<p><strong>ಮೈಸೂರು:</strong> ನಗರದ ಆಲನಳ್ಳಿಯ ಚಿತ್ಕಲ ಪ್ರತಿಷ್ಠಾನದ ಅಕ್ಕಮಹಾದೇವಿ ವಿದ್ಯಾರ್ಥಿ ನಿಲಯದಲ್ಲಿ ಶರಣ ಸಾಹಿತ್ಯ ಪರಿಷತ್ ನಗರ ಘಟಕದಿಂದ ಶನಿವಾರ ದತ್ತಿ ಕಾರ್ಯಕ್ರಮ ನಡೆಯಿತು.</p>.<p>ದತ್ತಿ ದಾನಿ ಎಂ.ಎ.ನೀಲಾಂಬಿಕ ಮಾತನಾಡಿ, ‘ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಕೊಡುಗೆ ಅಪಾರ. ಸಮಾಜಕ್ಕೆ ತಮ್ಮನ್ನು ತಾವು ಸಂಪೂರ್ಣವಾಗಿ ಅರ್ಪಿಸಿಕೊಂಡ ಮಹಾನುಭಾವ’ ಎಂದು ಹೇಳಿದರು.</p>.<p>‘ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಸತಿ, ಅನ್ನ ಹಾಗೂ ವಿದ್ಯಾಭ್ಯಾಸಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಿದ್ದರು. ಈ ಮೂಲಕ ಶೈಕ್ಷಣಿಕ ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಗೆ ಕಾರಣರಾಗಿದ್ದರು’ ಎಂದು ಸ್ಮರಿಸಿದರು.</p>.<p>ಶರಣ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಮ.ಗು.ಸದಾನಂದಯ್ಯ, ‘12ನೇ ಶತಮಾನದ ದಾಸೋಹದ ಪರಿಕಲ್ಪನೆಯನ್ನು ಈ ನಾಡಿಗೆ ತಿಳಿಸಿಕೊಟ್ಟರು. ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷ ಎಂ.ಚಿನ್ನಸ್ವಾಮಿ, ಬರಡನಪುರ ಮಠದ ಪರಶಿವಮೂರ್ತಿ ಸ್ವಾಮೀಜಿ ಮಾತನಾಡಿದರು.</p>.<p>ಮುದ್ದು ಮಲ್ಲೇಶ, ಜಗದೀಶ್ ಬಿ ಚಿಕ್ಕಮಠ, ವಿದ್ಯಾರ್ಥಿ ನಿಲಯದ ಕಾರ್ಯದರ್ಶಿ ಮಹೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ಆಲನಳ್ಳಿಯ ಚಿತ್ಕಲ ಪ್ರತಿಷ್ಠಾನದ ಅಕ್ಕಮಹಾದೇವಿ ವಿದ್ಯಾರ್ಥಿ ನಿಲಯದಲ್ಲಿ ಶರಣ ಸಾಹಿತ್ಯ ಪರಿಷತ್ ನಗರ ಘಟಕದಿಂದ ಶನಿವಾರ ದತ್ತಿ ಕಾರ್ಯಕ್ರಮ ನಡೆಯಿತು.</p>.<p>ದತ್ತಿ ದಾನಿ ಎಂ.ಎ.ನೀಲಾಂಬಿಕ ಮಾತನಾಡಿ, ‘ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಕೊಡುಗೆ ಅಪಾರ. ಸಮಾಜಕ್ಕೆ ತಮ್ಮನ್ನು ತಾವು ಸಂಪೂರ್ಣವಾಗಿ ಅರ್ಪಿಸಿಕೊಂಡ ಮಹಾನುಭಾವ’ ಎಂದು ಹೇಳಿದರು.</p>.<p>‘ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಸತಿ, ಅನ್ನ ಹಾಗೂ ವಿದ್ಯಾಭ್ಯಾಸಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಿದ್ದರು. ಈ ಮೂಲಕ ಶೈಕ್ಷಣಿಕ ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಗೆ ಕಾರಣರಾಗಿದ್ದರು’ ಎಂದು ಸ್ಮರಿಸಿದರು.</p>.<p>ಶರಣ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಮ.ಗು.ಸದಾನಂದಯ್ಯ, ‘12ನೇ ಶತಮಾನದ ದಾಸೋಹದ ಪರಿಕಲ್ಪನೆಯನ್ನು ಈ ನಾಡಿಗೆ ತಿಳಿಸಿಕೊಟ್ಟರು. ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷ ಎಂ.ಚಿನ್ನಸ್ವಾಮಿ, ಬರಡನಪುರ ಮಠದ ಪರಶಿವಮೂರ್ತಿ ಸ್ವಾಮೀಜಿ ಮಾತನಾಡಿದರು.</p>.<p>ಮುದ್ದು ಮಲ್ಲೇಶ, ಜಗದೀಶ್ ಬಿ ಚಿಕ್ಕಮಠ, ವಿದ್ಯಾರ್ಥಿ ನಿಲಯದ ಕಾರ್ಯದರ್ಶಿ ಮಹೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>