<p><strong>ಹುಣಸೂರು (ಮೈಸೂರು ಜಿಲ್ಲೆ): ಇ</strong>ಲ್ಲಿನ ಬೈಪಾಸ್ ರಸ್ತೆಯಲ್ಲಿರುವ ‘ಸ್ಕೈ ಗೋಲ್ಡ್ ಅಂಡ್ ಡೈಮಂಡ್’ ಚಿನ್ನಾಭರಣ ಮಳಿಗೆಗೆ ಭಾನುವಾರ ಮಧ್ಯಾಹ್ನ ನುಗ್ಗಿದ ಐವರು ಬಂದೂಕು ಧಾರಿಗಳು, ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಸಿ ಚಿನ್ನಾಭರಣ ದೋಚಿದ್ದಾರೆ. ಹೋಗುವಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಸ್ಥಳದಲ್ಲಿ ಆತಂಕ ಉಂಟಾಗಿತ್ತು.</p>.<p>ದ್ವಿಚಕ್ರವಾಹನಗಳಲ್ಲಿ ಬಂದ ಐವರು, ಮಧ್ಯಾಹ್ನ 2.02ರ ಸುಮಾರಿಗೆ ಮಳಿಗೆಗೆ ನುಗ್ಗಿ 2.06ರೊಳಗೆ ಚಿನ್ನಾಭರಣ ತೆಗೆದುಕೊಂಡು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾರೆ.</p>.<p>‘ಇಬ್ಬರು ಮುಸುಕುಧಾರಿಗಳಾಗಿದ್ದರು. ಮೂವರ ಮುಖ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರ ಕೈಯಲ್ಲಿ ಎರಡೆರಡು ಗನ್ ಇದ್ದುದು, ಉಳಿದವರು ಒಂದು ಗನ್ ಹಿಡಿದಿದ್ದುದು ಸೆರೆಯಾಗಿದೆ. ಒಬ್ಬ ಹಿಂದಿಯಲ್ಲಿ ಮಾತನಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.</p>.<p>‘ಬೆಳ್ಳಿ ಆಭರಣ ಹಾಗೂ ನಗದು ಮುಟ್ಟಿಲ್ಲ. ಕೆಲವೇ ನಿಮಿಷಗಳಲ್ಲಿ ಸಿಕ್ಕ ಬಂಗಾರದ ಸರಗಳನ್ನಷ್ಟೇ ದೋಚಿದ್ದಾರೆ. ಹೋಗುವಾಗ ಯಾರೂ ಹಿಂಬಾಲಿಸಬಾರದೆಂಬ ಕಾರಣಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ’ ಎಂದು ಎಸ್ಪಿ ಎನ್.ವಿಷ್ಣುವರ್ಧನ್ ಮಾಹಿತಿ ನೀಡಿದರು.</p>.<p>‘ತನಿಖೆಗೆ ಐದು ತಂಡ ರಚಿಸಲಾಗಿದೆ. ಎಷ್ಟು ಮೌಲ್ಯದ ಚಿನ್ನಾಭರಣ ದರೋಡೆಯಾಗಿದೆ ಎಂದು ತಿಳಿದುಬಂದಿಲ್ಲ. ಅಂಗಡಿಯಲ್ಲಿರುವ ಚಿನ್ನದ ದಾಸ್ತಾನು ಹಾಗೂ ಕಳೆದುಕೊಂಡಿರುವ ಚಿನ್ನಾಭರಣದ ಲೆಕ್ಕಾಚಾರದ ಬಳಿಕ ಅದರ ಬಗ್ಗೆ ತಿಳಿಯಲಿದೆ. ಜಿಲ್ಲೆಯ ಚೆಕ್ಪೋಸ್ಟ್ಗಳಲ್ಲಿ ಪರಿಶೀಲಿಸುತ್ತಿದ್ದು, ಎಲ್ಲಾ ಆಯಾಮದಲ್ಲೂ ತನಿಖೆ ನಡೆಯುತ್ತಿದೆ’ ಎಂದು ಹೇಳಿದರು.</p>.