<p><strong>ಮೈಸೂರು:</strong> ಇಲ್ಲಿನ ಜೆಎಸ್ಎಸ್ ಮಠದ ಆವರಣದಲ್ಲಿ ಜುಲೈ 10 ಮತ್ತು 13ರಂದು 6 ಗಂಧದ ಮರಗಳನ್ನು ಕತ್ತರಿಸಿ ಕದ್ದೋಯ್ದಿದ್ದ ಮೂವರು ಆರೋಪಿಗಳನ್ನು ನಗರ ಅಪರಾಧ ಪತ್ತೆ ವಿಭಾಗ (ಸಿಸಿಬಿ)ದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ವಿದ್ಯಾರಣ್ಯಪುರಂ ನಿವಾಸಿ ಸಂಪತ್ಕುಮಾರ್ (32), ಬೊಂಬು ಬಜಾರ್ನ ಪರಶುರಾಂ (38), ಶಾಂತಿನಗರದ ಸೈಯೀದ್ ರಹೀಂ (22) ಬಂಧಿತರು. ಇವರಿಂದ ₹ 4 ಲಕ್ಷ ಮೌಲ್ಯದ 40 ಕೆ.ಜಿಯಷ್ಟು ತೂಕದ ಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಇವರು ಗೌರಿಶಂಕರನಗರದ ಬಸ್ನಿಲ್ದಾಣದ ಮುಂಭಾಗ ಎರಡು ಪ್ಲಾಸ್ಟಿಕ್ ಚೀಲಗಳಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಹಿಡಿದುಕೊಂಡು ನಿಂತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ವಿಚಾರಣೆ ನಡೆಸಿದಾಗ ಇವರು ಸುತ್ತೂರು ಮಠದ ಆವರಣದಲ್ಲಿ ಗಂಧದ ಮರಗಳನ್ನು ಕಳವು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರ ವಿರುದ್ಧ ಈಗಾಗಲೇ ಹುಣಸೂರು, ಕೊಡಗು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಶ್ರೀಗಂಧದ ಕಳವು ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಗರ ಅಪರಾಧ ವಿಭಾಗದ ಡಿಸಿಪಿ ಬಿ.ಟಿ.ಕವಿತಾ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಸಿ.ಕಿರಣ್ಕುಮಾರ್ ನೇತೃತ್ವದ ತಂಡವು ಕಳ್ಳರನ್ನು ಬಂಧಿಸಿದೆ. ಎಎಸ್ಐ ಚಂದ್ರೇಗೌಡ, ಅಲೆಗ್ಸಾಂಡರ್, ಸಿಬ್ಬಂದಿಯಾದ ರಾಮಸ್ವಾಮಿ, ಯಾಕುಬ್ ಷರೀಫ್, ಎಂ.ಆರ್.ಗಣೇಶ್, ಶಿವರಾಜು, ಲಕ್ಷ್ಮೀಕಾಂತ, ಚಿಕ್ಕಣ್ಣ, ಆನಂದ, ಗೌತಮ್, ಶಿವಕುಮಾರ್ ಕಾರ್ಯಾಚರಣೆ ತಂಡದಲ್ಲಿದ್ದರು.</p>.<p><strong>ಗಮನ ಬೇರೆಡೆ ಸೆಳೆದು ಕಳ್ಳತನ</strong></p>.<p><strong>ಮೈಸೂರು: </strong>ಇಲ್ಲಿನ ಆಕಾಶವಾಣಿ ಸಮೀಪ ಬ್ಯಾಂಕಿನಿಂದ ಚಂದ್ರು ಎಂಬುವವರು ₹ 50 ಸಾವಿರ ಹಣ ತೆಗೆದುಕೊಂಡು ಬೈಕ್ನಲ್ಲಿ ಇಟ್ಟುಕೊಂಡು ನಿಂತಿದ್ದಾಗ ವ್ಯಕ್ತಿಯೊಬ್ದರು ಶರ್ಟ್ ಮೇಲೆ ಕಸ ಬಿದ್ದಿದೆ ಎಂದು ಹೇಳಿದ್ದಾರೆ. ಮತ್ತೊಬ್ಬ ಸ್ವಲ್ಪ ದೂರದಲ್ಲಿ ಹಣ ಬಿದ್ದಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಹಣ ತೆಗೆದುಕೊಳ್ಳಲು ಹೋದಾಗ ಕಳ್ಳರು ಬೈಕ್ನಲ್ಲಿ ಇಟ್ಟಿದ್ದ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿ.ವಿ.ಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಜೆಎಸ್ಎಸ್ ಮಠದ ಆವರಣದಲ್ಲಿ ಜುಲೈ 10 ಮತ್ತು 13ರಂದು 6 ಗಂಧದ ಮರಗಳನ್ನು ಕತ್ತರಿಸಿ ಕದ್ದೋಯ್ದಿದ್ದ ಮೂವರು ಆರೋಪಿಗಳನ್ನು ನಗರ ಅಪರಾಧ ಪತ್ತೆ ವಿಭಾಗ (ಸಿಸಿಬಿ)ದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ವಿದ್ಯಾರಣ್ಯಪುರಂ ನಿವಾಸಿ ಸಂಪತ್ಕುಮಾರ್ (32), ಬೊಂಬು ಬಜಾರ್ನ ಪರಶುರಾಂ (38), ಶಾಂತಿನಗರದ ಸೈಯೀದ್ ರಹೀಂ (22) ಬಂಧಿತರು. ಇವರಿಂದ ₹ 4 ಲಕ್ಷ ಮೌಲ್ಯದ 40 ಕೆ.ಜಿಯಷ್ಟು ತೂಕದ ಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಇವರು ಗೌರಿಶಂಕರನಗರದ ಬಸ್ನಿಲ್ದಾಣದ ಮುಂಭಾಗ ಎರಡು ಪ್ಲಾಸ್ಟಿಕ್ ಚೀಲಗಳಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಹಿಡಿದುಕೊಂಡು ನಿಂತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ವಿಚಾರಣೆ ನಡೆಸಿದಾಗ ಇವರು ಸುತ್ತೂರು ಮಠದ ಆವರಣದಲ್ಲಿ ಗಂಧದ ಮರಗಳನ್ನು ಕಳವು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರ ವಿರುದ್ಧ ಈಗಾಗಲೇ ಹುಣಸೂರು, ಕೊಡಗು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಶ್ರೀಗಂಧದ ಕಳವು ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಗರ ಅಪರಾಧ ವಿಭಾಗದ ಡಿಸಿಪಿ ಬಿ.ಟಿ.ಕವಿತಾ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಸಿ.ಕಿರಣ್ಕುಮಾರ್ ನೇತೃತ್ವದ ತಂಡವು ಕಳ್ಳರನ್ನು ಬಂಧಿಸಿದೆ. ಎಎಸ್ಐ ಚಂದ್ರೇಗೌಡ, ಅಲೆಗ್ಸಾಂಡರ್, ಸಿಬ್ಬಂದಿಯಾದ ರಾಮಸ್ವಾಮಿ, ಯಾಕುಬ್ ಷರೀಫ್, ಎಂ.ಆರ್.ಗಣೇಶ್, ಶಿವರಾಜು, ಲಕ್ಷ್ಮೀಕಾಂತ, ಚಿಕ್ಕಣ್ಣ, ಆನಂದ, ಗೌತಮ್, ಶಿವಕುಮಾರ್ ಕಾರ್ಯಾಚರಣೆ ತಂಡದಲ್ಲಿದ್ದರು.</p>.<p><strong>ಗಮನ ಬೇರೆಡೆ ಸೆಳೆದು ಕಳ್ಳತನ</strong></p>.<p><strong>ಮೈಸೂರು: </strong>ಇಲ್ಲಿನ ಆಕಾಶವಾಣಿ ಸಮೀಪ ಬ್ಯಾಂಕಿನಿಂದ ಚಂದ್ರು ಎಂಬುವವರು ₹ 50 ಸಾವಿರ ಹಣ ತೆಗೆದುಕೊಂಡು ಬೈಕ್ನಲ್ಲಿ ಇಟ್ಟುಕೊಂಡು ನಿಂತಿದ್ದಾಗ ವ್ಯಕ್ತಿಯೊಬ್ದರು ಶರ್ಟ್ ಮೇಲೆ ಕಸ ಬಿದ್ದಿದೆ ಎಂದು ಹೇಳಿದ್ದಾರೆ. ಮತ್ತೊಬ್ಬ ಸ್ವಲ್ಪ ದೂರದಲ್ಲಿ ಹಣ ಬಿದ್ದಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಹಣ ತೆಗೆದುಕೊಳ್ಳಲು ಹೋದಾಗ ಕಳ್ಳರು ಬೈಕ್ನಲ್ಲಿ ಇಟ್ಟಿದ್ದ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿ.ವಿ.ಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>