<p><strong>ಕೆ.ಆರ್.ನಗರ</strong>: ಲಾರಿ ಚಾಲಕನಿಗೆ ಚಾಕು ತೋರಿಸಿ ಮಂಗಳವಾರ ಬೆಳಗಿನ ಜಾವ ರಾಜ್ಯ ಹೆದ್ದಾರಿಯಲ್ಲಿ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 24ಗಂಟೆಯೊಳಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ.</p>.<p>ಕೆ.ಆರ್.ನಗರದ ಮೀನಾಕ್ಷಿ ಬ್ಲಾಕ್ ನಿವಾಸಿ ಆಟೊ ಚಾಲಕ ಶರತ್ (25) ಮತ್ತು ಹುಣಸೂರು ತಾಲ್ಲೂಕು ಬೋಳನಹಳ್ಳಿ ಗ್ರಾಮದ ನಿವಾಸಿ, ಗಾರೆ ಕೆಲಸಗಾರ ವಾಸು (23) ಬಂಧಿತ ಆರೋಪಿಗಳು.</p>.<p>ಹತ್ತಿ ತುಂಬಿದ್ದ ಲಾರಿಯೊಂದು ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿತ್ತು. ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ ಲಾರಿ ಕೆಟ್ಟು ನಿಂತಿತ್ತು.</p>.<p>ಈ ಸಂದರ್ಭದಲ್ಲಿ ಬೈಕ್ನಲ್ಲಿ ಬಂದ ಆರೋಪಿಗಳು ಚಾಲಕನಿಗೆ ಚಾಕು ತೋರಿಸಿ ಚಾಲಕನ ಬಳಿ ಇದ್ದ ₹ 30 ಸಾವಿರ ನಗದು ಮತ್ತು ₹ 19 ಸಾವಿರ ಮೌಲ್ಯದ ಮೊಬೈಲ್ ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ₹ 10 ಸಾವಿರ ನಗದು ಮತ್ತು ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಸಿಪಿಐ ಪಿ.ಕೆ.ರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<p>ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಪಿಐ ಪಿ.ಕೆ.ರಾಜು, ಎಸ್ಐ ವಿ.ಚೇತನ್, ಸಿಬ್ಬಂದಿ ಹಿದಾಯತ್, ಜವರೇಶ್, ಧನಂಜಯ, ನಾರಾಯಣ ಶೆಟ್ಟಿ, ಮಲ್ಲೇಶ, ಪ್ರದೀಪ, ಪುನೀತ್, ಗಣೇಶ, ಯಶವಂತ್, ಪಾರ್ಥ ಮತ್ತು ವಾಹನ ಚಾಲಕರಾದ ಇಮ್ದಾದ್ ಆಲಿ, ಅನಿತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ನಗರ</strong>: ಲಾರಿ ಚಾಲಕನಿಗೆ ಚಾಕು ತೋರಿಸಿ ಮಂಗಳವಾರ ಬೆಳಗಿನ ಜಾವ ರಾಜ್ಯ ಹೆದ್ದಾರಿಯಲ್ಲಿ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 24ಗಂಟೆಯೊಳಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ.</p>.<p>ಕೆ.ಆರ್.ನಗರದ ಮೀನಾಕ್ಷಿ ಬ್ಲಾಕ್ ನಿವಾಸಿ ಆಟೊ ಚಾಲಕ ಶರತ್ (25) ಮತ್ತು ಹುಣಸೂರು ತಾಲ್ಲೂಕು ಬೋಳನಹಳ್ಳಿ ಗ್ರಾಮದ ನಿವಾಸಿ, ಗಾರೆ ಕೆಲಸಗಾರ ವಾಸು (23) ಬಂಧಿತ ಆರೋಪಿಗಳು.</p>.<p>ಹತ್ತಿ ತುಂಬಿದ್ದ ಲಾರಿಯೊಂದು ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿತ್ತು. ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ ಲಾರಿ ಕೆಟ್ಟು ನಿಂತಿತ್ತು.</p>.<p>ಈ ಸಂದರ್ಭದಲ್ಲಿ ಬೈಕ್ನಲ್ಲಿ ಬಂದ ಆರೋಪಿಗಳು ಚಾಲಕನಿಗೆ ಚಾಕು ತೋರಿಸಿ ಚಾಲಕನ ಬಳಿ ಇದ್ದ ₹ 30 ಸಾವಿರ ನಗದು ಮತ್ತು ₹ 19 ಸಾವಿರ ಮೌಲ್ಯದ ಮೊಬೈಲ್ ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ₹ 10 ಸಾವಿರ ನಗದು ಮತ್ತು ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಸಿಪಿಐ ಪಿ.ಕೆ.ರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<p>ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಪಿಐ ಪಿ.ಕೆ.ರಾಜು, ಎಸ್ಐ ವಿ.ಚೇತನ್, ಸಿಬ್ಬಂದಿ ಹಿದಾಯತ್, ಜವರೇಶ್, ಧನಂಜಯ, ನಾರಾಯಣ ಶೆಟ್ಟಿ, ಮಲ್ಲೇಶ, ಪ್ರದೀಪ, ಪುನೀತ್, ಗಣೇಶ, ಯಶವಂತ್, ಪಾರ್ಥ ಮತ್ತು ವಾಹನ ಚಾಲಕರಾದ ಇಮ್ದಾದ್ ಆಲಿ, ಅನಿತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>