ಪಾಲಿಕೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ತಿಂಗಳ ನಂತರ ವಿಧಾನಸಭಾ ಚುನಾವಣೆಯ ಚಟುವಟಿಕೆಗಳು ಪ್ರಾರಂಭವಾಗುವ ನಿರೀಕ್ಷೆ ಇದೆ. ಆಗ, ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಸಕ್ರಿಯವಾಗಬೇಕಾಗುತ್ತದೆ. ಹೀಗಾಗಿ, ಅಷ್ಟರೊಳಗೆ ವರ್ತುಲ ರಸ್ತೆಯಲ್ಲಿ ಬಾಕಿ ಇರುವ ಬೀದಿ ದೀಪ ಅಳವಡಿಕೆ ಕಾಮಗಾರಿ ಮುಗಿಸಬೇಕು’ ಎಂದು ತಿಳಿಸಿದರು.