<p><strong>ಮೈಸೂರು:</strong> ಇಲ್ಲಿನ ಫೈಯರ್ಬ್ರಿಗೇಡ್ ವೃತ್ತಕ್ಕೆ ವಿಶ್ವೇಶತೀರ್ಥ ಸ್ವಾಮೀಜಿ ಅವರ ಹೆಸರಿಡಬೇಕು ಹಾಗೂ ಇವರ ಸ್ಮಾರಕವಾಗಿ ಬೆಂಗಳೂರಿನಲ್ಲಿ ವರ್ಷಪೂರ್ತಿ ತೆರೆದಿರುವಂತಹ ಗ್ರಂಥಾಲಯ ಸ್ಥಾಪಿಸಬೇಕು ಎಂದು ಲೇಖಕ ಎಸ್.ನಾಗರಾಜ ಒತ್ತಾಯಿಸಿದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಶ್ರೀ ರಾಘವೇಂದ್ರ ಪ್ರಕಾಶನದ ವತಿಯಿಂದ ಶುಕ್ರವಾರ ನಡೆದ ತಮ್ಮ ‘ಯುಗದ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಮಾಜ ಸೇವಕ ರಘುರಾಂ ವಾಜಪೇಯಿ ಮಾತನಾಡಿ, ‘ಮೈಸೂರಿನಲ್ಲಿ ಪ್ರಮುಖ ರಸ್ತೆಯೊಂದಕ್ಕೆ ಶ್ರೀಗಳ ಹೆಸರಿಡಬೇಕು ಎಂದು ಈಗಾಗಲೇ ಮನವಿ ಮಾಡಲಾಗಿದೆ. ಅವರು ನಿಧನರಾಗಿ ವರ್ಷವಾಗುತ್ತಿರುವ ಹೊತ್ತಿನಲ್ಲಿ ಅವರ ನೆನಪು ಚಿರಸ್ಥಾಯಿಯಾಗಿ ಉಳಿಯಲು ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅವರು ವಿಶ್ವೇಶತೀರ್ಥ ಸ್ವಾಮೀಜಿ ಅವರ ಆದರ್ಶಗಳನ್ನು ಕುರಿತು ಮಾತನಾಡಿದರು. ಸಾಮಾಜಿಕ ಹೊಣೆಗಾರಿಕೆ ಅವರ ಪ್ರತಿ ಮಾತಿನಲ್ಲಿಯೂ ಇತ್ತು ಎಂದು ಶ್ಲಾಘಿಸಿದರು.</p>.<p>ಇದಕ್ಕೂ ಮುನ್ನ ಉದ್ಯಮಿ ಎಂ.ಕೆ.ಪುರಾಣಿಕ ‘ಯುಗದ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ’ ಪುಸ್ತಕ ಬಿಡುಗಡೆ ಮಾಡಿದರು. ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಚಿಂತಕ ಮಡ್ಡೀಕೆರೆ ಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಫೈಯರ್ಬ್ರಿಗೇಡ್ ವೃತ್ತಕ್ಕೆ ವಿಶ್ವೇಶತೀರ್ಥ ಸ್ವಾಮೀಜಿ ಅವರ ಹೆಸರಿಡಬೇಕು ಹಾಗೂ ಇವರ ಸ್ಮಾರಕವಾಗಿ ಬೆಂಗಳೂರಿನಲ್ಲಿ ವರ್ಷಪೂರ್ತಿ ತೆರೆದಿರುವಂತಹ ಗ್ರಂಥಾಲಯ ಸ್ಥಾಪಿಸಬೇಕು ಎಂದು ಲೇಖಕ ಎಸ್.ನಾಗರಾಜ ಒತ್ತಾಯಿಸಿದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಶ್ರೀ ರಾಘವೇಂದ್ರ ಪ್ರಕಾಶನದ ವತಿಯಿಂದ ಶುಕ್ರವಾರ ನಡೆದ ತಮ್ಮ ‘ಯುಗದ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಮಾಜ ಸೇವಕ ರಘುರಾಂ ವಾಜಪೇಯಿ ಮಾತನಾಡಿ, ‘ಮೈಸೂರಿನಲ್ಲಿ ಪ್ರಮುಖ ರಸ್ತೆಯೊಂದಕ್ಕೆ ಶ್ರೀಗಳ ಹೆಸರಿಡಬೇಕು ಎಂದು ಈಗಾಗಲೇ ಮನವಿ ಮಾಡಲಾಗಿದೆ. ಅವರು ನಿಧನರಾಗಿ ವರ್ಷವಾಗುತ್ತಿರುವ ಹೊತ್ತಿನಲ್ಲಿ ಅವರ ನೆನಪು ಚಿರಸ್ಥಾಯಿಯಾಗಿ ಉಳಿಯಲು ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅವರು ವಿಶ್ವೇಶತೀರ್ಥ ಸ್ವಾಮೀಜಿ ಅವರ ಆದರ್ಶಗಳನ್ನು ಕುರಿತು ಮಾತನಾಡಿದರು. ಸಾಮಾಜಿಕ ಹೊಣೆಗಾರಿಕೆ ಅವರ ಪ್ರತಿ ಮಾತಿನಲ್ಲಿಯೂ ಇತ್ತು ಎಂದು ಶ್ಲಾಘಿಸಿದರು.</p>.<p>ಇದಕ್ಕೂ ಮುನ್ನ ಉದ್ಯಮಿ ಎಂ.ಕೆ.ಪುರಾಣಿಕ ‘ಯುಗದ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ’ ಪುಸ್ತಕ ಬಿಡುಗಡೆ ಮಾಡಿದರು. ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಚಿಂತಕ ಮಡ್ಡೀಕೆರೆ ಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>