<p><strong>ಮೈಸೂರು:</strong> ನಗರದಲ್ಲಿ ಗಂಧಚೋರರು ಭದ್ರತಾ ಸಿಬ್ಬಂದಿ ಕಾವಲಿರುವ ಪ್ರದೇಶಗಳಲ್ಲೇ ಗಂಧದ ಮರಗಳನ್ನು ಕಳವು ಮಾಡುವ ಮೂಲಕ ಪೊಲೀಸರಿಗೆ ಸೆಡ್ಡು ಹೊಡೆದಿದ್ದಾರೆ. ಇವರ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸುವ ಚಿಂತನೆ ನಡೆಸಿದ್ದಾರೆ.</p>.<p>ಮಾರ್ಚ್ ತಿಂಗಳಿನಲ್ಲಿ ಬಿಗಿಭದ್ರತೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿವಾಸದ ಆವರಣ ಹಾಗೂ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ ಗಂಧದ ಮರಗಳನ್ನು ಕಳ್ಳರು ಕಳವು ಮಾಡಿದ್ದರು. ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 13 ಕಳ್ಳಸಾಗಾಣಿಕೆದಾರರನ್ನು ಹಿಡಿದು 4 ಟನ್ ಗಂಧದಮರಗಳನ್ನು ಪೊಲೀಸರು ವಶಪಡಿಸಿಕೊಂಡ ನಂತರ ನಗರದಲ್ಲೂ ಗಂಧದ ಮರದ ಕಳ್ಳತನ ಪ್ರಕರಣಗಳು ತಗ್ಗಿದ್ದವು. ಆದರೆ, ಈಗ ಮತ್ತೆ ಕಳ್ಳರ ತಂಡ ಶ್ರೀಗಂಧದ ಎಣ್ಣೆ ಕಾರ್ಖಾನೆ ಹಾಗೂ ಅರಣ್ಯ ಇಲಾಖೆಗೆ ಸೇರಿದ ಅರಣ್ಯಭವನದ ಆವರಣದಲ್ಲಿನ ಭಾರಿ ಗಾತ್ರದ ಮರಗಳನ್ನು ಕತ್ತರಿಸಿ ಕದ್ದೊಯ್ದಿವೆ.</p>.<p>ಚೀನಾದಲ್ಲಿ ನ್ಯೂಕ್ಲಿಯರ್ ರಿಯಾಕ್ಟರ್ಗಳನ್ನು ತಂಪುಗೊಳಿಸಲು ಗಂಧದಮರಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಸಂಬಂಧ ಸಂಶೋಧನೆಗಳೂ ನಡೆಯುತ್ತಿವೆ. ಹಾಗಾಗಿ, ಚೀನಾದಲ್ಲಿ ಅತಿ ಹೆಚ್ಚಿನ ಬೇಡಿಕೆ ಗಂಧದ ಮರಗಳಿಗೆ ಸೃಷ್ಟಿಯಾಗಿದೆ ಎಂದು ಹೆಸರು ಹೇಳಲು ಬಯಸದ ಅಧಿಕಾರಿಯೊಬ್ಬರು ಹೇಳುತ್ತಾರೆ.</p>.<p>ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ತರಕಾರಿಗಳ ಮಧ್ಯೆ ಇಟ್ಟು ಸಾಗಣೆ ಮಾಡಲಾಗುತ್ತಿದೆ. ಕೆಲವು ಕಡೆ ಮೀನುಗಳ ಮಧ್ಯೆ ಇಟ್ಟು ರವಾನಿಸಲಾಗುತ್ತಿದೆ. ಇಂತಹ ಸಾಗಣೆಯನ್ನು ಪತ್ತೆ ಹಚ್ಚುವುದು ಚೆಕ್ಪೋಸ್ಟ್ಗಳ ಸಿಬ್ಬಂದಿಗಳಿಗೂ ಕಷ್ಟಕರವಾಗಿದೆ ಎಂದು ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರು ತಿಳಿಸುತ್ತಾರೆ.</p>.<p>ಈ ಮೊದಲು ಕೇವಲ ಸುಗಂಧ ದ್ರವ್ಯ, ಐಷಾರಾಮಿ ಬದುಕಿಗಷ್ಟೇ ಬಳಕೆಯಾಗುತ್ತಿದ್ದವು. ಸಿರಿವಂತರು ಮಾತ್ರ ಇಂತಹ ಉತ್ಪನ್ನಗಳನ್ನು ಖರೀದಿಸುತ್ತಿದ್ದರು. ಆದರೆ, ಈಗ ಚೀನಾದಲ್ಲಿ ನಡೆಯುತ್ತಿರುವ ಹೊಸ ಹೊಸ ರಹಸ್ಯ ಸಂಶೋಧನೆಗಳಿಗೆ ಬಳಕೆ ಆಗುತ್ತಿರುವುದು ಕಾಳಸಂತೆಯಲ್ಲಿ ಬೇಡಿಕೆ ಹೆಚ್ಚುವಂತೆ ಮಾಡಿದೆ.</p>.<p>ಲಿಂಗಾಂಬುಧಿ ಕೆರೆ ಆವರಣದಲ್ಲಿ ಗಂಧದ ಮರದ ಕಳವಿಗೆ ಯತ್ನಿಸಿದ ವ್ಯಕ್ತಿಯನ್ನು 2017ರ ಫೆ. 