<p><strong>ಮೈಸೂರು: </strong>ಇಲ್ಲಿನ ಕೆಆರ್ಎಸ್ ರಸ್ತೆಯಿಂದ ಕುಂಬಾರಕೊಪ್ಪಲು ಮಾರ್ಗವಾಗಿ ಸೂರ್ಯ ಬೇಕರಿ ರಸ್ತೆಯನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಇಲ್ಲಿನ ಆದಿಶಕ್ತಿ ತಾಯಿ ದೇಗುಲದ ಆವರಣದಲ್ಲಿ ಚಾಲನೆ ನೀಡಿದರು.</p>.<p>₹3.10 ಕೋಟಿ ಮೊತ್ತದ ಬೃಹತ್ ಯೋಜನೆ ಇದಾಗಿದ್ದು, ಈ ಭಾಗದ ಪ್ರಮುಖ ರಸ್ತೆ ಅಭಿವೃದ್ಧಿ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.</p>.<p>ಸದ್ಯ ಇರುವ ರಸ್ತೆಯನ್ನೇ ಡಾಂಬರೀಕರಣ ಮಾಡುವುದು, ಮಳೆ ನೀರು ಚರಂಡಿ ನಿರ್ಮಿಸುವುದು, ಬಸ್ ನಿಲ್ದಾಣವನ್ನು ಹೈಟೆಕ್ಗೊಳಿಸುವುದು, ರಸ್ತೆಯನ್ನು ಸಂಪರ್ಕಿಸುವ ಅಡ್ಡರಸ್ತೆಗಳನ್ನೂ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಎಲ್.ನಾಗೇಂದ್ರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಶಾಸಕರ ಅನುದಾನದಲ್ಲಿ ಯಾವುದೇ ಕೊರತೆ ಆಗಿಲ್ಲ. ಇದುವರೆಗೂ ₹100 ಕೋಟಿಯಷ್ಟು ಅನುದಾನ ಬಂದಿದೆ. ಮತ್ತೂ ₹150 ಕೋಟಿ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>ಪಾಲಿಕೆ ಸದಸ್ಯರಾದ ಉಷಾಕುಮಾರ್, ಕೆ.ವಿ.ಶ್ರೀಧರ್, ಸುಬ್ಬಯ್ಯ, ಮುಖಂಡರಾದ ಡಿ.ಮಾದೇಗೌಡ, ಬಿಜೆಪಿಯ ಚಾಮರಾಜ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಪುನೀತ್, ಉಪಾಧ್ಯಕ್ಷ ಕುಮಾರಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ಕೆಆರ್ಎಸ್ ರಸ್ತೆಯಿಂದ ಕುಂಬಾರಕೊಪ್ಪಲು ಮಾರ್ಗವಾಗಿ ಸೂರ್ಯ ಬೇಕರಿ ರಸ್ತೆಯನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಇಲ್ಲಿನ ಆದಿಶಕ್ತಿ ತಾಯಿ ದೇಗುಲದ ಆವರಣದಲ್ಲಿ ಚಾಲನೆ ನೀಡಿದರು.</p>.<p>₹3.10 ಕೋಟಿ ಮೊತ್ತದ ಬೃಹತ್ ಯೋಜನೆ ಇದಾಗಿದ್ದು, ಈ ಭಾಗದ ಪ್ರಮುಖ ರಸ್ತೆ ಅಭಿವೃದ್ಧಿ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.</p>.<p>ಸದ್ಯ ಇರುವ ರಸ್ತೆಯನ್ನೇ ಡಾಂಬರೀಕರಣ ಮಾಡುವುದು, ಮಳೆ ನೀರು ಚರಂಡಿ ನಿರ್ಮಿಸುವುದು, ಬಸ್ ನಿಲ್ದಾಣವನ್ನು ಹೈಟೆಕ್ಗೊಳಿಸುವುದು, ರಸ್ತೆಯನ್ನು ಸಂಪರ್ಕಿಸುವ ಅಡ್ಡರಸ್ತೆಗಳನ್ನೂ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಎಲ್.ನಾಗೇಂದ್ರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಶಾಸಕರ ಅನುದಾನದಲ್ಲಿ ಯಾವುದೇ ಕೊರತೆ ಆಗಿಲ್ಲ. ಇದುವರೆಗೂ ₹100 ಕೋಟಿಯಷ್ಟು ಅನುದಾನ ಬಂದಿದೆ. ಮತ್ತೂ ₹150 ಕೋಟಿ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>ಪಾಲಿಕೆ ಸದಸ್ಯರಾದ ಉಷಾಕುಮಾರ್, ಕೆ.ವಿ.ಶ್ರೀಧರ್, ಸುಬ್ಬಯ್ಯ, ಮುಖಂಡರಾದ ಡಿ.ಮಾದೇಗೌಡ, ಬಿಜೆಪಿಯ ಚಾಮರಾಜ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಪುನೀತ್, ಉಪಾಧ್ಯಕ್ಷ ಕುಮಾರಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>