<p><strong>ಮೈಸೂರು</strong>: ನಗರದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮನಪರಿವರ್ತನೆಗೆ ಸಂಬಂಧಿಸಿದಂತೆ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಕ್ಕಾಗಿ ನಿರ್ಮಿಸಿರುವ ಧ್ಯಾನ ಮಂದಿರವನ್ನು ನವೀಕರಿಸಲಾಗಿದ್ದು, ಶಾಸಕ ಎಲ್.ನಾಗೇಂದ್ರ ಈಚೆಗೆ ಉದ್ಘಾಟಿಸಿದರು.</p>.<p>ಇದರೊಂದಿಗೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಧ್ಯಾನ, ಯೋಗ ಮೊದಲಾದ ಕಾರ್ಯಕ್ರಮಗಳನ್ನು ಪುನರಾರಂಭಿಸಲಾಗಿದೆ. ಈ ಚಟುವಟಿಕೆಗಳು, ಕೊರೊನಾ ಸೋಂಕು ಕಾಣಿಸಿಕೊಂಡಾಗಿನಿಂದ ಸ್ಥಗಿತಗೊಂಡಿದ್ದವು.</p>.<p>22 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಧ್ಯಾನ ಮಂದಿರವನ್ನು ಲಯನ್ಸ್ ಕ್ಲಬ್ ನೆರವಿನಿಂದ ನವೀಕರಿಸಲಾಗಿದೆ. ಈಶ್ವರೀಯ ವಿಶ್ವವಿದ್ಯಾಲಯದ ಸ್ವಯಂಸೇವಕರು ಧ್ಯಾನ ತರಬೇತಿ ನಡೆಸಿಕೊಡುತ್ತಿದ್ದಾರೆ.</p>.<p>‘ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದವರು ಕೈದಿಗಳ ಮನಪರಿವರ್ತನೆಗೆ ಪ್ರಯತ್ನಿಸುತ್ತಿರುವುದು ಶ್ಲಾಘನೀಯ. ಇದೊಂದು ವಿಶೇಷ ಸೇವೆಯಾಗಿದೆ. ಇದನ್ನು ಕೈದಿಗಳು ಸದ್ಬಳಕೆ ಮಾಡಿಕೊಂಡು ಸನ್ನಡತೆ ಬೆಳೆಸಿಕೊಳ್ಳಬೇಕು’ ಎಂದು ನಾಗೇಂದ್ರ ತಿಳಿಸಿದರು.</p>.<p>‘ಧ್ಯಾನ, ಪ್ರಾಣಾಯಾಮ ಹಾಗೂ ಯೋಗದಲ್ಲಿ ಭಾಗವಹಿಸಿದ ಕೆಲವು ಕೈದಿಗಳಲ್ಲಿ ಮನಪರಿವರ್ತನೆ ಆಗಿರುವುದನ್ನು ಗುರುತಿಸಿದ್ದೇವೆ’ ಎಂದು ಕೇಂದ್ರ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ದಿವ್ಯಶ್ರೀ ಹೇಳಿದರು.</p>.<p>ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯ ಸಂಯೋಜಕಿ ಲಕ್ಷ್ಮಿ, ಡಾ.ಸಂತೋಷ್ ರಂಗನಾಥ್, ಶಾರದಾ ಗುರು, ವೀರಂ ಸಿಂಗ್, ಸತೀಶ, ಆತ್ಮಾನಂದ, ಮಣಿ, ಉಮೇಶ್, ಜಗದೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ನಗರದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮನಪರಿವರ್ತನೆಗೆ ಸಂಬಂಧಿಸಿದಂತೆ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಕ್ಕಾಗಿ ನಿರ್ಮಿಸಿರುವ ಧ್ಯಾನ ಮಂದಿರವನ್ನು ನವೀಕರಿಸಲಾಗಿದ್ದು, ಶಾಸಕ ಎಲ್.ನಾಗೇಂದ್ರ ಈಚೆಗೆ ಉದ್ಘಾಟಿಸಿದರು.</p>.<p>ಇದರೊಂದಿಗೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಧ್ಯಾನ, ಯೋಗ ಮೊದಲಾದ ಕಾರ್ಯಕ್ರಮಗಳನ್ನು ಪುನರಾರಂಭಿಸಲಾಗಿದೆ. ಈ ಚಟುವಟಿಕೆಗಳು, ಕೊರೊನಾ ಸೋಂಕು ಕಾಣಿಸಿಕೊಂಡಾಗಿನಿಂದ ಸ್ಥಗಿತಗೊಂಡಿದ್ದವು.</p>.<p>22 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಧ್ಯಾನ ಮಂದಿರವನ್ನು ಲಯನ್ಸ್ ಕ್ಲಬ್ ನೆರವಿನಿಂದ ನವೀಕರಿಸಲಾಗಿದೆ. ಈಶ್ವರೀಯ ವಿಶ್ವವಿದ್ಯಾಲಯದ ಸ್ವಯಂಸೇವಕರು ಧ್ಯಾನ ತರಬೇತಿ ನಡೆಸಿಕೊಡುತ್ತಿದ್ದಾರೆ.</p>.<p>‘ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದವರು ಕೈದಿಗಳ ಮನಪರಿವರ್ತನೆಗೆ ಪ್ರಯತ್ನಿಸುತ್ತಿರುವುದು ಶ್ಲಾಘನೀಯ. ಇದೊಂದು ವಿಶೇಷ ಸೇವೆಯಾಗಿದೆ. ಇದನ್ನು ಕೈದಿಗಳು ಸದ್ಬಳಕೆ ಮಾಡಿಕೊಂಡು ಸನ್ನಡತೆ ಬೆಳೆಸಿಕೊಳ್ಳಬೇಕು’ ಎಂದು ನಾಗೇಂದ್ರ ತಿಳಿಸಿದರು.</p>.<p>‘ಧ್ಯಾನ, ಪ್ರಾಣಾಯಾಮ ಹಾಗೂ ಯೋಗದಲ್ಲಿ ಭಾಗವಹಿಸಿದ ಕೆಲವು ಕೈದಿಗಳಲ್ಲಿ ಮನಪರಿವರ್ತನೆ ಆಗಿರುವುದನ್ನು ಗುರುತಿಸಿದ್ದೇವೆ’ ಎಂದು ಕೇಂದ್ರ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ದಿವ್ಯಶ್ರೀ ಹೇಳಿದರು.</p>.<p>ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯ ಸಂಯೋಜಕಿ ಲಕ್ಷ್ಮಿ, ಡಾ.ಸಂತೋಷ್ ರಂಗನಾಥ್, ಶಾರದಾ ಗುರು, ವೀರಂ ಸಿಂಗ್, ಸತೀಶ, ಆತ್ಮಾನಂದ, ಮಣಿ, ಉಮೇಶ್, ಜಗದೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>