11ರಂದು ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿ ಕೊಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದಲ್ಲಿ ಗಂಧಚೋರರು ಭದ್ರತಾ ಸಿಬ್ಬಂದಿ ಕಾವಲಿರುವ ಪ್ರದೇಶಗಳಲ್ಲೇ ಗಂಧದ ಮರಗಳನ್ನು ಕಳವು ಮಾಡುವ ಮೂಲಕ ಪೊಲೀಸರಿಗೆ ಸೆಡ್ಡು ಹೊಡೆದಿದ್ದಾರೆ. ಇವರ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸುವ ಚಿಂತನೆ ನಡೆಸಿದ್ದಾರೆ.</p>.<p>ಮಾರ್ಚ್ ತಿಂಗಳಿನಲ್ಲಿ ಬಿಗಿಭದ್ರತೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿವಾಸದ ಆವರಣ ಹಾಗೂ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ ಗಂಧದ ಮರಗಳನ್ನು ಕಳ್ಳರು ಕಳವು ಮಾಡಿದ್ದರು. ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 13 ಕಳ್ಳಸಾಗಾಣಿಕೆದಾರರನ್ನು ಹಿಡಿದು 4 ಟನ್ ಗಂಧದಮರಗಳನ್ನು ಪೊಲೀಸರು ವಶಪಡಿಸಿಕೊಂಡ ನಂತರ ನಗರದಲ್ಲೂ ಗಂಧದ ಮರದ ಕಳ್ಳತನ ಪ್ರಕರಣಗಳು ತಗ್ಗಿದ್ದವು. ಆದರೆ, ಈಗ ಮತ್ತೆ ಕಳ್ಳರ ತಂಡ ಶ್ರೀಗಂಧದ ಎಣ್ಣೆ ಕಾರ್ಖಾನೆ ಹಾಗೂ ಅರಣ್ಯ ಇಲಾಖೆಗೆ ಸೇರಿದ ಅರಣ್ಯಭವನದ ಆವರಣದಲ್ಲಿನ ಭಾರಿ ಗಾತ್ರದ ಮರಗಳನ್ನು ಕತ್ತರಿಸಿ ಕದ್ದೊಯ್ದಿವೆ.</p>.<p>ಚೀನಾದಲ್ಲಿ ನ್ಯೂಕ್ಲಿಯರ್ ರಿಯಾಕ್ಟರ್ಗಳನ್ನು ತಂಪುಗೊಳಿಸಲು ಗಂಧದಮರಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಸಂಬಂಧ ಸಂಶೋಧನೆಗಳೂ ನಡೆಯುತ್ತಿವೆ. ಹಾಗಾಗಿ, ಚೀನಾದಲ್ಲಿ ಅತಿ ಹೆಚ್ಚಿನ ಬೇಡಿಕೆ ಗಂಧದ ಮರಗಳಿಗೆ ಸೃಷ್ಟಿಯಾಗಿದೆ ಎಂದು ಹೆಸರು ಹೇಳಲು ಬಯಸದ ಅಧಿಕಾರಿಯೊಬ್ಬರು ಹೇಳುತ್ತಾರೆ.</p>.<p>ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ತರಕಾರಿಗಳ ಮಧ್ಯೆ ಇಟ್ಟು ಸಾಗಣೆ ಮಾಡಲಾಗುತ್ತಿದೆ. ಕೆಲವು ಕಡೆ ಮೀನುಗಳ ಮಧ್ಯೆ ಇಟ್ಟು ರವಾನಿಸಲಾಗುತ್ತಿದೆ. ಇಂತಹ ಸಾಗಣೆಯನ್ನು ಪತ್ತೆ ಹಚ್ಚುವುದು ಚೆಕ್ಪೋಸ್ಟ್ಗಳ ಸಿಬ್ಬಂದಿಗಳಿಗೂ ಕಷ್ಟಕರವಾಗಿದೆ ಎಂದು ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರು ತಿಳಿಸುತ್ತಾರೆ.</p>.<p>ಈ ಮೊದಲು ಕೇವಲ ಸುಗಂಧ ದ್ರವ್ಯ, ಐಷಾರಾಮಿ ಬದುಕಿಗಷ್ಟೇ ಬಳಕೆಯಾಗುತ್ತಿದ್ದವು. ಸಿರಿವಂತರು ಮಾತ್ರ ಇಂತಹ ಉತ್ಪನ್ನಗಳನ್ನು ಖರೀದಿಸುತ್ತಿದ್ದರು. ಆದರೆ, ಈಗ ಚೀನಾದಲ್ಲಿ ನಡೆಯುತ್ತಿರುವ ಹೊಸ ಹೊಸ ರಹಸ್ಯ ಸಂಶೋಧನೆಗಳಿಗೆ ಬಳಕೆ ಆಗುತ್ತಿರುವುದು ಕಾಳಸಂತೆಯಲ್ಲಿ ಬೇಡಿಕೆ ಹೆಚ್ಚುವಂತೆ ಮಾಡಿದೆ.</p>.<p>ಲಿಂಗಾಂಬುಧಿ ಕೆರೆ ಆವರಣದಲ್ಲಿ ಗಂಧದ ಮರದ ಕಳವಿಗೆ ಯತ್ನಿಸಿದ ವ್ಯಕ್ತಿಯನ್ನು 2017ರ ಫೆ. 11ರಂದು ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿ ಕೊಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>