ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಕಾಲದಲ್ಲಿ ಸಾಲ ಮರುಪಾವತಿಸಿ’

ಶಿರಮಳ್ಳಿ ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಸಭೆ
Published 26 ಸೆಪ್ಟೆಂಬರ್ 2023, 5:13 IST
Last Updated 26 ಸೆಪ್ಟೆಂಬರ್ 2023, 5:13 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ನಂಜನಗೂಡು: ‘ರೈತರು ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರು ಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು’ ಎಂದು ಸಂಘದ ಅಧ್ಯಕ್ಷ ಎಚ್.ಎಸ್ ದೇವಣ್ಣ ತಿಳಿಸಿದರು.

ತಾಲ್ಲೂಕಿನ ಶಿರಮಳ್ಳಿ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

‘ಸಕಾಲದಲ್ಲಿ ಸಾಲ ಮರುಪಾವತಿ ಮಾಡುವುದರಿಂದ ಉಳಿದ ಸದಸ್ಯರಿಗೆ ಸಾಲ ಸೌಲಭ್ಯ ನೀಡಲು ಅನುಕೂಲವಾಗುತ್ತದೆ. ಸಂಘದಿಂದ ಸಿಗುವ ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿ ಎಸ್ .ಎಂ ಮಲ್ಲಿಕಾರ್ಜುನ ಸ್ವಾಮಿ, ಉಪಾಧ್ಯಕ್ಷ ಸ್ವಾಮಿ ಶೆಟ್ಟಿ, ನಿರ್ದೇಶಕರುಗಳಾದ ಎಸ್. ಎಸ್ ಮಹೇಶ್, ಎಸ್. ಶಿವಪಾದು, ಎನ್ .ಮಹದೇವು, ಎಸ್. ಪಿ ಸಂಗಪ್ಪ, ಗಣೇಶ್, ಸಿದ್ದನಾಯ್ಕ, ಬೀರೇಗೌಡ, ವಿಜಯಾಂಬ, ಸುಂದ್ರಮ್ಮ, ಗ್ರಾ.ಪಂ ಸದಸ್ಯ ಪ್ರಭು, ಎಂ. ಶಿವನಂಜಪ್ಪ, ಭೋಗನಂಜಪ್ಪ, ವಿರೂಪಾಕ್ಷಪ್ಪ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT