<p>ಸರಗೂರು: ‘ಉಪ್ಪಾರ ಸಮುದಾಯ ಸಮಾಜಕ್ಕೆ ಪವಿತ್ರ ಗಂಗೆಯನ್ನು ನೀಡಿದೆ. ಒಗ್ಗಟ್ಟಿನಿಂದ ಬಾಳಿದಾಗ ಸಮುದಾಯಕ್ಕೆ ಶಕ್ತಿ ಬರುತ್ತದೆ’ ಸಮಾಜದ ಮುಖಂಡ ಎಸ್.ಎಂ. ಮಲ್ಲೇಶ್ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಉದ್ಘಾಟಿಸಿ ಮಾತನಾಡಿದರು.</p>.<p>‘ಕಳೆದ ವರ್ಷದಿಂದ ಜಯಂತಿ ಮಾಡುವ ಸಮಯದಲ್ಲಿ ತಹಶೀಲ್ದಾರ್ ಮೋಹನಕುಮಾರಿ ಅವರು ಕಾರ್ಯಕ್ರಮಕ್ಕೆ ಬರದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದು ಸರಿಯಲ್ಲ, ಹೀಗೇ ಮುಂದುವರಿದರೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಂ. ಸೋಮಶೇಖರ, ‘ತಾಲ್ಲೂಕಿನ ಎಲ್ಲಾ ಸಮುದಾಯದ ಹಾಗೂ ಸಂಘ –ಸಂಸ್ಥೆಗಳ ಸಮುದಾಯದ ಭವನಕ್ಕೆ ನಿವೇಶನ ನೀಡಲಾಗುತ್ತಿದೆ. ಆದರೆ ನಮ್ಮ ಸಮುದಾಯ ಭವನಕ್ಕೆ ನೀಡುತ್ತಿಲ್ಲ. ಅಧಿಕಾರಿಗಳು ಈ ನಿಟ್ಟಿನಲ್ಲಿ ಗಮನಹರಿಸಬೇಕು’ ಎಂದು ಆಗ್ರಹಿಸಿದರು.</p>.<p>ಇದಕ್ಕೆ ಪ್ರಕ್ರಿಯಿಸಿದ ಕಂದಾಯ ಇಲಾಖೆ ಶಿರಸ್ತೇದಾರ್, ‘ಭವನಕ್ಕೆ ನಿವೇಶನ ಜಾಗವನ್ನು ಗುರುತಿಸಿ ಮನವಿ ಸಲ್ಲಿಸಿ, ಈ ಬಗ್ಗೆ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಶಾಸಕರ ಗಮನಕ್ಕೂ ತನ್ನಿ’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕರಾಜಶಟ್ಟಿ, ಕಸಾಪದ ಕೆಂಡಗ್ಗಣಸ್ವಾಮಿ, ಮುಖಂಡರಾದ ಎಸ್. ರವಿ, ನಾಗರಾಜು, ಮಂಜು, ಪಶು ಸಂಗೋಪನಾ ಇಲಾಖೆ ಅಧಿಕಾರಿ ಪಾಟೀಲ್, ಕಬಿನಿ ನೀರಾವರಿ ಉಪವಿಭಾಗದ ಸಿಬ್ಬಂದಿ ಮಂಜುಳಾ, ಆರ್ಐ ಮುಜೀಬ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-38-1101203564</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸರಗೂರು: ‘ಉಪ್ಪಾರ ಸಮುದಾಯ ಸಮಾಜಕ್ಕೆ ಪವಿತ್ರ ಗಂಗೆಯನ್ನು ನೀಡಿದೆ. ಒಗ್ಗಟ್ಟಿನಿಂದ ಬಾಳಿದಾಗ ಸಮುದಾಯಕ್ಕೆ ಶಕ್ತಿ ಬರುತ್ತದೆ’ ಸಮಾಜದ ಮುಖಂಡ ಎಸ್.ಎಂ. ಮಲ್ಲೇಶ್ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಉದ್ಘಾಟಿಸಿ ಮಾತನಾಡಿದರು.</p>.<p>‘ಕಳೆದ ವರ್ಷದಿಂದ ಜಯಂತಿ ಮಾಡುವ ಸಮಯದಲ್ಲಿ ತಹಶೀಲ್ದಾರ್ ಮೋಹನಕುಮಾರಿ ಅವರು ಕಾರ್ಯಕ್ರಮಕ್ಕೆ ಬರದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದು ಸರಿಯಲ್ಲ, ಹೀಗೇ ಮುಂದುವರಿದರೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಲಾಗುವುದು’ ಎಂದು ಎಚ್ಚರಿಸಿದರು.</p>.<p>ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಂ. ಸೋಮಶೇಖರ, ‘ತಾಲ್ಲೂಕಿನ ಎಲ್ಲಾ ಸಮುದಾಯದ ಹಾಗೂ ಸಂಘ –ಸಂಸ್ಥೆಗಳ ಸಮುದಾಯದ ಭವನಕ್ಕೆ ನಿವೇಶನ ನೀಡಲಾಗುತ್ತಿದೆ. ಆದರೆ ನಮ್ಮ ಸಮುದಾಯ ಭವನಕ್ಕೆ ನೀಡುತ್ತಿಲ್ಲ. ಅಧಿಕಾರಿಗಳು ಈ ನಿಟ್ಟಿನಲ್ಲಿ ಗಮನಹರಿಸಬೇಕು’ ಎಂದು ಆಗ್ರಹಿಸಿದರು.</p>.<p>ಇದಕ್ಕೆ ಪ್ರಕ್ರಿಯಿಸಿದ ಕಂದಾಯ ಇಲಾಖೆ ಶಿರಸ್ತೇದಾರ್, ‘ಭವನಕ್ಕೆ ನಿವೇಶನ ಜಾಗವನ್ನು ಗುರುತಿಸಿ ಮನವಿ ಸಲ್ಲಿಸಿ, ಈ ಬಗ್ಗೆ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಶಾಸಕರ ಗಮನಕ್ಕೂ ತನ್ನಿ’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕರಾಜಶಟ್ಟಿ, ಕಸಾಪದ ಕೆಂಡಗ್ಗಣಸ್ವಾಮಿ, ಮುಖಂಡರಾದ ಎಸ್. ರವಿ, ನಾಗರಾಜು, ಮಂಜು, ಪಶು ಸಂಗೋಪನಾ ಇಲಾಖೆ ಅಧಿಕಾರಿ ಪಾಟೀಲ್, ಕಬಿನಿ ನೀರಾವರಿ ಉಪವಿಭಾಗದ ಸಿಬ್ಬಂದಿ ಮಂಜುಳಾ, ಆರ್ಐ ಮುಜೀಬ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-38-1101203564</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>