<p><strong>ಮೈಸೂರು: </strong>ಬೆಂಗಳೂರಿನಲ್ಲಿ ಕೋವಿಡ್–19 ನಿಯಂತ್ರಿಸಲಿಕ್ಕಾಗಿ ಮೈಸೂರು, ಕೊಡಗು, ಹಾಸನ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನು ರಾಜ್ಯ ಸರ್ಕಾರ ರಾಜಧಾನಿಗೆ ನಿಯೋಜಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಪರವಾಗಿ ಕುರುಬೂರು ಶಾಂತಕುಮಾರ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.</p>.<p>‘ಇದೀಗ ರಾಜ್ಯದ ಎಲ್ಲೆಡೆಯೂ ಕೊರೊನಾ ವೈರಸ್ ಸೋಂಕು ಹರಡುವುದು ಹೆಚ್ಚುತ್ತಿದೆ. ಇಂತಹ ಹೊತ್ತಲ್ಲಿ ತಾಲ್ಲೂಕು ಆಸ್ಪತ್ರೆಗಳಲ್ಲೂ ಕೋವಿಡ್ಗೆ ಚಿಕಿತ್ಸೆ ಕೊಡುವುದು ತುರ್ತಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬೆಂಗಳೂರಿಗೆ ನಿಯೋಜಿಸಿದರೆ, ಈ ಜಿಲ್ಲೆಗಳಲ್ಲಿ ಸಮಸ್ಯೆ ಬಿಗಡಾಯಿಸಲಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಬೆಂಗಳೂರಿಗರ ಬಗ್ಗೆಯೇ ರಾಜ್ಯ ಸರ್ಕಾರ ಹೆಚ್ಚಿನ ಕಾಳಜಿ ತೋರಿದಂತಾಗಿದೆ. ಗ್ರಾಮೀಣ ಜನರ ರಕ್ಷಣೆಗೆ ಯಾವೊಂದು ವ್ಯವಸ್ಥೆಯೂ ಗೋಚರಿಸದಾಗಿದೆ. ಬಿಕ್ಕಟ್ಟಿನ ಸಂದರ್ಭದಲ್ಲಿ ಮತ್ತಷ್ಟು ಸಮಸ್ಯೆ ಬಿಗಡಾಯಿಸದಂತೆ ಕ್ರಮ ಜರುಗಿಸಬೇಕು. ಸಚಿವರನ್ನು ಬೆಂಗಳೂರು ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು’ ಎಂದು ಕುರಬೂರು ಕೋರಿದ್ದಾರೆ.</p>.<p>ಕೋವಿಡ್ನ ಸಂಕಷ್ಟದಲ್ಲಾದರೂ ಹಿಂದಿನ ವರ್ಷದ ಬೆಳೆ ವಿಮೆಯನ್ನು ರಾಜ್ಯ ಸರ್ಕಾರ ವಿಮಾ ಕಂಪನಿಗಳಿಂದ ಕೊಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಬೆಂಗಳೂರಿನಲ್ಲಿ ಕೋವಿಡ್–19 ನಿಯಂತ್ರಿಸಲಿಕ್ಕಾಗಿ ಮೈಸೂರು, ಕೊಡಗು, ಹಾಸನ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನು ರಾಜ್ಯ ಸರ್ಕಾರ ರಾಜಧಾನಿಗೆ ನಿಯೋಜಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಪರವಾಗಿ ಕುರುಬೂರು ಶಾಂತಕುಮಾರ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.</p>.<p>‘ಇದೀಗ ರಾಜ್ಯದ ಎಲ್ಲೆಡೆಯೂ ಕೊರೊನಾ ವೈರಸ್ ಸೋಂಕು ಹರಡುವುದು ಹೆಚ್ಚುತ್ತಿದೆ. ಇಂತಹ ಹೊತ್ತಲ್ಲಿ ತಾಲ್ಲೂಕು ಆಸ್ಪತ್ರೆಗಳಲ್ಲೂ ಕೋವಿಡ್ಗೆ ಚಿಕಿತ್ಸೆ ಕೊಡುವುದು ತುರ್ತಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬೆಂಗಳೂರಿಗೆ ನಿಯೋಜಿಸಿದರೆ, ಈ ಜಿಲ್ಲೆಗಳಲ್ಲಿ ಸಮಸ್ಯೆ ಬಿಗಡಾಯಿಸಲಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಬೆಂಗಳೂರಿಗರ ಬಗ್ಗೆಯೇ ರಾಜ್ಯ ಸರ್ಕಾರ ಹೆಚ್ಚಿನ ಕಾಳಜಿ ತೋರಿದಂತಾಗಿದೆ. ಗ್ರಾಮೀಣ ಜನರ ರಕ್ಷಣೆಗೆ ಯಾವೊಂದು ವ್ಯವಸ್ಥೆಯೂ ಗೋಚರಿಸದಾಗಿದೆ. ಬಿಕ್ಕಟ್ಟಿನ ಸಂದರ್ಭದಲ್ಲಿ ಮತ್ತಷ್ಟು ಸಮಸ್ಯೆ ಬಿಗಡಾಯಿಸದಂತೆ ಕ್ರಮ ಜರುಗಿಸಬೇಕು. ಸಚಿವರನ್ನು ಬೆಂಗಳೂರು ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು’ ಎಂದು ಕುರಬೂರು ಕೋರಿದ್ದಾರೆ.</p>.<p>ಕೋವಿಡ್ನ ಸಂಕಷ್ಟದಲ್ಲಾದರೂ ಹಿಂದಿನ ವರ್ಷದ ಬೆಳೆ ವಿಮೆಯನ್ನು ರಾಜ್ಯ ಸರ್ಕಾರ ವಿಮಾ ಕಂಪನಿಗಳಿಂದ ಕೊಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>