<p><strong>ಮೈಸೂರು: </strong>ಜಿಲ್ಲೆಯ 53 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹಾಗೂ 9 ತಾಲ್ಲೂಕು ಪಂಚಾಯಿತಿಗಳ 147 ಕ್ಷೇತ್ರಗಳಿಗೆ ಮೀಸಲಾತಿ ಘೋಷಣೆಯಾದ ಬೆನ್ನಿಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.</p>.<p>ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗಿರುವ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್–ಜೆಡಿಎಸ್–ಬಿಜೆಪಿ ಈಗಿನಿಂದಲೇ ಸಿದ್ಧತೆ ಆರಂಭಿಸಿವೆ. ಉಳಿದ ಪಕ್ಷಗಳು ಸಹ ಗ್ರಾಮೀಣದಲ್ಲಿ ನೆಲೆ ಕಂಡುಕೊಳ್ಳಲು ಕಸರತ್ತು ನಡೆಸಿವೆ.</p>.<p>ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಬಿಜೆಪಿಗೆ ಜಿಲ್ಲೆಯ ಗ್ರಾಮಾಂತರದಲ್ಲೂ ನೆಲೆ ವಿಸ್ತರಿಸಿಕೊಳ್ಳಬೇಕು ಎಂಬ ಉಮೇದು. ಕಾಂಗ್ರೆಸ್ನಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತವರಲ್ಲಿ ಪಾರಮ್ಯ ಮುಂದುವರೆಸುವ ಉತ್ಸಾಹ.</p>.<p>ಜೆಡಿಎಸ್ಗೆ ಅಸ್ತಿತ್ವದ ಪ್ರಶ್ನೆ. ಜಿಲ್ಲಾ ನಾಯಕರಾದ ಜಿ.ಟಿ.ದೇವೇಗೌಡ–ಸಾ.ರಾ.ಮಹೇಶ್ ನಡುವಿನ ಶೀತಲ ಸಮರದಲ್ಲೂ ಪಕ್ಷದ ಬೇರನ್ನು ಗಟ್ಟಿಗೊಳಿಸುವ ಸವಾಲು. ಮೂರು ಪಕ್ಷಗಳು ಸ್ವತಂತ್ರವಾಗಿ ಬಹುಮತ ಪಡೆಯಲಿಕ್ಕಾಗಿ ಕಸರತ್ತು ಆರಂಭಿಸಿವೆ. ಜಿಲ್ಲಾ ಪಂಚಾಯಿತಿ ಜೊತೆಗೆ ತಾಲ್ಲೂಕು ಪಂಚಾಯಿತಿ ಚುಕ್ಕಾಣಿಗಾಗಿಯೂ ತಂತ್ರಗಾರಿಕೆ ರೂಪಿಸಿವೆ.</p>.<p>ಹಾಲಿ ಶಾಸಕರು–ಮಾಜಿ ಶಾಸಕರು, ಮುಂಬರುವ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಗಳಾಗಿರುವವರು ಸಹ ಪಂಚಾಯಿತಿ ಚುನಾವಣೆಯಲ್ಲಿ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಚುನಾವಣೆಯಲ್ಲಿ ಬೆಂಬಲಿಗರನ್ನೇ ಗೆಲ್ಲಿಸಿಕೊಂಡರೆ; ವಿಧಾನಸಭಾ ಚುನಾವಣೆಯಲ್ಲಿ ಸಹಕಾರಿಯಾಗಲಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ.</p>.<p class="Subhead"><strong>ಅಸಮಾಧಾನ:</strong> ‘ಕೇಂದ್ರ–ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೂ ಪ್ರಯೋಜನವಿಲ್ಲ. ಜಿಲ್ಲೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರ ಅಪೇಕ್ಷೆಗಿಂತ; ವಿರೋಧ ಪಕ್ಷಗಳ ಶಾಸಕರು–ನಾಯಕರ ಅಪೇಕ್ಷೆಗೆ ಮನ್ನಣೆ ಸಿಗುತ್ತಿದೆ’ ಎಂದು ಬಿಜೆಪಿ ಗ್ರಾಮಾಂತರ ಘಟಕದ ಮುಖಂಡರೊಬ್ಬರು ತಿಳಿಸಿದರು.