<p>ಸ್ಥಳಕ್ಕೆ ಬೆರಳಚ್ಚು ಮತ್ತು ಶ್ವಾನದಳ ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಡಿವೈಎಸ್ಪಿ ರವಿ, ಸಿಪಿಐ ಸಂತೋಷ್ ಕಶ್ಯಪ್, ಅಪರಾಧ ವಿಭಾಗದ ಪಿಎಸ್ಐ ಜಮೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು (ಮೈಸೂರು ಜಿಲ್ಲೆ): ಇ</strong>ಲ್ಲಿನ ಬೈಪಾಸ್ ರಸ್ತೆಯಲ್ಲಿರುವ ‘ಸ್ಕೈ ಗೋಲ್ಡ್ ಅಂಡ್ ಡೈಮಂಡ್’ ಚಿನ್ನಾಭರಣ ಮಳಿಗೆಗೆ ಭಾನುವಾರ ಮಧ್ಯಾಹ್ನ ನುಗ್ಗಿದ ಐವರು ಬಂದೂಕು ಧಾರಿಗಳು, ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಸಿ ಚಿನ್ನಾಭರಣ ದೋಚಿದ್ದಾರೆ. ಹೋಗುವಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಸ್ಥಳದಲ್ಲಿ ಆತಂಕ ಉಂಟಾಗಿತ್ತು.</p>.<p>ದ್ವಿಚಕ್ರವಾಹನಗಳಲ್ಲಿ ಬಂದ ಐವರು, ಮಧ್ಯಾಹ್ನ 2.02ರ ಸುಮಾರಿಗೆ ಮಳಿಗೆಗೆ ನುಗ್ಗಿ 2.06ರೊಳಗೆ ಚಿನ್ನಾಭರಣ ತೆಗೆದುಕೊಂಡು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾರೆ.</p>.<p>‘ಇಬ್ಬರು ಮುಸುಕುಧಾರಿಗಳಾಗಿದ್ದರು. ಮೂವರ ಮುಖ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರ ಕೈಯಲ್ಲಿ ಎರಡೆರಡು ಗನ್ ಇದ್ದುದು, ಉಳಿದವರು ಒಂದು ಗನ್ ಹಿಡಿದಿದ್ದುದು ಸೆರೆಯಾಗಿದೆ. ಒಬ್ಬ ಹಿಂದಿಯಲ್ಲಿ ಮಾತನಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.</p>.<p>‘ಬೆಳ್ಳಿ ಆಭರಣ ಹಾಗೂ ನಗದು ಮುಟ್ಟಿಲ್ಲ. ಕೆಲವೇ ನಿಮಿಷಗಳಲ್ಲಿ ಸಿಕ್ಕ ಬಂಗಾರದ ಸರಗಳನ್ನಷ್ಟೇ ದೋಚಿದ್ದಾರೆ. ಹೋಗುವಾಗ ಯಾರೂ ಹಿಂಬಾಲಿಸಬಾರದೆಂಬ ಕಾರಣಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ’ ಎಂದು ಎಸ್ಪಿ ಎನ್.ವಿಷ್ಣುವರ್ಧನ್ ಮಾಹಿತಿ ನೀಡಿದರು.</p>.<p>‘ತನಿಖೆಗೆ ಐದು ತಂಡ ರಚಿಸಲಾಗಿದೆ. ಎಷ್ಟು ಮೌಲ್ಯದ ಚಿನ್ನಾಭರಣ ದರೋಡೆಯಾಗಿದೆ ಎಂದು ತಿಳಿದುಬಂದಿಲ್ಲ. ಅಂಗಡಿಯಲ್ಲಿರುವ ಚಿನ್ನದ ದಾಸ್ತಾನು ಹಾಗೂ ಕಳೆದುಕೊಂಡಿರುವ ಚಿನ್ನಾಭರಣದ ಲೆಕ್ಕಾಚಾರದ ಬಳಿಕ ಅದರ ಬಗ್ಗೆ ತಿಳಿಯಲಿದೆ. ಜಿಲ್ಲೆಯ ಚೆಕ್ಪೋಸ್ಟ್ಗಳಲ್ಲಿ ಪರಿಶೀಲಿಸುತ್ತಿದ್ದು, ಎಲ್ಲಾ ಆಯಾಮದಲ್ಲೂ ತನಿಖೆ ನಡೆಯುತ್ತಿದೆ’ ಎಂದು ಹೇಳಿದರು.</p>.<p>ಸ್ಥಳಕ್ಕೆ ಬೆರಳಚ್ಚು ಮತ್ತು ಶ್ವಾನದಳ ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಡಿವೈಎಸ್ಪಿ ರವಿ, ಸಿಪಿಐ ಸಂತೋಷ್ ಕಶ್ಯಪ್, ಅಪರಾಧ ವಿಭಾಗದ ಪಿಎಸ್ಐ ಜಮೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>