<p><strong>ಸರಗೂರು:</strong> ಪಟ್ಟಣದ 5ನೇ ವಾರ್ಡ್ನಲ್ಲಿ ಸೋಮವಾರ ಇಂದ್ರಾಣಮ್ಮ ದೇವಾಲಯದ 26ನೇ ವರ್ಷದ ಪೂಜಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಹೋಮ ಹವನ, ಗಣಪತಿ ಹೋಮ, ಪುಣ್ಯಾಹ, ಕಳಸ ಪ್ರತಿಷ್ಠಾಪನೆ, ನವಗ್ರಹ ಹೋಮ, ದುರ್ಗಹೋಮ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನಡೆಯಿತು.</p>.<p>ಕಪಿಲಾ ನದಿಗೆ ತೆರಳಿ ಗಂಗೆ ಪೂಜೆ ನಡೆಸಿ, ಪೂರ್ಣಕುಂಭ ಕಳಸದೊಂದಿಗೆ ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಮಂಗಳವಾದ್ಯ, ಸತ್ತಿಗೆ, ಹಳೇ ಹೆಗ್ಗುಡಿಲು ನೀಲಕಂಠ ತಂಡದಿಂದ ವೀರಗಾಸೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳ ಜೊತೆಯಲ್ಲಿ ಮೆರವಣಿಗೆ ನಡೆಸಲಾಯಿತು.</p>.<p>ಉತ್ಸವ ಮೂರ್ತಿಯು ದೇವಾಲಯಕ್ಕೆ ತಲುಪಿದ ನಂತರ ವಿಶೇಷ ಪೂಜೆ ನಡೆಸಿ, ಮಹಾಮಂಗಳಾರತಿ ಮಾಡಿ ಪ್ರಸಾದ ವಿನಿಯೋಗ ಮಾಡಲಾಯಿತು. ನಂತರ ಅನ್ನ ಸಂತರ್ಪಣೆ ನಡೆಸಲಾಯಿತು.</p>.<p>ಕಪಿಲಾ ನದಿಯಲ್ಲಿ ಗಂಗೆ ಪೂಜೆ ಸಲ್ಲಿಸಿ, ನಂತರ ಅಮ್ಮನವರ ಕಳಸವನ್ನು ದೇವಸ್ಥಾನ ಅರ್ಚಕರು ಹೊತ್ತು ಮೆರವಣೆಗೆ ಮೂಲಕ ದೇವಸ್ಥಾನಕ್ಕೆ ತಲುಪಿತು. ಜೊತೆಗೆ ಹೆಣ್ಣು ಮಕ್ಕಳು ಪೂರ್ಣಕುಂಭ ಕಳಸವನ್ನು ಹೊತ್ತು ಹರಕೆ ತೀರಿಸಿದರು.</p>.<p>ಸರಗೂರು ಪಟ್ಟಣ ಪಂಚಾಯಿತಿ ಸದಸ್ಯ ನೂರಾಳಸ್ವಾಮಿ, ಗೋಬಿ ರಂಗಸ್ವಾಮಿ, ಯಜಮಾನರಾದ ತಮ್ಮಣ್ಣ, ನರಸಿಂಹೇಗೌಡ, ಅಲಂಕಾರ ಸಮಿತಿ ಅಧ್ಯಕ್ಷ ರವಿಗೌಡ, ಮುಖಂಡರಾದ ರಾಜೇಶ್, ಲೋಕೇಶ್, ಶಶಿ, ಸುನೀಲ್. ಅನಿಲ್ ಮೆಡಿಕಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು:</strong> ಪಟ್ಟಣದ 5ನೇ ವಾರ್ಡ್ನಲ್ಲಿ ಸೋಮವಾರ ಇಂದ್ರಾಣಮ್ಮ ದೇವಾಲಯದ 26ನೇ ವರ್ಷದ ಪೂಜಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಹೋಮ ಹವನ, ಗಣಪತಿ ಹೋಮ, ಪುಣ್ಯಾಹ, ಕಳಸ ಪ್ರತಿಷ್ಠಾಪನೆ, ನವಗ್ರಹ ಹೋಮ, ದುರ್ಗಹೋಮ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನಡೆಯಿತು.</p>.<p>ಕಪಿಲಾ ನದಿಗೆ ತೆರಳಿ ಗಂಗೆ ಪೂಜೆ ನಡೆಸಿ, ಪೂರ್ಣಕುಂಭ ಕಳಸದೊಂದಿಗೆ ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಮಂಗಳವಾದ್ಯ, ಸತ್ತಿಗೆ, ಹಳೇ ಹೆಗ್ಗುಡಿಲು ನೀಲಕಂಠ ತಂಡದಿಂದ ವೀರಗಾಸೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳ ಜೊತೆಯಲ್ಲಿ ಮೆರವಣಿಗೆ ನಡೆಸಲಾಯಿತು.</p>.<p>ಉತ್ಸವ ಮೂರ್ತಿಯು ದೇವಾಲಯಕ್ಕೆ ತಲುಪಿದ ನಂತರ ವಿಶೇಷ ಪೂಜೆ ನಡೆಸಿ, ಮಹಾಮಂಗಳಾರತಿ ಮಾಡಿ ಪ್ರಸಾದ ವಿನಿಯೋಗ ಮಾಡಲಾಯಿತು. ನಂತರ ಅನ್ನ ಸಂತರ್ಪಣೆ ನಡೆಸಲಾಯಿತು.</p>.<p>ಕಪಿಲಾ ನದಿಯಲ್ಲಿ ಗಂಗೆ ಪೂಜೆ ಸಲ್ಲಿಸಿ, ನಂತರ ಅಮ್ಮನವರ ಕಳಸವನ್ನು ದೇವಸ್ಥಾನ ಅರ್ಚಕರು ಹೊತ್ತು ಮೆರವಣೆಗೆ ಮೂಲಕ ದೇವಸ್ಥಾನಕ್ಕೆ ತಲುಪಿತು. ಜೊತೆಗೆ ಹೆಣ್ಣು ಮಕ್ಕಳು ಪೂರ್ಣಕುಂಭ ಕಳಸವನ್ನು ಹೊತ್ತು ಹರಕೆ ತೀರಿಸಿದರು.</p>.<p>ಸರಗೂರು ಪಟ್ಟಣ ಪಂಚಾಯಿತಿ ಸದಸ್ಯ ನೂರಾಳಸ್ವಾಮಿ, ಗೋಬಿ ರಂಗಸ್ವಾಮಿ, ಯಜಮಾನರಾದ ತಮ್ಮಣ್ಣ, ನರಸಿಂಹೇಗೌಡ, ಅಲಂಕಾರ ಸಮಿತಿ ಅಧ್ಯಕ್ಷ ರವಿಗೌಡ, ಮುಖಂಡರಾದ ರಾಜೇಶ್, ಲೋಕೇಶ್, ಶಶಿ, ಸುನೀಲ್. ಅನಿಲ್ ಮೆಡಿಕಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>