</p>.<p>‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅಣತಿಯಂತೆ ಎಲ್ಲವೂ ನಡೆದಿದೆ. ವರುಣಾ ಕ್ಷೇತ್ರದಲ್ಲೂ ಸಿದ್ದರಾಮಯ್ಯ ಸೂಚನೆಯಂತೆ ಮೀಸಲಾತಿ ನಿಗದಿಯಾಗಿದೆ. ನಿಷ್ಠಾವಂತ ಕಾರ್ಯಕರ್ತರು ಸಿದ್ಧತೆ ನಡೆಸಿದ್ದ ಕ್ಷೇತ್ರಗಳಲ್ಲಿ ಸ್ಪರ್ಧಿಸದಂತೆ ಮೀಸಲಾತಿ ನಿಗದಿಯಾಗಿದೆ.’ ಎಂದು ವಿಷಾದಿಸಿದರು.</p>.<p>‘ಪಕ್ಷದ ಅಧ್ಯಕ್ಷರು–ಉಸ್ತುವಾರಿ ಗಮನಕ್ಕೆ ತಂದರೂ ಪ್ರಯೋಜನವಾಗದಿದ್ದರಿಂದ; ಹಲವರು ಮೀಸಲಾತಿಯನ್ನೇ ಪ್ರಶ್ನಿಸಿ ಜುಲೈ 8ರೊಳಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಕೆಲವರು ನ್ಯಾಯಾಲಯದ ಮೊರೆ ಹೋಗುವ ಯೋಚನೆಯಲ್ಲಿಯೂ ಇದ್ದಾರೆ’ ಎಂದು ಹೆಸರು ಬಹಿರಂಗ ಪಡಿಸಲಿಚ್ಚಿಸದ ಬಿಜೆಪಿ ಪದಾಧಿಕಾರಿಯೊಬ್ಬರು ‘ಪ್ರಜಾವಾಣಿ’ ಬಳಿ ಅಸಮಾಧಾನ ತೋಡಿಕೊಂಡರು.</p>.<p class="Briefhead"><strong>ಚುನಾವಣೆಗೆ ಸಜ್ಜು: ಮಂಗಳಾ</strong></p>.<p>‘ಮೊದಲಿನಿಂದಲೇ ಚುನಾವಣೆಗಾಗಿ ಸಂಘಟನಾತ್ಮಕವಾಗಿ ಸಜ್ಜಾಗಿದ್ದೇವೆ. ಪೇಜ್ ಪ್ರಮುಖ್, ಬೂತ್ ಸಮಿತಿ, ಪಂಚರತ್ನಗಳನ್ನು ಮತ್ತೆ ಸಕ್ರಿಯಗೊಳಿಸಿದ್ದೇವೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಸೂಕ್ತ ಅಭ್ಯರ್ಥಿಗಳ ಶೋಧ ಶುರುವಾಗಿದೆ’ ಎನ್ನುತ್ತಾರೆ ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್.</p>.<p>‘ಬಿಜೆಪಿಯ ಗೆಲುವಿಗೆ ಪೂರಕ ವಾತಾವರಣವಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಇಬ್ಬರು ಸಂಸದರು, ಶಾಸಕರ ಸಾರಥ್ಯದಲ್ಲಿ ಚುನಾವಣೆ ಎದುರಿಸುತ್ತೇವೆ. ಪಂಚಾಯಿತಿ ಚುಕ್ಕಾಣಿ ಹಿಡಿಯಲು ಈಗಿನಿಂದಲೇ ಕಾರ್ಯ ಯೋಜನೆ ರೂಪಿಸಿದ್ದೇವೆ’ ಎಂದರು.</p>.<p class="Briefhead"><strong>ಜನಾಭಿಪ್ರಾಯವೇ ಮಾನದಂಡ</strong></p>.<p>‘ಸಿದ್ದರಾಮಯ್ಯ ಸಾರಥ್ಯದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ಸಭೆ ನಡೆದಿದೆ. ಪ್ರಭಾವ, ದುಡ್ಡಿರೋರಿಗೆ ಮಣೆ ಹಾಕಲ್ಲ. ಜನಾಭಿಪ್ರಾಯ ಕೇಳಿ ಬಂದವರಿಗೆ ಈ ಬಾರಿ ಟಿಕೆಟ್ ಕೊಡಲಾಗುವುದು’ ಎನ್ನುತ್ತಾರೆ ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್.