<p><strong>ಪಿರಿಯಾಪಟ್ಟಣ:</strong> ತಾಲ್ಲೂಕಿನ ಆಲನಹಳ್ಳಿಯ ಅಂಬೇಡ್ಕರ್ ಕಾಲೋನಿಗೆ ಹೊಂದಿಕೊಂಡಿರುವ ರಾಜಕಾಲುವೆ ಒತ್ತುವರಿ ತೆರವಿಗೆ ಗುರುವಾರ ಕಂದಾಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<p>ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ರಾಜಕಾಲುವೆಯಲ್ಲಿ ಬರುವ ನೀರು, ಒತ್ತುವರಿಯಿಂದಾಗಿ ಕಾಲೋನಿಯ ಮನೆಗಳಿಗೆ ನುಗ್ಗಿ ಅಪಾರ ತೊಂದರೆ ನೀಡಿತ್ತು.</p>.<p>ಗ್ರಾಮಸ್ಥರು ಈ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಅವರಿಗೆ ದೂರು ನೀಡಿದ್ದರು. ತಹಶೀಲ್ದಾರ್ ಕೆ. ಸುರೇಂದ್ರ ಮೂರ್ತಿ ಅವರು ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳುವತೆ ಆದೇಶಿಸಿದ್ದರು.</p>.<p>ಸರ್ವೆ ಇಲಾಖೆ ಅಧಿಕಾರಿ ಗಿರೀಶ್, ಆರ್ ಐ ಪಾಂಡುರಂಗ, ಹುಣಸವಾಡಿ ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ್, ಗ್ರಾಮ ಲೆಕ್ಕಿಗರಾದ ಸೋಮಶೇಖರ್ ಮತ್ತು ಸಿದ್ದರಾಜು, ಸಿಬ್ಬಂದಿ ಮಂಜು ದೊಡ್ಡಯ್ಯ ಅವರ ತಂಡ ಒತ್ತುವರಿ ಆಗಿರುವ ಸರ್ಕಾರಿ ಕರಾಬು ಜಾಗವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿ ಗ್ರಾಮಕ್ಕೆ ಮಳೆ ನೀರು ಹೋಗುವುದನ್ನು ತಡೆಗಟ್ಟಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ:</strong> ತಾಲ್ಲೂಕಿನ ಆಲನಹಳ್ಳಿಯ ಅಂಬೇಡ್ಕರ್ ಕಾಲೋನಿಗೆ ಹೊಂದಿಕೊಂಡಿರುವ ರಾಜಕಾಲುವೆ ಒತ್ತುವರಿ ತೆರವಿಗೆ ಗುರುವಾರ ಕಂದಾಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<p>ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ರಾಜಕಾಲುವೆಯಲ್ಲಿ ಬರುವ ನೀರು, ಒತ್ತುವರಿಯಿಂದಾಗಿ ಕಾಲೋನಿಯ ಮನೆಗಳಿಗೆ ನುಗ್ಗಿ ಅಪಾರ ತೊಂದರೆ ನೀಡಿತ್ತು.</p>.<p>ಗ್ರಾಮಸ್ಥರು ಈ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಅವರಿಗೆ ದೂರು ನೀಡಿದ್ದರು. ತಹಶೀಲ್ದಾರ್ ಕೆ. ಸುರೇಂದ್ರ ಮೂರ್ತಿ ಅವರು ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳುವತೆ ಆದೇಶಿಸಿದ್ದರು.</p>.<p>ಸರ್ವೆ ಇಲಾಖೆ ಅಧಿಕಾರಿ ಗಿರೀಶ್, ಆರ್ ಐ ಪಾಂಡುರಂಗ, ಹುಣಸವಾಡಿ ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ್, ಗ್ರಾಮ ಲೆಕ್ಕಿಗರಾದ ಸೋಮಶೇಖರ್ ಮತ್ತು ಸಿದ್ದರಾಜು, ಸಿಬ್ಬಂದಿ ಮಂಜು ದೊಡ್ಡಯ್ಯ ಅವರ ತಂಡ ಒತ್ತುವರಿ ಆಗಿರುವ ಸರ್ಕಾರಿ ಕರಾಬು ಜಾಗವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಿ ಗ್ರಾಮಕ್ಕೆ ಮಳೆ ನೀರು ಹೋಗುವುದನ್ನು ತಡೆಗಟ್ಟಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>