<p><strong>ಮೈಸೂರು</strong>: ‘ಹಳ್ಳಿಗಳು ಅಭಿವೃದ್ಧಿಯಾದರೆ ದೇಶದ ಪ್ರಗತಿಗೆ ಸಹಕಾರಿಯಾಗಲಿದೆ’ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. </p>.<p>ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿರುವ ‘ಯೂತ್ ಫಾರ್ ಮೈ ಭಾರತ್’ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಗಾಂಧೀಜಿಯ ಕನಸು ನನಸಾಗಬೇಕಾದರೆ ಹಳ್ಳಿಗಳಲ್ಲಿ ಮೂಲಸೌಕರ್ಯ, ದುಡಿಯುವ ಕೈಗಳಿಗೆ ಉದ್ಯೋಗ ದೊರೆತು ಸ್ವಾವಲಂಬಿಯಾಗಬೇಕಿದೆ’ ಎಂದರು.</p>.<p>‘ವರ್ಷಗಳ ಹಿಂದೆ ಹಳ್ಳಿಯಲ್ಲಿ ಜನರು ರಸ್ತೆಗಳನ್ನು, ಚರಂಡಿಗಳನ್ನು ಸ್ವತಃ ನಿರ್ಮಿಸಿಕೊಳ್ಳುತ್ತಿದ್ದರು. ಈಗ ಎಲ್ಲವನ್ನೂ ಸರ್ಕಾರ ಮಾಡಲಿ ಎನ್ನುತ್ತಿದ್ದಾರೆ. ಈ ಧೋರಣೆ ಸರಿಯಲ್ಲ. ವಿದ್ಯಾರ್ಥಿಗಳು ಗ್ರಾಮ ಸೇವೆಯ ಅನುಭವ ಹೊಂದಬೇಕು’ ಎಂದು ಸಲಹೆ ನೀಡಿದರು. </p>.<p>ವಿದ್ಯಾವರ್ಧಕ ಸಂಘದ ಖಜಾಂಚಿ ಶ್ರೀಶೈಲ ರಾಮಣ್ಣವರ್, ಪ್ರಾಂಶುಪಾಲ ಎಸ್.ಮರೀಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವನಂಜೇಗೌಡ, ಸದಸ್ಯರಾದ ಭಗವಂತಸ್ವಾಮಿ, ಪುಟ್ಟಲಕ್ಷ್ಮಮ್ಮ, ದೊಡ್ಡೇಗೌಡ, ಶಿವಮ್ಮ ಪುಟ್ಟೇಗೌಡ, ದ್ರಾಕ್ಷಾಯಿಣಿ ಸೋಮೇಶ್, ದಾರಿಪುರ ಬಸವಣ್ಣ, ಕೆಂಡಗಣ್ಣ, ರಾಮಚಾರಿ, ಮಾದೇಗೌಡ, ಸತ್ತಿಗೆಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಹಳ್ಳಿಗಳು ಅಭಿವೃದ್ಧಿಯಾದರೆ ದೇಶದ ಪ್ರಗತಿಗೆ ಸಹಕಾರಿಯಾಗಲಿದೆ’ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. </p>.<p>ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿರುವ ‘ಯೂತ್ ಫಾರ್ ಮೈ ಭಾರತ್’ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಗಾಂಧೀಜಿಯ ಕನಸು ನನಸಾಗಬೇಕಾದರೆ ಹಳ್ಳಿಗಳಲ್ಲಿ ಮೂಲಸೌಕರ್ಯ, ದುಡಿಯುವ ಕೈಗಳಿಗೆ ಉದ್ಯೋಗ ದೊರೆತು ಸ್ವಾವಲಂಬಿಯಾಗಬೇಕಿದೆ’ ಎಂದರು.</p>.<p>‘ವರ್ಷಗಳ ಹಿಂದೆ ಹಳ್ಳಿಯಲ್ಲಿ ಜನರು ರಸ್ತೆಗಳನ್ನು, ಚರಂಡಿಗಳನ್ನು ಸ್ವತಃ ನಿರ್ಮಿಸಿಕೊಳ್ಳುತ್ತಿದ್ದರು. ಈಗ ಎಲ್ಲವನ್ನೂ ಸರ್ಕಾರ ಮಾಡಲಿ ಎನ್ನುತ್ತಿದ್ದಾರೆ. ಈ ಧೋರಣೆ ಸರಿಯಲ್ಲ. ವಿದ್ಯಾರ್ಥಿಗಳು ಗ್ರಾಮ ಸೇವೆಯ ಅನುಭವ ಹೊಂದಬೇಕು’ ಎಂದು ಸಲಹೆ ನೀಡಿದರು. </p>.<p>ವಿದ್ಯಾವರ್ಧಕ ಸಂಘದ ಖಜಾಂಚಿ ಶ್ರೀಶೈಲ ರಾಮಣ್ಣವರ್, ಪ್ರಾಂಶುಪಾಲ ಎಸ್.ಮರೀಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವನಂಜೇಗೌಡ, ಸದಸ್ಯರಾದ ಭಗವಂತಸ್ವಾಮಿ, ಪುಟ್ಟಲಕ್ಷ್ಮಮ್ಮ, ದೊಡ್ಡೇಗೌಡ, ಶಿವಮ್ಮ ಪುಟ್ಟೇಗೌಡ, ದ್ರಾಕ್ಷಾಯಿಣಿ ಸೋಮೇಶ್, ದಾರಿಪುರ ಬಸವಣ್ಣ, ಕೆಂಡಗಣ್ಣ, ರಾಮಚಾರಿ, ಮಾದೇಗೌಡ, ಸತ್ತಿಗೆಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>