<p><strong>ಮೈಸೂರು</strong>: 'ನನ್ನ ವಿರುದ್ಧದ ಆರೋಪಗಳನ್ನು ಎದುರಿಸಲು ಸನ್ನದ್ಧನಾಗಿದ್ದೇನೆ. ರಾಜಕೀಯ ಹಾಗೂ ಕಾನೂನಿನ ಮೂಲಕ ಪ್ರತ್ಯುತ್ತರ ಕೊಡುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಇಲ್ಲಿನ ತಮ್ಮ ನಿವಾಸದ ಬಳಿ ಶನಿವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p><p>ಇಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಹಲವು ವಿಚಾರಗಳನ್ನು ಬಿಚ್ಚಿಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರಗಳನ್ನು ಜನರ ಮುಂದೆ ಇಡುತ್ತೇನೆ ಎಂದು ಹೇಳಿದರು.</p><p>ಬಿ.ವೈ.ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ , ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ್ ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಈಗಾಗಲೇ ಕೆಲವು ಹಗರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಆ ಬಗ್ಗೆ ಹೆಚ್ಚು ಮಾತನಾಡುತ್ತೇನೆ. ಇನ್ನೂ ಕೆಲವು ಹಗರಣಗಳು ಬಾಕಿ ಇವೆ ಎಂದರು.</p><p>ಬಿಜೆಪಿ- ಜೆಡಿಎಸ್ ನಾಯಕರ ಆರೋಪಗಳನ್ನು ಎದುರಿಸಲು ಸಿದ್ಧನಿದ್ದೇನೆ. ಬಿಜೆಪಿ- ಜೆಡಿಎಸ್ನವರು ಪಾದಯಾತ್ರೆ ಮಾಡಿದ್ದಕ್ಕೆ ನಾವು ಜನಾಂದೋಲನ ಸಮಾವೇಶ</p><p>ಮಾಡಿದೆವು. ಅವರು ಮಾಡುತ್ತಿರುವ ಆರೋಪ ಸುಳ್ಳು ಎಂದು ತಿಳಿಸಲು ಜನಾಂದೋಲನ ಸಮಾವೇಶ ನಡೆಸಿದೆವು. ನನಗೆ ಮಸಿ ಬಳಿಯಲು ವಿರೋಧ ಪಕ್ಷದವರು ಪ್ರಯತ್ನ ಪಡುತ್ತಿದ್ದಾರೆ. ರಾಜ್ಯದ ಜನರ ಆಶೀರ್ವಾದದಿಂದ ಬಂದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ.</p><p>ನನಗೆ ಮಸಿ ಬಳಿದರೆ ರಾಜಕೀಯವಾಗಿ ಅನುಕೂಲ ಆಗುತ್ತದೆ ಎನ್ನುವ ಭ್ರಮೆಯಲ್ಲಿ ವಿರೋಧ ಪಕ್ಷದವರು</p><p>ಇದ್ದಾರೆ. ಅವರ ಹಗರಣಗಳು ಬಹಳಷ್ಟಿವೆ. ಎಲ್ಲವನ್ನೂ ಬಿಚ್ಚಿಡುತ್ತೇವೆ. ಯಾರೆಲ್ಲ ತಪ್ಪಿತಸ್ಥರು ಇದ್ದಾರೆಯೋ ಅವರೆಲರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.</p>.<p>ಚಾಮುಂಡೇಶ್ವರಿ ದರ್ಶನ ಪಡೆದ ಸಿದ್ದರಾಮಯ್ಯ</p><p>ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರಾವಣ ಶನಿವಾರ ಪ್ರಯುಕ್ತ ಇಲ್ಲಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.</p><p>ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: 'ನನ್ನ ವಿರುದ್ಧದ ಆರೋಪಗಳನ್ನು ಎದುರಿಸಲು ಸನ್ನದ್ಧನಾಗಿದ್ದೇನೆ. ರಾಜಕೀಯ ಹಾಗೂ ಕಾನೂನಿನ ಮೂಲಕ ಪ್ರತ್ಯುತ್ತರ ಕೊಡುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಇಲ್ಲಿನ ತಮ್ಮ ನಿವಾಸದ ಬಳಿ ಶನಿವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p><p>ಇಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಹಲವು ವಿಚಾರಗಳನ್ನು ಬಿಚ್ಚಿಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರಗಳನ್ನು ಜನರ ಮುಂದೆ ಇಡುತ್ತೇನೆ ಎಂದು ಹೇಳಿದರು.</p><p>ಬಿ.ವೈ.ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ , ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ್ ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಈಗಾಗಲೇ ಕೆಲವು ಹಗರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಆ ಬಗ್ಗೆ ಹೆಚ್ಚು ಮಾತನಾಡುತ್ತೇನೆ. ಇನ್ನೂ ಕೆಲವು ಹಗರಣಗಳು ಬಾಕಿ ಇವೆ ಎಂದರು.</p><p>ಬಿಜೆಪಿ- ಜೆಡಿಎಸ್ ನಾಯಕರ ಆರೋಪಗಳನ್ನು ಎದುರಿಸಲು ಸಿದ್ಧನಿದ್ದೇನೆ. ಬಿಜೆಪಿ- ಜೆಡಿಎಸ್ನವರು ಪಾದಯಾತ್ರೆ ಮಾಡಿದ್ದಕ್ಕೆ ನಾವು ಜನಾಂದೋಲನ ಸಮಾವೇಶ</p><p>ಮಾಡಿದೆವು. ಅವರು ಮಾಡುತ್ತಿರುವ ಆರೋಪ ಸುಳ್ಳು ಎಂದು ತಿಳಿಸಲು ಜನಾಂದೋಲನ ಸಮಾವೇಶ ನಡೆಸಿದೆವು. ನನಗೆ ಮಸಿ ಬಳಿಯಲು ವಿರೋಧ ಪಕ್ಷದವರು ಪ್ರಯತ್ನ ಪಡುತ್ತಿದ್ದಾರೆ. ರಾಜ್ಯದ ಜನರ ಆಶೀರ್ವಾದದಿಂದ ಬಂದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ.</p><p>ನನಗೆ ಮಸಿ ಬಳಿದರೆ ರಾಜಕೀಯವಾಗಿ ಅನುಕೂಲ ಆಗುತ್ತದೆ ಎನ್ನುವ ಭ್ರಮೆಯಲ್ಲಿ ವಿರೋಧ ಪಕ್ಷದವರು</p><p>ಇದ್ದಾರೆ. ಅವರ ಹಗರಣಗಳು ಬಹಳಷ್ಟಿವೆ. ಎಲ್ಲವನ್ನೂ ಬಿಚ್ಚಿಡುತ್ತೇವೆ. ಯಾರೆಲ್ಲ ತಪ್ಪಿತಸ್ಥರು ಇದ್ದಾರೆಯೋ ಅವರೆಲರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.</p>.<p>ಚಾಮುಂಡೇಶ್ವರಿ ದರ್ಶನ ಪಡೆದ ಸಿದ್ದರಾಮಯ್ಯ</p><p>ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರಾವಣ ಶನಿವಾರ ಪ್ರಯುಕ್ತ ಇಲ್ಲಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.</p><p>ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>