<p><strong>ಜಯಪುರ:</strong> ಮೈಸೂರು ಬಳಿಯ ಜಯಪುರ ಅನಗಹಳ್ಳಿ ಸಮೀಪದ ತೋಟದ ಮನೆಯೊಂದರಲ್ಲಿ ದೊರೆಸ್ವಾಮಿ (30ವರ್ಷ) ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.</p><p>ಕೊಲೆಯಾದ ದೊರೆಸ್ವಾಮಿ ಮೈಸೂರು ತಾಲ್ಲೂಕು ಜಯಪುರ ಹೋಬಳಿ ಗೋಪಾಲಪುರದ ಪುಷ್ಪ ಎಂಬುವವರ ಮಗ.</p><p>ಬೆಂಗಳೂರು ಮೂಲದ ಶ್ವೇತಾ ಎಂಬುವವರ ಜೊತೆ ಅನಗಹಳ್ಳಿಯಲ್ಲಿ ತಮ್ಮ ತೋಟದ ಮನೆಯಲ್ಲಿ ದೊರೆಸ್ವಾಮಿ ವಾಸವಿದ್ದರು. ಕೊಲೆಯ ನಂತರ ಶ್ವೇತಾ ನಾಪತ್ತೆಯಾಗಿದ್ದಾರೆ.</p><p>ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಮಲ್ಲಿಕ್, ಡಿ.ವೈ.ಎಸ್.ಪಿ ಕರಿಂ ರಾವತರ್, ಸರ್ಕಲ್ ಇನ್ ಸ್ಪೆಕ್ಟರ್ ಶಿನಂಜಶೆಟ್ಟಿ, ಜಯಪುರ ಠಾಣಾ ಪಿಎಸ್ಐ ಪ್ರಕಾಶ್ ಯತ್ತಿನಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p><p>ದೊರೆಸ್ವಾಮಿ ಮೇಲೆ ಜಯಪುರ ಠಾಣೆಯಲ್ಲಿ 307, ಎನ್.ಸಿ.ಆರ್ ಪ್ರಕರಣ ದಾಖಲಾಗಿದ್ದವು. ಮೈಸೂರು ನಗರದ ವಿಜಯನಗರ ಮತ್ತು ಹುಣಸೂರು ತಾಲ್ಲೂಕು ಬಿಳಿಕೆರೆ ಠಾಣೆಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಜಯಪುರ ಠಾಣಾ ಪೊಲೀಸರು ತಿಳಿಸಿದ್ದಾರೆ.</p><p>ಕೊಲೆಯಾದ ವ್ಯಕ್ತಿ ತಾಯಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಪುರ:</strong> ಮೈಸೂರು ಬಳಿಯ ಜಯಪುರ ಅನಗಹಳ್ಳಿ ಸಮೀಪದ ತೋಟದ ಮನೆಯೊಂದರಲ್ಲಿ ದೊರೆಸ್ವಾಮಿ (30ವರ್ಷ) ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.</p><p>ಕೊಲೆಯಾದ ದೊರೆಸ್ವಾಮಿ ಮೈಸೂರು ತಾಲ್ಲೂಕು ಜಯಪುರ ಹೋಬಳಿ ಗೋಪಾಲಪುರದ ಪುಷ್ಪ ಎಂಬುವವರ ಮಗ.</p><p>ಬೆಂಗಳೂರು ಮೂಲದ ಶ್ವೇತಾ ಎಂಬುವವರ ಜೊತೆ ಅನಗಹಳ್ಳಿಯಲ್ಲಿ ತಮ್ಮ ತೋಟದ ಮನೆಯಲ್ಲಿ ದೊರೆಸ್ವಾಮಿ ವಾಸವಿದ್ದರು. ಕೊಲೆಯ ನಂತರ ಶ್ವೇತಾ ನಾಪತ್ತೆಯಾಗಿದ್ದಾರೆ.</p><p>ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಮಲ್ಲಿಕ್, ಡಿ.ವೈ.ಎಸ್.ಪಿ ಕರಿಂ ರಾವತರ್, ಸರ್ಕಲ್ ಇನ್ ಸ್ಪೆಕ್ಟರ್ ಶಿನಂಜಶೆಟ್ಟಿ, ಜಯಪುರ ಠಾಣಾ ಪಿಎಸ್ಐ ಪ್ರಕಾಶ್ ಯತ್ತಿನಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p><p>ದೊರೆಸ್ವಾಮಿ ಮೇಲೆ ಜಯಪುರ ಠಾಣೆಯಲ್ಲಿ 307, ಎನ್.ಸಿ.ಆರ್ ಪ್ರಕರಣ ದಾಖಲಾಗಿದ್ದವು. ಮೈಸೂರು ನಗರದ ವಿಜಯನಗರ ಮತ್ತು ಹುಣಸೂರು ತಾಲ್ಲೂಕು ಬಿಳಿಕೆರೆ ಠಾಣೆಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಜಯಪುರ ಠಾಣಾ ಪೊಲೀಸರು ತಿಳಿಸಿದ್ದಾರೆ.</p><p>ಕೊಲೆಯಾದ ವ್ಯಕ್ತಿ ತಾಯಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>