<p><strong>ಮೈಸೂರು:</strong> ಇಲ್ಲಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಎಂಡಿಎ) ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಪ್ರಭಾರ ಆಯುಕ್ತರನ್ನಾಗಿ ಕೆ.ಆರ್. ರಕ್ಷಿತ್ ಅವರನ್ನು ನೇಮಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.</p>.<p>ಈಚೆಗಷ್ಟೇ ರಾಜ್ಯ ಸರ್ಕಾರವು ಎಂಡಿಎ ರಚನೆ ಮಾಡಿ ಅಧಿಕೃತ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೇ ಈ ನೇಮಕಾತಿ ಆದೇಶ ಹೊರಬಿದ್ದಿದೆ. ರಕ್ಷಿತ್ ಪ್ರಸ್ತುತ ಮೈಸೂರು ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<p>2014ರ ಕೆಎಎಸ್ ಬ್ಯಾಚ್ನ ಅಧಿಕಾರಿಯಾದ ರಕ್ಷಿತ್ ಇದಕ್ಕೂ ಮುನ್ನ ಸಕಲೇಶಪುರ, ಹರಿಹರ ಹಾಗೂ ಮೈಸೂರು ತಹಶೀಲ್ದಾರ್ ಆಗಿ ಹಾಗೂ ಬಿಬಿಎಂಪಿ ಸಹಾಯಕ ಆಯುಕ್ತರಾಗಿಯೂ ಕಾರ್ಯ ನಿರ್ವಹಿಸಿದ್ದರು.</p>.<p>ಆರೋಪ: ‘ಮುಡಾದಲ್ಲಿನ (ಈಗಿನ ಎಂಡಿಎ) ನಿವೇಶನಗಳ ಹಂಚಿಕೆ ಪ್ರಕರಣವು ಲೋಕಾಯುಕ್ತ ತನಿಖೆಯಲ್ಲಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಿತ್ ಅವರನ್ನು ಹಿಂಬಾಗಿಲಿನ ಮೂಲಕ ಆಯುಕ್ತರ ಸ್ಥಾನದಲ್ಲಿ ಕೂರಿಸಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ತಮ್ಮ ಫೇಸ್ಬುಕ್ ಖಾತೆಯಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಎಂಡಿಎ) ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಪ್ರಭಾರ ಆಯುಕ್ತರನ್ನಾಗಿ ಕೆ.ಆರ್. ರಕ್ಷಿತ್ ಅವರನ್ನು ನೇಮಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.</p>.<p>ಈಚೆಗಷ್ಟೇ ರಾಜ್ಯ ಸರ್ಕಾರವು ಎಂಡಿಎ ರಚನೆ ಮಾಡಿ ಅಧಿಕೃತ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೇ ಈ ನೇಮಕಾತಿ ಆದೇಶ ಹೊರಬಿದ್ದಿದೆ. ರಕ್ಷಿತ್ ಪ್ರಸ್ತುತ ಮೈಸೂರು ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<p>2014ರ ಕೆಎಎಸ್ ಬ್ಯಾಚ್ನ ಅಧಿಕಾರಿಯಾದ ರಕ್ಷಿತ್ ಇದಕ್ಕೂ ಮುನ್ನ ಸಕಲೇಶಪುರ, ಹರಿಹರ ಹಾಗೂ ಮೈಸೂರು ತಹಶೀಲ್ದಾರ್ ಆಗಿ ಹಾಗೂ ಬಿಬಿಎಂಪಿ ಸಹಾಯಕ ಆಯುಕ್ತರಾಗಿಯೂ ಕಾರ್ಯ ನಿರ್ವಹಿಸಿದ್ದರು.</p>.<p>ಆರೋಪ: ‘ಮುಡಾದಲ್ಲಿನ (ಈಗಿನ ಎಂಡಿಎ) ನಿವೇಶನಗಳ ಹಂಚಿಕೆ ಪ್ರಕರಣವು ಲೋಕಾಯುಕ್ತ ತನಿಖೆಯಲ್ಲಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಿತ್ ಅವರನ್ನು ಹಿಂಬಾಗಿಲಿನ ಮೂಲಕ ಆಯುಕ್ತರ ಸ್ಥಾನದಲ್ಲಿ ಕೂರಿಸಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ತಮ್ಮ ಫೇಸ್ಬುಕ್ ಖಾತೆಯಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>