<p>ಸಾಲಿಗ್ರಾಮ: ‘ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಗಾಗಿಯೇ ಆಯೋಜನೆ ಮಾಡುತ್ತಿರುವ ಮಹಿಳಾ ವಿಶೇಷ ಗ್ರಾಮಸಭೆಗಳಿಗೆ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಪಡೆದುಕೊಳ್ಳಬೇಕು’ ಎಂದು ಸಾಲಿಗ್ರಾಮ ತಾಲ್ಲೂಕು ಪಂಚಾಯಿತಿ ಇಒ ಎ.ಎನ್.ರವಿಕುಮಾರ್ ಮನವಿ ಮಾಡಿದರು.</p>.<p>ತಾಲ್ಲೂಕಿನ ಭೇರ್ಯ ಗ್ರಾಮ ಪಂಚಾಯಿತಿ ಆಯೋಜನೆ ಮಾಡಿದ್ದ ‘ಮಹಿಳಾ ವಿಶೇಷ ಗ್ರಾಮಸಭೆ’ಯಲ್ಲಿ ಮಾತನಾಡಿ, ‘ಸಭೆಗಳಿಗೆ ಭಾಗವಹಿಸಿದರೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ತಿಳಿದು ಕೊಳ್ಳುವ ಜತೆಗೆ ನಿಮಗೆ ಆಗುತ್ತಿರುವ ತೊಂದರೆಗಳಿಗೂ ಪರಿಹಾರ ದೊರೆಯುತ್ತದೆ’ ಎಂದರು.</p>.<p>‘ಮಹಿಳೆಯರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಸರ್ಕಾರಗಳು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಭೆಯಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಿ ಕೊಳ್ಳಲಾಗುತ್ತದೆ’ ಎಂದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕಿ ರೋಜಾ ಮಹೇಶ್, ದೈಹಿಕ ಶಿಕ್ಷಣ ಶಿಕ್ಷಕಿ ಎ.ಪುಷ್ಪಲತಾ, ಆರೋಗ್ಯ ಇಲಾಖೆ ಸಿಬ್ಬಂದಿ ಡಿಸೋಜಾ, ಅಂಗನವಾಡಿ ಕಾರ್ಯಕರ್ತೆ ಹಸೀನಾ ಬೇಗಂ, ಆಶಾ ಕಾರ್ಯಕರ್ತೆ ಆಶಾ ಅವರುಗಳನ್ನು ಪಿಡಿಒ ಮಮತಾ ಗೌರವಿಸಿದರು.</p>.<p>ಸಭೆಯಲ್ಲಿ ಲೆಕ್ಕಾಧಿಕಾರಿ ಅಶ್ವಿನಿ ಸುನೈಯ್ಗೌಡ, ಆರೋಗ್ಯ ಇಲಾಖೆ ಸಿಬ್ಬಂದಿ ಹೇಮಲತಾ, ರೇಷ್ಮಾಬೇಗಂ, ಡಿಇಒ ಜಯಂತ್, ಗ್ರಾ.ಪಂ.ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ, ರೂಪಾಹರೀಶ್, ಸಿಬ್ಬಂದಿ ಕುಮಾರ್, ಯೋಗೇಶ್, ರಮೇಶ, ಸ್ವಾಮಿಗೌಡ, ಚಿನ್ನರಾಜ್, ಮಹದೇವ, ಹರೀಶ್, ಪೌರಕಾರ್ಮಿಕ ಚಿನ್ನ, ಚಾಲಕಿ ದಿವ್ಯಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-38-1048369736</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಲಿಗ್ರಾಮ: ‘ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಗಾಗಿಯೇ ಆಯೋಜನೆ ಮಾಡುತ್ತಿರುವ ಮಹಿಳಾ ವಿಶೇಷ ಗ್ರಾಮಸಭೆಗಳಿಗೆ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಪಡೆದುಕೊಳ್ಳಬೇಕು’ ಎಂದು ಸಾಲಿಗ್ರಾಮ ತಾಲ್ಲೂಕು ಪಂಚಾಯಿತಿ ಇಒ ಎ.ಎನ್.ರವಿಕುಮಾರ್ ಮನವಿ ಮಾಡಿದರು.</p>.<p>ತಾಲ್ಲೂಕಿನ ಭೇರ್ಯ ಗ್ರಾಮ ಪಂಚಾಯಿತಿ ಆಯೋಜನೆ ಮಾಡಿದ್ದ ‘ಮಹಿಳಾ ವಿಶೇಷ ಗ್ರಾಮಸಭೆ’ಯಲ್ಲಿ ಮಾತನಾಡಿ, ‘ಸಭೆಗಳಿಗೆ ಭಾಗವಹಿಸಿದರೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ತಿಳಿದು ಕೊಳ್ಳುವ ಜತೆಗೆ ನಿಮಗೆ ಆಗುತ್ತಿರುವ ತೊಂದರೆಗಳಿಗೂ ಪರಿಹಾರ ದೊರೆಯುತ್ತದೆ’ ಎಂದರು.</p>.<p>‘ಮಹಿಳೆಯರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಸರ್ಕಾರಗಳು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಭೆಯಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಿ ಕೊಳ್ಳಲಾಗುತ್ತದೆ’ ಎಂದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕಿ ರೋಜಾ ಮಹೇಶ್, ದೈಹಿಕ ಶಿಕ್ಷಣ ಶಿಕ್ಷಕಿ ಎ.ಪುಷ್ಪಲತಾ, ಆರೋಗ್ಯ ಇಲಾಖೆ ಸಿಬ್ಬಂದಿ ಡಿಸೋಜಾ, ಅಂಗನವಾಡಿ ಕಾರ್ಯಕರ್ತೆ ಹಸೀನಾ ಬೇಗಂ, ಆಶಾ ಕಾರ್ಯಕರ್ತೆ ಆಶಾ ಅವರುಗಳನ್ನು ಪಿಡಿಒ ಮಮತಾ ಗೌರವಿಸಿದರು.</p>.<p>ಸಭೆಯಲ್ಲಿ ಲೆಕ್ಕಾಧಿಕಾರಿ ಅಶ್ವಿನಿ ಸುನೈಯ್ಗೌಡ, ಆರೋಗ್ಯ ಇಲಾಖೆ ಸಿಬ್ಬಂದಿ ಹೇಮಲತಾ, ರೇಷ್ಮಾಬೇಗಂ, ಡಿಇಒ ಜಯಂತ್, ಗ್ರಾ.ಪಂ.ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ, ರೂಪಾಹರೀಶ್, ಸಿಬ್ಬಂದಿ ಕುಮಾರ್, ಯೋಗೇಶ್, ರಮೇಶ, ಸ್ವಾಮಿಗೌಡ, ಚಿನ್ನರಾಜ್, ಮಹದೇವ, ಹರೀಶ್, ಪೌರಕಾರ್ಮಿಕ ಚಿನ್ನ, ಚಾಲಕಿ ದಿವ್ಯಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-38-1048369736</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>