<p><strong>ಧರ್ಮಾಪುರ</strong>: ಸಮೀಪದ ರತ್ನಪುರಿಯಲ್ಲಿ ಶನಿವಾರ ಆಂಜನೇಯ ಸ್ವಾಮಿ ಕೊಂಡೋತ್ಸವ, ಭಾನುವಾರ ಜಮಾಲ್ ಬೀಬಿ ಗಂಧೋತ್ಸವ ನಡೆಯಲಿದೆ.</p>.<p>ಗ್ರಾಮಸ್ಥರು ಕಳೆದ 62 ವರ್ಷಗಳಿಂದ ಎರಡೂ ಉತ್ಸವಗಳನ್ನು ಯಾವುದೇ ಗಲಾಟೆಗಳಿಲ್ಲದೇ ಆಚರಿಸಿಕೊಂಡು ಬರುತ್ತಿದ್ದಾರೆ.</p>.<p>ಹಿಂದೂ ಸಮುದಾಯದವರು ನಡೆಸುವ ಆಂಜನೇಯ ಉತ್ಸವ, ಕೊಂಡೋತ್ಸವ ಹಾಗೂ ಮೆರವಣಿಗೆಯಲ್ಲಿ ಮುಸ್ಲಿಮರು ಪಾಲ್ಗೊಳ್ಳುತ್ತಾರೆ. ಜಮಾಲ್ ಬೀಬಿ ಅಮ್ಮನವರ ಗಂಧೋತ್ಸವದಲ್ಲಿ ಹಿಂದೂಗಳು ಭಾಗವಹಿಸುತ್ತಾರೆ.</p>.<p>ಧರ್ಮಾಪುರದ ಗ್ರಾಮಸ್ಥರು ಶನಿವಾರ ಆಂಜನೇಯ ಸ್ವಾಮಿಯ ಕೊಂಡೋತ್ಸವ ನಡೆಸಿಕೊಡಲಿದ್ದಾರೆ. ಬೆಳಿಗ್ಗೆ 7ಕ್ಕೆ ದೇವಿ ಕೆರೆಯಿಂದ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿಕೊಂಡು 9 ಗಂಟೆಗೆ ಕೊಂಡೋತ್ಸವ ನಡೆಯಲಿದೆ. ನಂತರ ಮಹಾಮಂಗಳಾರತಿ ನಡೆಯಲಿದೆ. ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಗುತ್ತದೆ.</p>.<p><strong>ಭಾನುವಾರ ಉರುಸ್:</strong> ಸಮೀಪದ ಕುಡಿ ನೀರು ಮುದ್ದನಹಳ್ಳಿಯಿಂದ ಗಂಧವನ್ನು ಮೆರವಣಿಗೆಯಲ್ಲಿ ತಂದು, ಮಸೀದಿಗೆ ಪೂಜೆ ಸಲ್ಲಿಸಿ ಭಾನುವಾರ ರಾತ್ರಿ ಗಂಧೋತ್ಸವ ನಡೆಯಲಿದೆ.</p>.<p>ಜಾತ್ರೆ ಪ್ರಯುಕ್ತ ಶನಿವಾರ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಟೂರ್ನಿ, ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. </p>.<p>‘ರತ್ನಪುರಿಯಲ್ಲಿ ಎಲ್ಲಾ ಸಮುದಾಯದವರು ಅಣ್ಣ ತಮ್ಮಂದಿರಂತೆ ವಾಸಿಸುತ್ತಿದ್ದು, 60 ವರ್ಷಗಳಿಂದ ಸೌಹಾರ್ದದಿಂದ ಜಾತ್ರೆಯನ್ನು ನಡೆಸಿಕೊಂಡು ಬರುತ್ತಿದ್ದೇವೆ’ ಎಂದು ಆಂಜನೇಯ ಸ್ವಾಮಿ ಜಾತ್ರಾ ಸಮಿತಿ ಅಧ್ಯಕ್ಷ ಪ್ರಭಾಕರ್ ತಿಳಿಸಿದರು.</p>.<p>‘ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ ಹಾಗೂ ಜಮಾಲ್ ಬೀಬಿ ಅಮ್ಮನವರ ಗಂಧೋತ್ಸವದಲ್ಲಿ ಹಿಂದೂ ಹಾಗೂ ಮುಸ್ಲಿಮರು ಒಟ್ಟಾಗಿ ಭಾಗವಹಿಸಿ ಮಾದರಿಯಾಗಿದ್ದೇವೆ’ ಎಂದು ಜಮಾಲ್ ಬೇಬಿ ಅಮ್ಮನವರ ಸಮಿತಿ ಅಧ್ಯಕ್ಷ ಅಜ್ಗರ್ ಪಾಷ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಾಪುರ</strong>: ಸಮೀಪದ ರತ್ನಪುರಿಯಲ್ಲಿ ಶನಿವಾರ ಆಂಜನೇಯ ಸ್ವಾಮಿ ಕೊಂಡೋತ್ಸವ, ಭಾನುವಾರ ಜಮಾಲ್ ಬೀಬಿ ಗಂಧೋತ್ಸವ ನಡೆಯಲಿದೆ.