</p>.<p>‘ಸರ್ವೆ ನಡೆಸುತ್ತೇವೆ. ಯುವಕರಿಗೆ ಹಾಗೂ ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ಕೊಡಲಾಗುವುದು. ಪ್ರತಿ ತಾಲ್ಲೂಕಿ ಗೊಂದು ಹತ್ತು ಜನರ ಸ್ಕ್ರೀನಿಂಗ್ ಸಮಿತಿ ಮಾಡುತ್ತೇವೆ. ಈ ಸಮಿತಿ ಶಿಫಾರಸು ಮಾಡಿದವರಿಗೆ ಮನ್ನಣೆ ನೀಡುತ್ತೇವೆ’ ಎಂದರು.</p>.<p class="Briefhead"><strong>ಸಾಮೂಹಿಕ ನಾಯಕತ್ವ: ಜೆಡಿಎಸ್</strong></p>.<p>‘ಸಾಮೂಹಿಕ ನಾಯಕತ್ವದಲ್ಲಿ ಪಂಚಾಯಿತಿ ಚುನಾವಣೆ ಎದುರಿಸುವಂತೆ ವರಿಷ್ಠರು ಸೂಚಿಸಿದ್ದಾರೆ. ಬುಧವಾರವಷ್ಟೇ ಈ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆದಿದೆ’ ಎಂದು ಜೆಡಿಎಸ್ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಎನ್.ನರಸಿಂಹಮೂರ್ತಿ ತಿಳಿಸಿದರು.</p>.<p>‘ಪಕ್ಷದ ಟಿಕೆಟ್ಗಾಗಿ ಭಾರಿ ಬೇಡಿಕೆಯಿದೆ. ಮೀಸಲು ಕ್ಷೇತ್ರಗಳಲ್ಲೂ ಹಲವರು ಟಿಕೆಟ್ ಕೇಳುತ್ತಿದ್ದಾರೆ. ಬಹುಮತದೊಂದಿಗೆ ಜಿಲ್ಲಾ ಪಂಚಾಯಿತಿ ಚುಕ್ಕಾಣಿ ಹಿಡಿಯುವ ಗುರಿ ನಮ್ಮದು. ನಾಲ್ವರು ಶಾಸಕರು, ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಜಿಲ್ಲೆಯ 53 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹಾಗೂ 9 ತಾಲ್ಲೂಕು ಪಂಚಾಯಿತಿಗಳ 147 ಕ್ಷೇತ್ರಗಳಿಗೆ ಮೀಸಲಾತಿ ಘೋಷಣೆಯಾದ ಬೆನ್ನಿಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.</p>.<p>ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗಿರುವ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್–ಜೆಡಿಎಸ್–ಬಿಜೆಪಿ ಈಗಿನಿಂದಲೇ ಸಿದ್ಧತೆ ಆರಂಭಿಸಿವೆ. ಉಳಿದ ಪಕ್ಷಗಳು ಸಹ ಗ್ರಾಮೀಣದಲ್ಲಿ ನೆಲೆ ಕಂಡುಕೊಳ್ಳಲು ಕಸರತ್ತು ನಡೆಸಿವೆ.</p>.<p>ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಬಿಜೆಪಿಗೆ ಜಿಲ್ಲೆಯ ಗ್ರಾಮಾಂತರದಲ್ಲೂ ನೆಲೆ ವಿಸ್ತರಿಸಿಕೊಳ್ಳಬೇಕು ಎಂಬ ಉಮೇದು. ಕಾಂಗ್ರೆಸ್ನಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತವರಲ್ಲಿ ಪಾರಮ್ಯ ಮುಂದುವರೆಸುವ ಉತ್ಸಾಹ.</p>.<p>ಜೆಡಿಎಸ್ಗೆ ಅಸ್ತಿತ್ವದ ಪ್ರಶ್ನೆ. ಜಿಲ್ಲಾ ನಾಯಕರಾದ ಜಿ.ಟಿ.ದೇವೇಗೌಡ–ಸಾ.ರಾ.