<p><strong>ಮೈಸೂರು</strong>: ‘ಪಕ್ಷದಿಂದ ನಡೆಸಿದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದ ಸಮಾರೋಪವನ್ನು ಭಾನುವಾರ (ಮೇ 17) ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದಾಗಿಯೇ ಶಾಸಕ ಜಿ.ಟಿ. ದೇವೇಗೌಡರು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ, ಹುಟ್ಟುಹಬ್ಬದ ಶುಭಾಶಯಗಳನ್ನು ಬಹಳ ಮಂಚಿತವಾಗಿಯೇ ತಿಳಿಸಿದ್ದಾರೆ. ಈ ಎಲ್ಲಾ ತಂತ್ರಗಳೂ ನಮಗೆ ಅರ್ಥವಾಗುತ್ತವೆ’ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಟೀಕಿಸಿದರು.</p><p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಟಿಡಿ ಅವರು ಮಾಡಿದ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿಯುವುದಾದರೆ ನಮ್ಮ ಅಭ್ಯಂತರವೇನೂ ಇಲ್ಲ. ಪಕ್ಷದ ವರಿಷ್ಠರಿಗೆ ಅವರ ಮೇಲೆ ನಂಬಿಕೆ ಬಂದು ಅವರನ್ನು ಉಳಿಸಿಕೊಳ್ಳುವುದಾದರೆ ಅದಕ್ಕೂ ನಮ್ಮ ಅಭ್ಯಂತರವಿಲ್ಲ’ ಎಂದರು.</p><p>‘ಜಿಟಿಡಿ ಅವರಿಂದ ನಮ್ಮ ಪಕ್ಷಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ಅವರು ಒಂದೊಂದು ಚುನಾವಣೆಯಲ್ಲೂ ಒಂದೊಂದು ತೀರ್ಮಾನ ಮಾಡುತ್ತಾರೆ. ಅವರ ನಿರ್ಧಾರಗಳಿಂದ ನಮ್ಮ ಕಾರ್ಯಕರ್ತರಿಗೆ ಅಘಾತವಾಗಿದೆ’ ಎಂದು ದೂರಿದರು.</p><p>‘ಪಕ್ಷಕ್ಕಿಂತ ನಮಗೆ ದೊಡ್ಡವರ್ಯಾರೂ ಇಲ್ಲ. ನಿಷ್ಠಾವಂತ ಕಾರ್ಯಕರ್ತರ ಅನಿವಾರ್ಯತೆ ಇದೆಯೇ ಹೊರತು, ಇಂತಹ (ಜಿಟಿಡಿ) ನಾಯಕರ ಅನಿವಾರ್ಯತೆ ಏನಿಲ್ಲ. ಜಿ.ಟಿ. ದೇವೇಗೌಡರಿಗೆ ಎಲ್ಲಾ ಅಧಿಕಾರವನ್ನೂ ಪಕ್ಷ ಕೊಟ್ಟಿತ್ತು. ಆದರೆ, ಅವರು ಪಕ್ಷಕ್ಕೆ ಮೋಸ ಮಾಡಿದರು. ಈ ಕಾರಣದಿಂದಾಗಿಯೇ ಈ ಭಾಗದಲ್ಲಿ ಸಾಮೂಹಿಕ ನಾಯಕತ್ವವನ್ನು ನಾವು ಕಟ್ಟಿಕೊಂಡಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪಕ್ಷದಿಂದ ನಡೆಸಿದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದ ಸಮಾರೋಪವನ್ನು ಭಾನುವಾರ (ಮೇ 17) ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದಾಗಿಯೇ ಶಾಸಕ ಜಿ.ಟಿ. ದೇವೇಗೌಡರು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ, ಹುಟ್ಟುಹಬ್ಬದ ಶುಭಾಶಯಗಳನ್ನು ಬಹಳ ಮಂಚಿತವಾಗಿಯೇ ತಿಳಿಸಿದ್ದಾರೆ. ಈ ಎಲ್ಲಾ ತಂತ್ರಗಳೂ ನಮಗೆ ಅರ್ಥವಾಗುತ್ತವೆ’ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಟೀಕಿಸಿದರು.</p><p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಟಿಡಿ ಅವರು ಮಾಡಿದ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿಯುವುದಾದರೆ ನಮ್ಮ ಅಭ್ಯಂತರವೇನೂ ಇಲ್ಲ. ಪಕ್ಷದ ವರಿಷ್ಠರಿಗೆ ಅವರ ಮೇಲೆ ನಂಬಿಕೆ ಬಂದು ಅವರನ್ನು ಉಳಿಸಿಕೊಳ್ಳುವುದಾದರೆ ಅದಕ್ಕೂ ನಮ್ಮ ಅಭ್ಯಂತರವಿಲ್ಲ’ ಎಂದರು.</p><p>‘ಜಿಟಿಡಿ ಅವರಿಂದ ನಮ್ಮ ಪಕ್ಷಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ಅವರು ಒಂದೊಂದು ಚುನಾವಣೆಯಲ್ಲೂ ಒಂದೊಂದು ತೀರ್ಮಾನ ಮಾಡುತ್ತಾರೆ. ಅವರ ನಿರ್ಧಾರಗಳಿಂದ ನಮ್ಮ ಕಾರ್ಯಕರ್ತರಿಗೆ ಅಘಾತವಾಗಿದೆ’ ಎಂದು ದೂರಿದರು.</p><p>‘ಪಕ್ಷಕ್ಕಿಂತ ನಮಗೆ ದೊಡ್ಡವರ್ಯಾರೂ ಇಲ್ಲ. ನಿಷ್ಠಾವಂತ ಕಾರ್ಯಕರ್ತರ ಅನಿವಾರ್ಯತೆ ಇದೆಯೇ ಹೊರತು, ಇಂತಹ (ಜಿಟಿಡಿ) ನಾಯಕರ ಅನಿವಾರ್ಯತೆ ಏನಿಲ್ಲ. ಜಿ.ಟಿ. ದೇವೇಗೌಡರಿಗೆ ಎಲ್ಲಾ ಅಧಿಕಾರವನ್ನೂ ಪಕ್ಷ ಕೊಟ್ಟಿತ್ತು. ಆದರೆ, ಅವರು ಪಕ್ಷಕ್ಕೆ ಮೋಸ ಮಾಡಿದರು. ಈ ಕಾರಣದಿಂದಾಗಿಯೇ ಈ ಭಾಗದಲ್ಲಿ ಸಾಮೂಹಿಕ ನಾಯಕತ್ವವನ್ನು ನಾವು ಕಟ್ಟಿಕೊಂಡಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>