<p><strong>ಮೈಸೂರು:</strong> ಇಲ್ಲಿನ ಕೆಆರ್ಎಸ್ ಸಾಗರಕಟ್ಟೆ ರಸ್ತೆಯನ್ನು ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ರೈತರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಸೋಮವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಕಳೆದ ವರ್ಷ ನವೆಂಬರ್ 14ರಂದು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಇದುವರೆಗೂ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೃಷ್ಣರಾಜಸಾಗರದ ರೈಲು ನಿಲ್ದಾಣದಿಂದ ಸಾಗರಕಟ್ಟೆಯವರೆಗೆ ಇರುವ ಟರ್ಕಿ ಟ್ರಾವೆಲ್ಸ್ ರಸ್ತೆ ತೀರಾ ಹದಗೆಟ್ಟಿದೆ. ಲಾರಿ, ಬಸ್ಗಳು ಇರಲಿ ದ್ವಿಚಕ್ರ ವಾಹನಗಳೂ ಸಂಚರಿಸದಂತಹ ಸ್ಥಿತಿ ಇದೆ. ಈ ರಸ್ತೆಯನ್ನು ಅಗಲೀಕರಣ ಮಾಡಬೇಕು ಮತ್ತು ದುರಸ್ತಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಕಳೆದ ವರ್ಷ ಜನವರಿಯಲ್ಲಿಯೇ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ’ ಎಂದು ಕಿಡಿಕಾರಿದರು.</p>.<p>ಈ ರಸ್ತೆಯ ಹಳ್ಳ ಗುಂಡಿಗಳಿಂದಾಗಿ ಬಸ್ಗಳು ಬರುತ್ತಿಲ್ಲ. ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಸುತ್ತಮುತ್ತಲ ಗ್ರಾಮಸ್ಥರಿಗೆ ಇದರಿಂದ ಅನಾನುಕೂಲವಾಗಿದೆ ಎಂದರು.</p>.<p>ಇನ್ನು ಒಂದು ತಿಂಗಳಿನ ಒಳಗೆ ಕಾಮಗಾರಿ ಆರಂಭವಾಗದೇ ಹೋದರೆ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರ ಕಚೇರಿಗೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದರು.</p>.<p>ಬಳಿಕ ಸ್ಥಳಕ್ಕೆ ಬಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಗದೀಶ್, ‘ನಾಳೆಯೇ ರಸ್ತೆ ಅಭಿವೃದ್ಧಿಗೆ ಬೇಕಾದ ಪರಿಕರಗಳನ್ನು ಸ್ಥಳಕ್ಕೆ ಸಾಗಿಸಲಾಗುವುದು. ಮೇ 27ರ ಬಳಿಕ ಕಾಮಗಾರಿ ಆರಂಭಿಸಲಾಗುವುದು’ ಎಂದು ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆಯಲ್ಲಿ ವಾಪಸ್ ಪಡೆದರು.</p>.<p>ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್, ಮೈಸೂರು ತಾಲ್ಲೂಕು ಅಧ್ಯಕ್ಷ ಪಿ.ಮರಂಕಯ್ಯ, ಪ್ರಧಾನ ಕಾರ್ಯದರ್ಶಿ ಆನಂದೂರು ಪ್ರಭಾಕರ್, ಮುಖಂಡರಾದ ನಾಗನಹಳ್ಳಿ ವಿಜಯೇಂದ್ರ, ಮಂಡಕಳ್ಳಿ ಮಹೇಶ್, ದಿನೇಶ್, ಚಂದ್ರಶೇಖರ್ ಮೊದಲಾದವರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಕೆಆರ್ಎಸ್ ಸಾಗರಕಟ್ಟೆ ರಸ್ತೆಯನ್ನು ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ರೈತರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಸೋಮವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಕಳೆದ ವರ್ಷ ನವೆಂಬರ್ 14ರಂದು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಇದುವರೆಗೂ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೃಷ್ಣರಾಜಸಾಗರದ ರೈಲು ನಿಲ್ದಾಣದಿಂದ ಸಾಗರಕಟ್ಟೆಯವರೆಗೆ ಇರುವ ಟರ್ಕಿ ಟ್ರಾವೆಲ್ಸ್ ರಸ್ತೆ ತೀರಾ ಹದಗೆಟ್ಟಿದೆ. ಲಾರಿ, ಬಸ್ಗಳು ಇರಲಿ ದ್ವಿಚಕ್ರ ವಾಹನಗಳೂ ಸಂಚರಿಸದಂತಹ ಸ್ಥಿತಿ ಇದೆ. ಈ ರಸ್ತೆಯನ್ನು ಅಗಲೀಕರಣ ಮಾಡಬೇಕು ಮತ್ತು ದುರಸ್ತಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಕಳೆದ ವರ್ಷ ಜನವರಿಯಲ್ಲಿಯೇ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ’ ಎಂದು ಕಿಡಿಕಾರಿದರು.</p>.<p>ಈ ರಸ್ತೆಯ ಹಳ್ಳ ಗುಂಡಿಗಳಿಂದಾಗಿ ಬಸ್ಗಳು ಬರುತ್ತಿಲ್ಲ. ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಸುತ್ತಮುತ್ತಲ ಗ್ರಾಮಸ್ಥರಿಗೆ ಇದರಿಂದ ಅನಾನುಕೂಲವಾಗಿದೆ ಎಂದರು.</p>.<p>ಇನ್ನು ಒಂದು ತಿಂಗಳಿನ ಒಳಗೆ ಕಾಮಗಾರಿ ಆರಂಭವಾಗದೇ ಹೋದರೆ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರ ಕಚೇರಿಗೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದರು.</p>.<p>ಬಳಿಕ ಸ್ಥಳಕ್ಕೆ ಬಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಗದೀಶ್, ‘ನಾಳೆಯೇ ರಸ್ತೆ ಅಭಿವೃದ್ಧಿಗೆ ಬೇಕಾದ ಪರಿಕರಗಳನ್ನು ಸ್ಥಳಕ್ಕೆ ಸಾಗಿಸಲಾಗುವುದು. ಮೇ 27ರ ಬಳಿಕ ಕಾಮಗಾರಿ ಆರಂಭಿಸಲಾಗುವುದು’ ಎಂದು ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆಯಲ್ಲಿ ವಾಪಸ್ ಪಡೆದರು.</p>.<p>ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್, ಮೈಸೂರು ತಾಲ್ಲೂಕು ಅಧ್ಯಕ್ಷ ಪಿ.ಮರಂಕಯ್ಯ, ಪ್ರಧಾನ ಕಾರ್ಯದರ್ಶಿ ಆನಂದೂರು ಪ್ರಭಾಕರ್, ಮುಖಂಡರಾದ ನಾಗನಹಳ್ಳಿ ವಿಜಯೇಂದ್ರ, ಮಂಡಕಳ್ಳಿ ಮಹೇಶ್, ದಿನೇಶ್, ಚಂದ್ರಶೇಖರ್ ಮೊದಲಾದವರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>