ಮಹೇಶ್ ನಡುವಿನ ಶೀತಲ ಸಮರದಲ್ಲೂ ಪಕ್ಷದ ಬೇರನ್ನು ಗಟ್ಟಿಗೊಳಿಸುವ ಸವಾಲು. ಮೂರು ಪಕ್ಷಗಳು ಸ್ವತಂತ್ರವಾಗಿ ಬಹುಮತ ಪಡೆಯಲಿಕ್ಕಾಗಿ ಕಸರತ್ತು ಆರಂಭಿಸಿವೆ. ಜಿಲ್ಲಾ ಪಂಚಾಯಿತಿ ಜೊತೆಗೆ ತಾಲ್ಲೂಕು ಪಂಚಾಯಿತಿ ಚುಕ್ಕಾಣಿಗಾಗಿಯೂ ತಂತ್ರಗಾರಿಕೆ ರೂಪಿಸಿವೆ.</p>.<p>ಹಾಲಿ ಶಾಸಕರು–ಮಾಜಿ ಶಾಸಕರು, ಮುಂಬರುವ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಗಳಾಗಿರುವವರು ಸಹ ಪಂಚಾಯಿತಿ ಚುನಾವಣೆಯಲ್ಲಿ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಚುನಾವಣೆಯಲ್ಲಿ ಬೆಂಬಲಿಗರನ್ನೇ ಗೆಲ್ಲಿಸಿಕೊಂಡರೆ; ವಿಧಾನಸಭಾ ಚುನಾವಣೆಯಲ್ಲಿ ಸಹಕಾರಿಯಾಗಲಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ.</p>.<p class="Subhead"><strong>ಅಸಮಾಧಾನ:</strong> ‘ಕೇಂದ್ರ–ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೂ ಪ್ರಯೋಜನವಿಲ್ಲ. ಜಿಲ್ಲೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರ ಅಪೇಕ್ಷೆಗಿಂತ; ವಿರೋಧ ಪಕ್ಷಗಳ ಶಾಸಕರು–ನಾಯಕರ ಅಪೇಕ್ಷೆಗೆ ಮನ್ನಣೆ ಸಿಗುತ್ತಿದೆ’ ಎಂದು ಬಿಜೆಪಿ ಗ್ರಾಮಾಂತರ ಘಟಕದ ಮುಖಂಡರೊಬ್ಬರು ತಿಳಿಸಿದರು.</p>.<p>‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅಣತಿಯಂತೆ ಎಲ್ಲವೂ ನಡೆದಿದೆ. ವರುಣಾ ಕ್ಷೇತ್ರದಲ್ಲೂ ಸಿದ್ದರಾಮಯ್ಯ ಸೂಚನೆಯಂತೆ ಮೀಸಲಾತಿ ನಿಗದಿಯಾಗಿದೆ. ನಿಷ್ಠಾವಂತ ಕಾರ್ಯಕರ್ತರು ಸಿದ್ಧತೆ ನಡೆಸಿದ್ದ ಕ್ಷೇತ್ರಗಳಲ್ಲಿ ಸ್ಪರ್ಧಿಸದಂತೆ ಮೀಸಲಾತಿ ನಿಗದಿಯಾಗಿದೆ.’ ಎಂದು ವಿಷಾದಿಸಿದರು.</p>.<p>‘ಪಕ್ಷದ ಅಧ್ಯಕ್ಷರು–ಉಸ್ತುವಾರಿ ಗಮನಕ್ಕೆ ತಂದರೂ ಪ್ರಯೋಜನವಾಗದಿದ್ದರಿಂದ; ಹಲವರು ಮೀಸಲಾತಿಯನ್ನೇ ಪ್ರಶ್ನಿಸಿ ಜುಲೈ 8ರೊಳಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಕೆಲವರು ನ್ಯಾಯಾಲಯದ ಮೊರೆ ಹೋಗುವ ಯೋಚನೆಯಲ್ಲಿಯೂ ಇದ್ದಾರೆ’ ಎಂದು ಹೆಸರು ಬಹಿರಂಗ ಪಡಿಸಲಿಚ್ಚಿಸದ ಬಿಜೆಪಿ ಪದಾಧಿಕಾರಿಯೊಬ್ಬರು ‘ಪ್ರಜಾವಾಣಿ’ ಬಳಿ ಅಸಮಾಧಾನ ತೋಡಿಕೊಂಡರು.</p>.<p class="Briefhead"><strong>ಚುನಾವಣೆಗೆ ಸಜ್ಜು: ಮಂಗಳಾ</strong></p>.