<p>ಸರಗೂರು: ‘ಕಾರ್ಮಿಕರು ಪರಿಶ್ರಮದಲ್ಲಿಯೇ ಬದುಕಿನ ಖುಷಿ ಕಾಣುವ ಶ್ರೇಷ್ಠ ಜೀವಿಗಳು’ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.</p>.<p>ಪಟ್ಟಣದ ಸಂತೆಮಾಳದ ಬಳಿ ಇರುವ ಸೋಮೇಶ್ವರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಶುಕ್ರವಾರ ನಡೆದ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಕಠಿಣ ಪರಿಶ್ರಮ, ಸಮರ್ಪಣಾ ಭಾವಕ್ಕೆ ಇವರು ಸಾಕ್ಷಿ. ದುಡಿಮೆ ಮನುಷ್ಯನ ಘನತೆ ಮತ್ತು ಸೃಜನಶೀಲತೆಯ ಶ್ರೇಷ್ಠತೆಯನ್ನು ವ್ಯಕ್ತಪಡಿಸುವ ಏಣಿ’ ಎಂಸದರು.</p>.<p>‘ಪಟ್ಟಣ ಪಂಚಾಯಿತಿಯಿಂದ ಸಂಘಕ್ಕೆ ನಿವೇಶನ ನೀಡಿದರೆ ಶಾಸಕರ ಅನುದಾನದಿಂದ ಹಣವನ್ನು ನೀಡುತ್ತೇನೆ’ ಭರವಸೆ ನೀಡಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಚ್.ರಮೇಶ್ ಮಾತನಾಡಿ, ‘ಸಂಘದಲ್ಲಿ 180 ಜನ ಸದಸ್ಯರು ಇದ್ದಾರೆ. ಪ್ರತಿ ತಿಂಗಳು ಸಭೆ ಹಾಗೂ ಸಮಾರಂಭಗಳು ಮಾಡಲು ನಿವೇಶನ ಇಲ್ಲ. ನಿಮ್ಮ ಅವಧಿಯಲ್ಲಿ ನಿವೇಶನ ಹಾಗೂ ಕಟ್ಟಡ ನಿರ್ಮಾಣ ಮಾಡಲು ಅನುದಾನವನ್ನು ನೀಡಬೇಕು’ ಎಂದು ಮನವಿ ಮಾಡಿಕೊಂಡರು.</p>.<p>ಸಮಾಜ ಸೇವಕ ನಿಂಗರಾಜು, ಸಂಘದ ಅಧ್ಯಕ್ಷ ಮಣಿ, ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ, ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘ ರಾಜ್ಯಾಧ್ಯಕ್ಷ ಚಂದನಗೌಡ ಮಾತನಾಡಿದರು.</p>.<p>ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡಿದ ಹಿರಿಯ ಕಾರ್ಮಿಕರಿಗೆ ಹಾಗೂ ಕಾರ್ಮಿಕ ಮಕ್ಕಳಿಗೆ ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಪ.ಪಂ. ಅಧ್ಯಕ್ಷೆ ಚೈತ್ರಾ ಸ್ವಾಮಿ, ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಎಸ್.ಎನ್.ನಾಗರಾಜು, ತಂಬಾಕು ಮಂಡಳಿ ಸದಸ್ಯ ಪರಶಿವಮೂರ್ತಿ, ಬಿಇಓ ರಾಜು, ಕಾರ್ಮಿಕ ಇಲಾಖೆ ಸಿಬ್ಬಂದಿ ಪರಶಿವಮೂರ್ತಿ, ಮುಖಂಡ ಜಲೀಲ್, ಪಿಎಸ್ಐ ಆರ್ ಕಿರಣ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-38-880138158</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸರಗೂರು: ‘ಕಾರ್ಮಿಕರು ಪರಿಶ್ರಮದಲ್ಲಿಯೇ ಬದುಕಿನ ಖುಷಿ ಕಾಣುವ ಶ್ರೇಷ್ಠ ಜೀವಿಗಳು’ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.</p>.<p>ಪಟ್ಟಣದ ಸಂತೆಮಾಳದ ಬಳಿ ಇರುವ ಸೋಮೇಶ್ವರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಶುಕ್ರವಾರ ನಡೆದ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಕಠಿಣ ಪರಿಶ್ರಮ, ಸಮರ್ಪಣಾ ಭಾವಕ್ಕೆ ಇವರು ಸಾಕ್ಷಿ. ದುಡಿಮೆ ಮನುಷ್ಯನ ಘನತೆ ಮತ್ತು ಸೃಜನಶೀಲತೆಯ ಶ್ರೇಷ್ಠತೆಯನ್ನು ವ್ಯಕ್ತಪಡಿಸುವ ಏಣಿ’ ಎಂಸದರು.</p>.<p>‘ಪಟ್ಟಣ ಪಂಚಾಯಿತಿಯಿಂದ ಸಂಘಕ್ಕೆ ನಿವೇಶನ ನೀಡಿದರೆ ಶಾಸಕರ ಅನುದಾನದಿಂದ ಹಣವನ್ನು ನೀಡುತ್ತೇನೆ’ ಭರವಸೆ ನೀಡಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಚ್.ರಮೇಶ್ ಮಾತನಾಡಿ, ‘ಸಂಘದಲ್ಲಿ 180 ಜನ ಸದಸ್ಯರು ಇದ್ದಾರೆ. ಪ್ರತಿ ತಿಂಗಳು ಸಭೆ ಹಾಗೂ ಸಮಾರಂಭಗಳು ಮಾಡಲು ನಿವೇಶನ ಇಲ್ಲ. ನಿಮ್ಮ ಅವಧಿಯಲ್ಲಿ ನಿವೇಶನ ಹಾಗೂ ಕಟ್ಟಡ ನಿರ್ಮಾಣ ಮಾಡಲು ಅನುದಾನವನ್ನು ನೀಡಬೇಕು’ ಎಂದು ಮನವಿ ಮಾಡಿಕೊಂಡರು.</p>.<p>ಸಮಾಜ ಸೇವಕ ನಿಂಗರಾಜು, ಸಂಘದ ಅಧ್ಯಕ್ಷ ಮಣಿ, ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ, ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘ ರಾಜ್ಯಾಧ್ಯಕ್ಷ ಚಂದನಗೌಡ ಮಾತನಾಡಿದರು.</p>.<p>ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡಿದ ಹಿರಿಯ ಕಾರ್ಮಿಕರಿಗೆ ಹಾಗೂ ಕಾರ್ಮಿಕ ಮಕ್ಕಳಿಗೆ ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಪ.ಪಂ. ಅಧ್ಯಕ್ಷೆ ಚೈತ್ರಾ ಸ್ವಾಮಿ, ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಎಸ್.ಎನ್.ನಾಗರಾಜು, ತಂಬಾಕು ಮಂಡಳಿ ಸದಸ್ಯ ಪರಶಿವಮೂರ್ತಿ, ಬಿಇಓ ರಾಜು, ಕಾರ್ಮಿಕ ಇಲಾಖೆ ಸಿಬ್ಬಂದಿ ಪರಶಿವಮೂರ್ತಿ, ಮುಖಂಡ ಜಲೀಲ್, ಪಿಎಸ್ಐ ಆರ್ ಕಿರಣ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-38-880138158</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>