ಮನಗೆದ್ದಿತು.</p>.<p>ಜೆಎಸ್ಎಸ್ ಮಹಾವಿದ್ಯಾಪೀಠದ ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್.ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಶಾಲೆಯಲ್ಲಿ ಮಾತ್ರವಲ್ಲ ಮನೆಯಲ್ಲೂ ಮಕ್ಕಳು ಇಂಗ್ಲಿಷ್ ಮಾತನಾಡುವಂತಾದರೆ ನಮ್ಮ ಭಾಷೆ ಉಳಿಯುವುದಾದರೂ ಹೇಗೆ ಎಂದು ರಂಗಕರ್ಮಿ ರಾಜಶೇಖರ ಕದಂಬ ಪ್ರಶ್ನಿಸಿದರು.</p>.<p>ಇಲ್ಲಿನ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಶನಿವಾರ ಜೆಎಸ್ಎಸ್ ಮಹಾವಿದ್ಯಾಪೀಠ, ಜೆಎಸ್ಎಸ್ ವಾಕ್ ಮತ್ತು ಶ್ರವಣ ಕಾಲೇಜು, ಫಿಸಿಯೋಥೆರಫಿ ಕಾಲೇಜು, ನರ್ಸಿಂಗ್ ಕಾಲೇಜು ಮತ್ತು ನರ್ಸಿಂಗ್ ಶಾಲೆಯ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಮ್ಮ ಭವಿಷ್ಯಕ್ಕಾಗಿ, ಜೀವನಕ್ಕಾಗಿ ಬೇರೆ ಭಾಷೆಗಳನ್ನು ಕಲಿಯಬೇಕು. ಕನ್ನಡ ನಮ್ಮ ತಾಯಿಯಾದರೆ ಬೇರೆ ಭಾಷೆಗಳು ನಮ್ಮ ಸಂಬಂಧಿಕರು. ಆದರೆ, ನಮ್ಮ ಭಾಷೆಯನ್ನು ಬಿಡಬಾರದು. ಎಲ್ಲ ಸಂವಹನಗಳೂ ಕನ್ನಡದಲ್ಲಿಯೇ ನಡೆಯಬೇಕು ಎಂದು ಅವರು ಹೇಳಿದರು.</p>.<p>ನವೆಂಬರ್ ತಿಂಗಳಿನಲ್ಲಿ ಮಾತ್ರವೇ ಕನ್ನಡಾಭಿಮಾನ ಕಾಣುತ್ತದೆ. ಉಳಿದ ತಿಂಗಳುಗಳಲ್ಲಿ ಇದು ಕಾಣುವುದಿಲ್ಲ. ಈ ಪ್ರವೃತ್ತಿ ನಿಜಕ್ಕೂ ಸರಿಯಲ್ಲ ಎಂದರು.</p>.<p>ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಕನ್ನಡದ ಹಾಡುಗಳನ್ನು ಹಾಡಿದರು. ಮಲೆಯಾಳಂ ಮಾತೃಭಾಷೆಯಾಗಿರುವ ಯುವತಿಯೋರ್ವರು ‘ಈ ಕನ್ನಡ ಮಣ್ಣನು ಮರಿಬೇಡ.. ಓ ಅಭಿಮಾನಿ’ ಎಂದು ಹಾಡಿದ ಹಾಡು ಪ್ರೇಕ್ಷಕರ ಮನಗೆದ್ದಿತು.</p>.<p>ಜೆಎಸ್ಎಸ್ ಮಹಾವಿದ್ಯಾಪೀಠದ ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್.ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>