<p><strong>ಮೈಸೂರು:</strong> ನಗರದ ಹೊರವಲಯದ ಲಿಂಗಾಂಬುಧಿಪಾಳ್ಯದ ಸಮೀಪ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ರಿಂಗ್ರಸ್ತೆಯ ಆಸುಪಾಸಿನಲ್ಲಿ ಬಿಗಿಭದ್ರತೆ ಕೈಗೊಂಡಿದ್ದಾರೆ.</p>.<p>ಮದ್ಯದಂಗಡಿಗಳ ಮೇಲೆ ವಿಶೇಷ ನಿಗಾ ಇರಿಸಿ ಅವು ನಿಗದಿತ ಸಮಯದೊಳಗೆ ಬಾಗಿಲು ಮುಚ್ಚುವಂತೆ ನೋಡಿಕೊಳ್ಳುತ್ತಿದ್ದಾರೆ. ರಸ್ತೆಬದಿ ತಿಂಡಿ ತಿನಿಸುಗಳನ್ನು ಮಾರಾಟ ಮಾಡುವವರನ್ನು 8 ಗಂಟೆಯ ಒಳಗೆ ಬಾಗಿಲು ಮುಚ್ಚಿಸುತ್ತಿದ್ದಾರೆ.</p>.<p>ರಸ್ತೆ ಬದಿ ಮದ್ಯ ಸೇವಿಸುವವರನ್ನು ವಶಕ್ಕೆ ತೆಗೆದುಕೊಂಡು ಎಚ್ಚರಿಕೆ ನೀಡಲಾಗುತ್ತಿದೆ. ಅನುಮಾನಾಸ್ಪದವಾಗಿ ಓಡಾಡುವವರ ಮೇಲೆ ವಿಶೇಷ ನಿಗಾ ಇರಿಸಲಾಗಿದೆ. ಸಂಜೆಯ ನಂತರ ಅರ್ಧಗಂಟೆಗೆ ಒಮ್ಮೆಯಂತೆ ಗಸ್ತು ವಾಹನಗಳು ಸಂಚರಿಸುತ್ತಿವೆ. ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.</p>.<p>ಅನಾವಶ್ಯಕವಾಗಿ ಸಾರ್ವಜನಿಕರು ನಗರದ ಹೊರವಲಯದ ನಿರ್ಜನ ಪ್ರದೇಶಗಳಲ್ಲಿ ಓಡಾಡಬಾರದು. ಕಿಡಿಗೇಡಿಗಳು ಮದ್ಯ ಸೇವಿಸುತ್ತಾ ಕುಳಿತಿರುವುದು, ಜೂಜಾಟವಾಡುವುದು ಕಂಡು ಬಂದರೆ ತಕ್ಷಣವೇ ಪೊಲೀಸ್ ನಿಯಂತ್ರಣ ಕಚೇರಿ 100ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<p><strong>4 ಮಂದಿ ಶಂಕಿತರ ವಿಚಾರಣೆ?</strong></p>.<p>ಈ ಮಧ್ಯೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಪೊಲೀಸರು ದೃಢಪಡಿಸಿಲ್ಲ. ಆರೋಪಿಗಳ ಶೋಧ ಕಾರ್ಯದಲ್ಲಿ ಈಗಾಗಲೇ ಪೊಲೀಸರು ತೊಡಗಿದ್ದಾರೆ.</p>.<p>ಪ್ರಕರಣವು ಜಯಪುರ ಠಾಣೆಗೆ ಸೇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಇಲಾಖೆಯು ನಗರ ಪೊಲೀಸ ಕಮೀಷನರೇಟ್ಗೆ ವರ್ಗಾಯಿಸಿದೆ. ಆದರೆ, ಇದೇ ವ್ಯಾಪ್ತಿಯಲ್ಲಿನ ಹಲವು ಪ್ರಕರಣಗಳನ್ನು ಜಯಪುರ ಠಾಣೆಯ ಪೊಲೀಸರೇ ದಾಖಲಿಸಿಕೊಂಡಿದ್ದಾರೆ. ಆದರೆ, ಈ ಒಂದು ಪ್ರಕರಣ ಮಾತ್ರ ಕುವೆಂಪುನಗರಕ್ಕೆ ಹಸ್ತಾಂತರಿಸಿರುವುದು ಸಾರ್ವಜನಿಕರಲ್ಲಿ ಗೊಂದಲಕ್ಕೆ ಎಡೆ ಮಾಡಿದೆ. ‘ಒಂದು ವೇಳೆ ಏನಾದರು ತೊಂದರೆಯಾದರೆ ನಾವು ಯಾವ ಠಾಣೆಯನ್ನು ಸಂಪರ್ಕಿಸಬೇಕು’ ಎಂದು ಹೆಸರು ಹೇಳಲಿಚ್ಛಿಸದ ಸಾರ್ವಜನಿಕರೊಬ್ಬರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ಹೊರವಲಯದ ಲಿಂಗಾಂಬುಧಿಪಾಳ್ಯದ ಸಮೀಪ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ರಿಂಗ್ರಸ್ತೆಯ ಆಸುಪಾಸಿನಲ್ಲಿ ಬಿಗಿಭದ್ರತೆ ಕೈಗೊಂಡಿದ್ದಾರೆ.