<p><strong>ಸರಗೂರು</strong>: ರೈತರ ಬೆಳೆಗಳಿಗೆ ಹಾನಿ ಮಾಡಿ ಹಾಡಿ ನಿವಾಸಿ ಮಾದ ಎಂಬುವರ ಬಲಿ ಪಡೆದಿದ್ದ 35 ವರ್ಷದ ಗಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.</p>.<p>ಗುರುವಾರ ಬೆಳಗ್ಗೆ ಕಾಡಾನೆ ಮಠದಕಟ್ಟೆ, ಕಾಟವಾಳು ಗ್ರಾಮದ ಜಮೀನಿನಲ್ಲಿದ್ದಾಗ ದುಬಾರಿ ಸಾಕಾನೆ ಶಿಬಿರದ ಏಕಲವ್ಯ, ಸುಗ್ರೀವ, ಪ್ರಶಾಂತ, ಅಯ್ಯಪ್ಪ ಆನೆಗಳ ಸಹಾಯದಿಂದ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದ್ದು, ರಾಮಪುರ ಸಾಕಾನೆ ಶಿಬಿರಕ್ಕೆ ಬಿಡಲಾಗಿದೆ.</p>.<p>ಬಂಡೀಪುರ ಸಿಎಫ್ ಪ್ರಭಾಕರನ್ ನೇತೃತ್ವದಲ್ಲಿ ಯಡಿಯಾಲ ಎಸಿಎಫ್ ಡಿ.ಪರಮೇಶ್ ಅವರ ಮಾರ್ಗದರ್ಶನದಲ್ಲಿ ತಜ್ಞ ಡಾ.ವಾಸೀಂ ಮಿರ್ಜಾ ಅವರು ಆನೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ.</p>.<p>ಸೆರೆ ಸಿಕ್ಕ ಆನೆಗೆ ಬಲದ ಕಣ್ಣಿಗೆ ಪೆಟ್ಟಾಗಿದ್ದು, ಬಲದ ಕಣ್ಣು ಕಾಣಿಸುತ್ತಿಲ್ಲ. ಕಾಡಾನೆ ದಾಳಿಯಿಂದಾಗಿ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೊಳೆಯೂರು ಆರ್ಎಫ್ಒ ನಾರಾಯಣ್, ಗುಂಡ್ರೆ ಆರ್ಎಫ್ಒ ಅಮೃತೇಶ್, ನುಗು ಆರ್ಎಫ್ಒ ಅನಿತ್ರಾಜ್, ಯಡಿಯಾಲ ಆರ್ಎಫ್ಒ ಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು</strong>: ರೈತರ ಬೆಳೆಗಳಿಗೆ ಹಾನಿ ಮಾಡಿ ಹಾಡಿ ನಿವಾಸಿ ಮಾದ ಎಂಬುವರ ಬಲಿ ಪಡೆದಿದ್ದ 35 ವರ್ಷದ ಗಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.</p>.<p>ಗುರುವಾರ ಬೆಳಗ್ಗೆ ಕಾಡಾನೆ ಮಠದಕಟ್ಟೆ, ಕಾಟವಾಳು ಗ್ರಾಮದ ಜಮೀನಿನಲ್ಲಿದ್ದಾಗ ದುಬಾರಿ ಸಾಕಾನೆ ಶಿಬಿರದ ಏಕಲವ್ಯ, ಸುಗ್ರೀವ, ಪ್ರಶಾಂತ, ಅಯ್ಯಪ್ಪ ಆನೆಗಳ ಸಹಾಯದಿಂದ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದ್ದು, ರಾಮಪುರ ಸಾಕಾನೆ ಶಿಬಿರಕ್ಕೆ ಬಿಡಲಾಗಿದೆ.</p>.<p>ಬಂಡೀಪುರ ಸಿಎಫ್ ಪ್ರಭಾಕರನ್ ನೇತೃತ್ವದಲ್ಲಿ ಯಡಿಯಾಲ ಎಸಿಎಫ್ ಡಿ.ಪರಮೇಶ್ ಅವರ ಮಾರ್ಗದರ್ಶನದಲ್ಲಿ ತಜ್ಞ ಡಾ.ವಾಸೀಂ ಮಿರ್ಜಾ ಅವರು ಆನೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ.</p>.<p>ಸೆರೆ ಸಿಕ್ಕ ಆನೆಗೆ ಬಲದ ಕಣ್ಣಿಗೆ ಪೆಟ್ಟಾಗಿದ್ದು, ಬಲದ ಕಣ್ಣು ಕಾಣಿಸುತ್ತಿಲ್ಲ. ಕಾಡಾನೆ ದಾಳಿಯಿಂದಾಗಿ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೊಳೆಯೂರು ಆರ್ಎಫ್ಒ ನಾರಾಯಣ್, ಗುಂಡ್ರೆ ಆರ್ಎಫ್ಒ ಅಮೃತೇಶ್, ನುಗು ಆರ್ಎಫ್ಒ ಅನಿತ್ರಾಜ್, ಯಡಿಯಾಲ ಆರ್ಎಫ್ಒ ಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>