</p>.<p>ಗ್ರಾಮಸ್ಥರು ಕಳೆದ 62 ವರ್ಷಗಳಿಂದ ಎರಡೂ ಉತ್ಸವಗಳನ್ನು ಯಾವುದೇ ಗಲಾಟೆಗಳಿಲ್ಲದೇ ಆಚರಿಸಿಕೊಂಡು ಬರುತ್ತಿದ್ದಾರೆ.</p>.<p>ಹಿಂದೂ ಸಮುದಾಯದವರು ನಡೆಸುವ ಆಂಜನೇಯ ಉತ್ಸವ, ಕೊಂಡೋತ್ಸವ ಹಾಗೂ ಮೆರವಣಿಗೆಯಲ್ಲಿ ಮುಸ್ಲಿಮರು ಪಾಲ್ಗೊಳ್ಳುತ್ತಾರೆ. ಜಮಾಲ್ ಬೀಬಿ ಅಮ್ಮನವರ ಗಂಧೋತ್ಸವದಲ್ಲಿ ಹಿಂದೂಗಳು ಭಾಗವಹಿಸುತ್ತಾರೆ.</p>.<p>ಧರ್ಮಾಪುರದ ಗ್ರಾಮಸ್ಥರು ಶನಿವಾರ ಆಂಜನೇಯ ಸ್ವಾಮಿಯ ಕೊಂಡೋತ್ಸವ ನಡೆಸಿಕೊಡಲಿದ್ದಾರೆ. ಬೆಳಿಗ್ಗೆ 7ಕ್ಕೆ ದೇವಿ ಕೆರೆಯಿಂದ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿಕೊಂಡು 9 ಗಂಟೆಗೆ ಕೊಂಡೋತ್ಸವ ನಡೆಯಲಿದೆ. ನಂತರ ಮಹಾಮಂಗಳಾರತಿ ನಡೆಯಲಿದೆ. ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಗುತ್ತದೆ.</p>.<p><strong>ಭಾನುವಾರ ಉರುಸ್:</strong> ಸಮೀಪದ ಕುಡಿ ನೀರು ಮುದ್ದನಹಳ್ಳಿಯಿಂದ ಗಂಧವನ್ನು ಮೆರವಣಿಗೆಯಲ್ಲಿ ತಂದು, ಮಸೀದಿಗೆ ಪೂಜೆ ಸಲ್ಲಿಸಿ ಭಾನುವಾರ ರಾತ್ರಿ ಗಂಧೋತ್ಸವ ನಡೆಯಲಿದೆ.</p>.<p>ಜಾತ್ರೆ ಪ್ರಯುಕ್ತ ಶನಿವಾರ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಟೂರ್ನಿ, ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. </p>.<p>‘ರತ್ನಪುರಿಯಲ್ಲಿ ಎಲ್ಲಾ ಸಮುದಾಯದವರು ಅಣ್ಣ ತಮ್ಮಂದಿರಂತೆ ವಾಸಿಸುತ್ತಿದ್ದು, 60 ವರ್ಷಗಳಿಂದ ಸೌಹಾರ್ದದಿಂದ ಜಾತ್ರೆಯನ್ನು ನಡೆಸಿಕೊಂಡು ಬರುತ್ತಿದ್ದೇವೆ’ ಎಂದು ಆಂಜನೇಯ ಸ್ವಾಮಿ ಜಾತ್ರಾ ಸಮಿತಿ ಅಧ್ಯಕ್ಷ ಪ್ರಭಾಕರ್ ತಿಳಿಸಿದರು.</p>.<p>‘ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ ಹಾಗೂ ಜಮಾಲ್ ಬೀಬಿ ಅಮ್ಮನವರ ಗಂಧೋತ್ಸವದಲ್ಲಿ ಹಿಂದೂ ಹಾಗೂ ಮುಸ್ಲಿಮರು ಒಟ್ಟಾಗಿ ಭಾಗವಹಿಸಿ ಮಾದರಿಯಾಗಿದ್ದೇವೆ’ ಎಂದು ಜಮಾಲ್ ಬೇಬಿ ಅಮ್ಮನವರ ಸಮಿತಿ ಅಧ್ಯಕ್ಷ ಅಜ್ಗರ್ ಪಾಷ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>