</p>.<p>ಮದ್ಯದಂಗಡಿಗಳ ಮೇಲೆ ವಿಶೇಷ ನಿಗಾ ಇರಿಸಿ ಅವು ನಿಗದಿತ ಸಮಯದೊಳಗೆ ಬಾಗಿಲು ಮುಚ್ಚುವಂತೆ ನೋಡಿಕೊಳ್ಳುತ್ತಿದ್ದಾರೆ. ರಸ್ತೆಬದಿ ತಿಂಡಿ ತಿನಿಸುಗಳನ್ನು ಮಾರಾಟ ಮಾಡುವವರನ್ನು 8 ಗಂಟೆಯ ಒಳಗೆ ಬಾಗಿಲು ಮುಚ್ಚಿಸುತ್ತಿದ್ದಾರೆ.</p>.<p>ರಸ್ತೆ ಬದಿ ಮದ್ಯ ಸೇವಿಸುವವರನ್ನು ವಶಕ್ಕೆ ತೆಗೆದುಕೊಂಡು ಎಚ್ಚರಿಕೆ ನೀಡಲಾಗುತ್ತಿದೆ. ಅನುಮಾನಾಸ್ಪದವಾಗಿ ಓಡಾಡುವವರ ಮೇಲೆ ವಿಶೇಷ ನಿಗಾ ಇರಿಸಲಾಗಿದೆ. ಸಂಜೆಯ ನಂತರ ಅರ್ಧಗಂಟೆಗೆ ಒಮ್ಮೆಯಂತೆ ಗಸ್ತು ವಾಹನಗಳು ಸಂಚರಿಸುತ್ತಿವೆ. ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.</p>.<p>ಅನಾವಶ್ಯಕವಾಗಿ ಸಾರ್ವಜನಿಕರು ನಗರದ ಹೊರವಲಯದ ನಿರ್ಜನ ಪ್ರದೇಶಗಳಲ್ಲಿ ಓಡಾಡಬಾರದು. ಕಿಡಿಗೇಡಿಗಳು ಮದ್ಯ ಸೇವಿಸುತ್ತಾ ಕುಳಿತಿರುವುದು, ಜೂಜಾಟವಾಡುವುದು ಕಂಡು ಬಂದರೆ ತಕ್ಷಣವೇ ಪೊಲೀಸ್ ನಿಯಂತ್ರಣ ಕಚೇರಿ 100ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<p><strong>4 ಮಂದಿ ಶಂಕಿತರ ವಿಚಾರಣೆ?</strong></p>.<p>ಈ ಮಧ್ಯೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಪೊಲೀಸರು ದೃಢಪಡಿಸಿಲ್ಲ. ಆರೋಪಿಗಳ ಶೋಧ ಕಾರ್ಯದಲ್ಲಿ ಈಗಾಗಲೇ ಪೊಲೀಸರು ತೊಡಗಿದ್ದಾರೆ.</p>.<p>ಪ್ರಕರಣವು ಜಯಪುರ ಠಾಣೆಗೆ ಸೇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಇಲಾಖೆಯು ನಗರ ಪೊಲೀಸ ಕಮೀಷನರೇಟ್ಗೆ ವರ್ಗಾಯಿಸಿದೆ. ಆದರೆ, ಇದೇ ವ್ಯಾಪ್ತಿಯಲ್ಲಿನ ಹಲವು ಪ್ರಕರಣಗಳನ್ನು ಜಯಪುರ ಠಾಣೆಯ ಪೊಲೀಸರೇ ದಾಖಲಿಸಿಕೊಂಡಿದ್ದಾರೆ. ಆದರೆ, ಈ ಒಂದು ಪ್ರಕರಣ ಮಾತ್ರ ಕುವೆಂಪುನಗರಕ್ಕೆ ಹಸ್ತಾಂತರಿಸಿರುವುದು ಸಾರ್ವಜನಿಕರಲ್ಲಿ ಗೊಂದಲಕ್ಕೆ ಎಡೆ ಮಾಡಿದೆ. ‘ಒಂದು ವೇಳೆ ಏನಾದರು ತೊಂದರೆಯಾದರೆ ನಾವು ಯಾವ ಠಾಣೆಯನ್ನು ಸಂಪರ್ಕಿಸಬೇಕು’ ಎಂದು ಹೆಸರು ಹೇಳಲಿಚ್ಛಿಸದ ಸಾರ್ವಜನಿಕರೊಬ್ಬರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>