ದೇವಾಲಯದ ಪ್ರಾಂಗಣದಲ್ಲಿ ಮಧ್ಯಾಹ್ನದ ವೇಳೆ, ಹೂವಿನಿಂದ ಅಲಂಕೃತಗೊಂಡಿದ್ದ ರಥದಲ್ಲಿ ಯೋಗನರಸಿಂಹಸ್ವಾಮಿಯ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಅರ್ಚಕ ಶ್ರೀನಿವಾಸ್ ಅಯ್ಯಂಗಾರ್ ಪ್ರತಿಷ್ಠಾಪನೆ ಮಾಡುತ್ತಿದ್ದಂತೆ ನೂರಾರು ಮಂದಿ ಭಕ್ತರು ಯೋಗ ನರಸಿಂಹಸ್ವಾಮಿಗೆ ಜಯಘೋಷಣೆ ಕೂಗುತ್ತಾ ಬ್ರಹ್ಮರಥವನ್ನು ದೇವಾಲಯದ ಸುತ್ತ ಎಳೆದು ಸಂಭ್ರಮಿಸಿದರು.