<p><strong>ಕೆ.ಆರ್.ನಗರ:</strong> ಭತ್ತದ ಬೆಳೆಗೆ ಕೀಟಭಾದೆ, ಷೋಷಕಾಂಶಗಳ ಕೊರತೆ ಎದುರಾಗಿದ್ದು ರೈತರು ಸೂಕ್ತ ನಿರ್ವಹಣಾ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಜೆ. ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ವ್ಯಾಪ್ತಿಯಲ್ಲಿ ಭತ್ತ ಬಿತ್ತನೆ ಕಾರ್ಯ ಸಂಪೂರ್ಣವಾಗಿದೆ. ಈ ಬಾರಿ 20 ರಿಂದ 22 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಬೆಳೆ ಪ್ರಾರಂಭಿಕ ಹಂತದಲ್ಲಿದ್ದು, ಬಹುತೇಕ ರೈತರು ಹೈಬ್ರಿಡ್ ಭತ್ತದ ತಳಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.</p>.<p>ನಾಟಿ ಕಾರ್ಯಕ್ಕೆ ಬೇಕಾದ ಬಿತ್ತನೆ, ರಸಗೊಬ್ಬರ ಹಾಗೂ ಲಘು ಪೋಷಕಾಂಶಗಳ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿದ್ದರಿಂದ ನಾಟಿ ಕಾರ್ಯ ನಿರಾತಂಕವಾಗಿ ನಡೆದಿದೆ. ಭತ್ತದ ಬೆಳೆ ಪ್ರಾರಂಭಿಕ ಹಂತದಲ್ಲಿದ್ದು, ಬೆಳೆಗೆ ಕೆಲವು ಕೀಟಭಾದೆ ಹಾಗೂ ಷೋಷಕಾಂಶಗಳ ಕೊರತೆ ಎದುರಾಗಿದ್ದು, ರೈತರು ಈ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.</p>.<p>ಬೆಳೆಗಳಲ್ಲಿ ರೋಗ ಭಾದೆ ಕಂಡು ಬಂದಲ್ಲಿ ರೈತರು ನೇರವಾಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಪೀಡೆನಾಶಕಗಳನ್ನು ಬಳಸಬೇಕು. ಮೋಡ ಕವಿದ ವಾತಾವರಣ ಇದ್ದರೆ ಸಿಂಪಡಣೆ ಮಾಡಬಾರದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ನಗರ:</strong> ಭತ್ತದ ಬೆಳೆಗೆ ಕೀಟಭಾದೆ, ಷೋಷಕಾಂಶಗಳ ಕೊರತೆ ಎದುರಾಗಿದ್ದು ರೈತರು ಸೂಕ್ತ ನಿರ್ವಹಣಾ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಜೆ. ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ವ್ಯಾಪ್ತಿಯಲ್ಲಿ ಭತ್ತ ಬಿತ್ತನೆ ಕಾರ್ಯ ಸಂಪೂರ್ಣವಾಗಿದೆ. ಈ ಬಾರಿ 20 ರಿಂದ 22 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಬೆಳೆ ಪ್ರಾರಂಭಿಕ ಹಂತದಲ್ಲಿದ್ದು, ಬಹುತೇಕ ರೈತರು ಹೈಬ್ರಿಡ್ ಭತ್ತದ ತಳಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.</p>.<p>ನಾಟಿ ಕಾರ್ಯಕ್ಕೆ ಬೇಕಾದ ಬಿತ್ತನೆ, ರಸಗೊಬ್ಬರ ಹಾಗೂ ಲಘು ಪೋಷಕಾಂಶಗಳ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿದ್ದರಿಂದ ನಾಟಿ ಕಾರ್ಯ ನಿರಾತಂಕವಾಗಿ ನಡೆದಿದೆ. ಭತ್ತದ ಬೆಳೆ ಪ್ರಾರಂಭಿಕ ಹಂತದಲ್ಲಿದ್ದು, ಬೆಳೆಗೆ ಕೆಲವು ಕೀಟಭಾದೆ ಹಾಗೂ ಷೋಷಕಾಂಶಗಳ ಕೊರತೆ ಎದುರಾಗಿದ್ದು, ರೈತರು ಈ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.</p>.<p>ಬೆಳೆಗಳಲ್ಲಿ ರೋಗ ಭಾದೆ ಕಂಡು ಬಂದಲ್ಲಿ ರೈತರು ನೇರವಾಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಪೀಡೆನಾಶಕಗಳನ್ನು ಬಳಸಬೇಕು. ಮೋಡ ಕವಿದ ವಾತಾವರಣ ಇದ್ದರೆ ಸಿಂಪಡಣೆ ಮಾಡಬಾರದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>