<p>ಸರಗೂರು: ‘ಸಮ ಸಮಾಜದ ಕನಸು ಕಂಡು ತನ್ಮೂಲಕ ಮಹಿಳೆಯರಿಗೆ ಮತ್ತು ದೀನದಲಿತರಿಗೆ ಸ್ವಾತಂತ್ರ್ಯ ಕಲ್ಪಿಸಿಕೊಟ್ಟ ದಾರ್ಶನಿಕ ಬಸವಣ್ಣ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್ ಕುಮಾರ್ ಹೇಳಿದರು.</p>.<p>ಪಟ್ಟಣ ಪಂಚಾಯಿತಿಯಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರ ತತ್ವ, ಸಿದ್ಧಾಂತ ಅಳವಡಿಸಿಕೊಳ್ಳಬೇಕು ಎಂದರು.</p>.<p>ಕನ್ನಡ ನೆಲದ ಮೇಲೆ ಜ್ಞಾನದ ದೀವಿಗೆಯ ಮಹತ್ವ ಸಾರಿ ಕೂಡಲಸಂಗಮದ ಮಹಾಮನೆಯ ಮೂಲಕ ವೀರಶೈವ ಲಿಂಗಾಯತ ಧರ್ಮದ ಮಾನವಧರ್ಮ ಎತ್ತಿ ಹಿಡಿದ ಮಹಾ ಮಹಿಮ ಬಸವಣ್ಣ ಎಂದರು.</p>.<p>ಬಸವಣ್ಣನವರು ಅನುಭವ ಮಂಟಪದಲ್ಲಿ ಸಮಾಜ ಸುದಾರಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯದ ಹರಿಕಾರ, ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋಗಲಾಡಿಸಿದರು. ಸಮಾಜದ ಅಂಕು ಡೊಂಕು ತಿದ್ದಿದ್ದಾರೆ ಎಂದು ತಿಳಿಸಿದರು.</p>.<p>ಪ.ಪಂ ಅಧ್ಯಕ್ಷೆ ಚೈತ್ರಾಸ್ವಾಮಿ ಮಾತನಾಡಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಶ್ರೀನಿವಾಸ್, ಚಲುವಕೃಷ್ಷ, ಉಮಾರಾಮು, ಸಣ್ಣತಾಯಮ್ಮ, ರಮೇಶ್, ಅಭಿಮಾನಿ ಸ್ವಾಮಿ, ಪುಟ್ಟ, ಶಿವಕುಮಾರ್, ಅರುಣ್ ಆರಾಧ್ಯ, ಅನಿತಾ, ದಿನೇಶ್, ಅರ್ಜುನ, ಇದಿಯಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-38-1076866380</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸರಗೂರು: ‘ಸಮ ಸಮಾಜದ ಕನಸು ಕಂಡು ತನ್ಮೂಲಕ ಮಹಿಳೆಯರಿಗೆ ಮತ್ತು ದೀನದಲಿತರಿಗೆ ಸ್ವಾತಂತ್ರ್ಯ ಕಲ್ಪಿಸಿಕೊಟ್ಟ ದಾರ್ಶನಿಕ ಬಸವಣ್ಣ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್ ಕುಮಾರ್ ಹೇಳಿದರು.</p>.<p>ಪಟ್ಟಣ ಪಂಚಾಯಿತಿಯಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರ ತತ್ವ, ಸಿದ್ಧಾಂತ ಅಳವಡಿಸಿಕೊಳ್ಳಬೇಕು ಎಂದರು.</p>.<p>ಕನ್ನಡ ನೆಲದ ಮೇಲೆ ಜ್ಞಾನದ ದೀವಿಗೆಯ ಮಹತ್ವ ಸಾರಿ ಕೂಡಲಸಂಗಮದ ಮಹಾಮನೆಯ ಮೂಲಕ ವೀರಶೈವ ಲಿಂಗಾಯತ ಧರ್ಮದ ಮಾನವಧರ್ಮ ಎತ್ತಿ ಹಿಡಿದ ಮಹಾ ಮಹಿಮ ಬಸವಣ್ಣ ಎಂದರು.</p>.<p>ಬಸವಣ್ಣನವರು ಅನುಭವ ಮಂಟಪದಲ್ಲಿ ಸಮಾಜ ಸುದಾರಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯದ ಹರಿಕಾರ, ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋಗಲಾಡಿಸಿದರು. ಸಮಾಜದ ಅಂಕು ಡೊಂಕು ತಿದ್ದಿದ್ದಾರೆ ಎಂದು ತಿಳಿಸಿದರು.</p>.<p>ಪ.ಪಂ ಅಧ್ಯಕ್ಷೆ ಚೈತ್ರಾಸ್ವಾಮಿ ಮಾತನಾಡಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಶ್ರೀನಿವಾಸ್, ಚಲುವಕೃಷ್ಷ, ಉಮಾರಾಮು, ಸಣ್ಣತಾಯಮ್ಮ, ರಮೇಶ್, ಅಭಿಮಾನಿ ಸ್ವಾಮಿ, ಪುಟ್ಟ, ಶಿವಕುಮಾರ್, ಅರುಣ್ ಆರಾಧ್ಯ, ಅನಿತಾ, ದಿನೇಶ್, ಅರ್ಜುನ, ಇದಿಯಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-38-1076866380</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>