ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒತ್ತುವರಿ ತೆರವು ಮಾಡಿದರೂ ಮತ್ತೆ ಹೊಸ ಒತ್ತುವರಿ ಆಗುತ್ತಿದೆ. ಹಿಂದಿನ ಸರ್ಕಾರಗಳು ಕೆಲ ದಿನ ಮಾತ್ರ ಕಾರ್ಯಾಚರಣೆ ನಡೆಸುತ್ತಿದ್ದವು. ಆದರೆ, ಬಿಜೆಪಿ ಸರ್ಕಾರ ಕಠಿಣ ಕ್ರಮವಹಿಸಿದೆ. ಕಾರ್ಯಾಚರಣೆ ಸಂಬಂಧ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದು, ಕೇವಿಯಟ್ ಸಲ್ಲಿಸಲು ಅಡ್ವೊಕೇಟ್ ಜನರಲ್ ಜೊತೆಯೂ ಚರ್ಚಿಸಲಾಗಿದೆ’ ಎಂದರು.