<p>‘ಮೊದಲಿನಿಂದಲೇ ಚುನಾವಣೆಗಾಗಿ ಸಂಘಟನಾತ್ಮಕವಾಗಿ ಸಜ್ಜಾಗಿದ್ದೇವೆ. ಪೇಜ್ ಪ್ರಮುಖ್, ಬೂತ್ ಸಮಿತಿ, ಪಂಚರತ್ನಗಳನ್ನು ಮತ್ತೆ ಸಕ್ರಿಯಗೊಳಿಸಿದ್ದೇವೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಸೂಕ್ತ ಅಭ್ಯರ್ಥಿಗಳ ಶೋಧ ಶುರುವಾಗಿದೆ’ ಎನ್ನುತ್ತಾರೆ ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್.</p>.<p>‘ಬಿಜೆಪಿಯ ಗೆಲುವಿಗೆ ಪೂರಕ ವಾತಾವರಣವಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಇಬ್ಬರು ಸಂಸದರು, ಶಾಸಕರ ಸಾರಥ್ಯದಲ್ಲಿ ಚುನಾವಣೆ ಎದುರಿಸುತ್ತೇವೆ. ಪಂಚಾಯಿತಿ ಚುಕ್ಕಾಣಿ ಹಿಡಿಯಲು ಈಗಿನಿಂದಲೇ ಕಾರ್ಯ ಯೋಜನೆ ರೂಪಿಸಿದ್ದೇವೆ’ ಎಂದರು.</p>.<p class="Briefhead"><strong>ಜನಾಭಿಪ್ರಾಯವೇ ಮಾನದಂಡ</strong></p>.<p>‘ಸಿದ್ದರಾಮಯ್ಯ ಸಾರಥ್ಯದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ಸಭೆ ನಡೆದಿದೆ. ಪ್ರಭಾವ, ದುಡ್ಡಿರೋರಿಗೆ ಮಣೆ ಹಾಕಲ್ಲ. ಜನಾಭಿಪ್ರಾಯ ಕೇಳಿ ಬಂದವರಿಗೆ ಈ ಬಾರಿ ಟಿಕೆಟ್ ಕೊಡಲಾಗುವುದು’ ಎನ್ನುತ್ತಾರೆ ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್.</p>.<p>‘ಸರ್ವೆ ನಡೆಸುತ್ತೇವೆ. ಯುವಕರಿಗೆ ಹಾಗೂ ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ಕೊಡಲಾಗುವುದು. ಪ್ರತಿ ತಾಲ್ಲೂಕಿ ಗೊಂದು ಹತ್ತು ಜನರ ಸ್ಕ್ರೀನಿಂಗ್ ಸಮಿತಿ ಮಾಡುತ್ತೇವೆ. ಈ ಸಮಿತಿ ಶಿಫಾರಸು ಮಾಡಿದವರಿಗೆ ಮನ್ನಣೆ ನೀಡುತ್ತೇವೆ’ ಎಂದರು.</p>.<p class="Briefhead"><strong>ಸಾಮೂಹಿಕ ನಾಯಕತ್ವ: ಜೆಡಿಎಸ್</strong></p>.<p>‘ಸಾಮೂಹಿಕ ನಾಯಕತ್ವದಲ್ಲಿ ಪಂಚಾಯಿತಿ ಚುನಾವಣೆ ಎದುರಿಸುವಂತೆ ವರಿಷ್ಠರು ಸೂಚಿಸಿದ್ದಾರೆ. ಬುಧವಾರವಷ್ಟೇ ಈ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆದಿದೆ’ ಎಂದು ಜೆಡಿಎಸ್ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಎನ್.ನರಸಿಂಹಮೂರ್ತಿ ತಿಳಿಸಿದರು.</p>.<p>‘ಪಕ್ಷದ ಟಿಕೆಟ್ಗಾಗಿ ಭಾರಿ ಬೇಡಿಕೆಯಿದೆ. ಮೀಸಲು ಕ್ಷೇತ್ರಗಳಲ್ಲೂ ಹಲವರು ಟಿಕೆಟ್ ಕೇಳುತ್ತಿದ್ದಾರೆ. ಬಹುಮತದೊಂದಿಗೆ ಜಿಲ್ಲಾ ಪಂಚಾಯಿತಿ ಚುಕ್ಕಾಣಿ ಹಿಡಿಯುವ ಗುರಿ ನಮ್ಮದು. ನಾಲ್ವರು ಶಾಸಕರು, ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>