<p><strong>ಸಂತೇಮರಹಳ್ಳಿ:</strong> ಸಮೀಪದ ಕಸ್ತೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ದೊಡ್ಡಮ್ಮ ತಾಯಿ ದೇವಸ್ಥಾನದ ಬೀಗ ಒಡೆದ ಕಳ್ಳರು ದೇವಿ ಮೂರ್ತಿಗೆ ಹಾಕಿದ್ದ 1 ಗ್ರಾಂ ಚಿನ್ನ ಹಾಗೂ ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಕಳ್ಳತನ ಮಾಡಿದ್ದಾರೆ.</p>.<p>ಧನುರ್ಮಾಸ ಪೂಜೆ ಹಿನ್ನೆಲೆಯಲ್ಲಿ ದೇವಸ್ಥಾನದ ಅರ್ಚಕ ಮುಂಜಾನೆ 4 ಗಂಟೆಗೆ ದೇವಸ್ಥಾನಕ್ಕೆ ತೆರಳಿದಾಗ ಬೀಗ ಒಡೆದಿರುವುದು ಗೊತ್ತಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸಂತೇಮರಹಳ್ಳಿ ವೃತ್ತ ನಿರೀಕ್ಷಕ ಸಾಗರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>2 ವರ್ಷದ ಹಿಂದೆಯೂ ದೇವಸ್ಥಾನ ಬೀಗ ಒಡೆದು ಕಳ್ಳತನವಾಗಿತ್ತು. ಹಾಗಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು ಎಂದು ಮುಖಂಡರು ತಿಳಿಸಿದರು. </p>.<p>ವೃತ್ತ ನಿರೀಕ್ಷಕ ಸಾಗರ್ ಮಾತನಾಡಿ, ‘ದೇವಸ್ಥಾನದಲ್ಲಿ ಕಳ್ಳತನವಾಗಿರುವ ನಿಮಿತ್ತ ತಂಡ ರಚನೆ ಮಾಡಿ ಕೂಡಲೇ ಆರೋಪಿಗಳನ್ನು ಬಂಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. <br /> ಉಪ ತಹಶೀಲ್ದಾರ್ ಮಹದೇವನಾಯಕ, ಗ್ರಾಮ ಆಡಳಿತಾಧಿಕಾರಿ ಅಂಜಲಿ, ಗ್ರಾಮ ಸೇವಕ ವಿವಿಯನ್, ಮುಖಂಡರಾದ ಕಸ್ತೂರು ಬಸವಣ್ಣಗೌಡ್ರು, ಮಾದಪ್ಪ, ಬಸವಣ್ಣಪ್ಪ, ಪ್ರಕಾಶ್, ರೇವಣ್ಣ, ಮಹದೇವಯ್ಯ, ಶಿವಕುಮಾರ್, ಸ್ಟಾಲಿನ್, ಪ್ರೇಮ್ಕುಮಾರ್ ಸೇರಿದಂತೆ ಸುತ್ತಲಿನ ಗ್ರಾಮಗಳ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ:</strong> ಸಮೀಪದ ಕಸ್ತೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ದೊಡ್ಡಮ್ಮ ತಾಯಿ ದೇವಸ್ಥಾನದ ಬೀಗ ಒಡೆದ ಕಳ್ಳರು ದೇವಿ ಮೂರ್ತಿಗೆ ಹಾಕಿದ್ದ 1 ಗ್ರಾಂ ಚಿನ್ನ ಹಾಗೂ ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಕಳ್ಳತನ ಮಾಡಿದ್ದಾರೆ.</p>.<p>ಧನುರ್ಮಾಸ ಪೂಜೆ ಹಿನ್ನೆಲೆಯಲ್ಲಿ ದೇವಸ್ಥಾನದ ಅರ್ಚಕ ಮುಂಜಾನೆ 4 ಗಂಟೆಗೆ ದೇವಸ್ಥಾನಕ್ಕೆ ತೆರಳಿದಾಗ ಬೀಗ ಒಡೆದಿರುವುದು ಗೊತ್ತಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸಂತೇಮರಹಳ್ಳಿ ವೃತ್ತ ನಿರೀಕ್ಷಕ ಸಾಗರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>2 ವರ್ಷದ ಹಿಂದೆಯೂ ದೇವಸ್ಥಾನ ಬೀಗ ಒಡೆದು ಕಳ್ಳತನವಾಗಿತ್ತು. ಹಾಗಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು ಎಂದು ಮುಖಂಡರು ತಿಳಿಸಿದರು. </p>.<p>ವೃತ್ತ ನಿರೀಕ್ಷಕ ಸಾಗರ್ ಮಾತನಾಡಿ, ‘ದೇವಸ್ಥಾನದಲ್ಲಿ ಕಳ್ಳತನವಾಗಿರುವ ನಿಮಿತ್ತ ತಂಡ ರಚನೆ ಮಾಡಿ ಕೂಡಲೇ ಆರೋಪಿಗಳನ್ನು ಬಂಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. <br /> ಉಪ ತಹಶೀಲ್ದಾರ್ ಮಹದೇವನಾಯಕ, ಗ್ರಾಮ ಆಡಳಿತಾಧಿಕಾರಿ ಅಂಜಲಿ, ಗ್ರಾಮ ಸೇವಕ ವಿವಿಯನ್, ಮುಖಂಡರಾದ ಕಸ್ತೂರು ಬಸವಣ್ಣಗೌಡ್ರು, ಮಾದಪ್ಪ, ಬಸವಣ್ಣಪ್ಪ, ಪ್ರಕಾಶ್, ರೇವಣ್ಣ, ಮಹದೇವಯ್ಯ, ಶಿವಕುಮಾರ್, ಸ್ಟಾಲಿನ್, ಪ್ರೇಮ್ಕುಮಾರ್ ಸೇರಿದಂತೆ ಸುತ್ತಲಿನ ಗ್ರಾಮಗಳ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>