<p><strong>ಸರಗೂರು</strong>: ಬ್ರಹ್ಮೋತ್ಸವದ ಅಂಗವಾಗಿ ಬುಧವಾರ ಲಕ್ಷ್ಮಿ ನರಸಿಂಹಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.</p>.<p>ದೇವಸ್ಥಾನದ ಆವರಣದಿಂದ ಆರಂಭವಾದ ರಥೋತ್ಸವವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮಂಗಳವಾದ್ಯ, ವೇದಘೋಷ, ಜಯ ಘೋಷಗಳ ನಡುವೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಧಾರ್ಮಿಕ ಸಂಭ್ರಮವನ್ನು ಹೆಚ್ಚಿಸಿತು.</p>.<p>ರಥೋತ್ಸವದ ಸಂದರ್ಭ ಪಟ್ಟಣದ ವಿವಿಧ ಸಮುದಾಯಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ದೇವರ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನದ ಮುಖ್ಯ ಅರ್ಚಕರಾದ ಹಾಗೂ ಮಲ್ಲೇಶ್ವರಂ ಅವರು ವೇದಮಂತ್ರ ಉಚ್ಚಾರಣೆಗಳೊಂದಿಗೆ ವಿಶೇಷ ಪೂಜೆ, ಹೋಮ, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.</p>.<p>ಸತತವಾಗಿ ಐದನೇ ವರ್ಷದ ಬ್ರಹ್ಮೋತ್ಸವ ಆಚರಣೆ ನಿಮಿತ್ತ ಈ ಬಾರಿಯ ರಥೋತ್ಸವಕ್ಕೆ ವಿಶೇಷ ಮಹತ್ವ ದೊರಕಿದ್ದು, ಭಕ್ತರಲ್ಲಿ ಹೆಚ್ಚಿನ ಉತ್ಸಾಹ ಕಂಡುಬಂದಿತು. ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸರಗೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು, ಜಿಲ್ಲೆ, ತಾಲ್ಲೂಕುಗಳ ವಿವಿಧ ಭಾಗಗಳಿಂದ ಸಾವಿರಕ್ಕೂ ಹೆಚ್ಚು ಭಕ್ತರು ಬಂದು ದೇವರ ದರ್ಶನ ಪಡೆದರು.</p>.<p>ದೇವಾಲಯದ ಆವರಣದಲ್ಲಿ ದಿನವಿಡೀ ಭಕ್ತಿಯ ವಾತಾವರಣ ಮನೆಮಾಡಿದ್ದು, ಭಕ್ತರು ದೇವರ ನಾಮಸ್ಮರಣೆ, ಪೂಜೆ ಹಾಗೂ ಪ್ರಸಾದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಕ್ರಮವನ್ನು ವೀಕ್ಷಿಸಲು ಅನುಕೂಲವಾಗುವಂತೆ ದೇವಸ್ಥಾನದ ವಿವಿಧ ಭಾಗಗಳಲ್ಲಿ ಬೃಹತ್ ಪರದೆಗಳನ್ನು ಅಳವಡಿಸಲಾಗಿದ್ದು, ಕಾರ್ಯಕ್ರಮಗಳನ್ನು ಸಾರ್ವಜನಿಕರು ವೀಕ್ಷಿಸಿದರು.</p>.<p>ಬ್ರಹ್ಮೋತ್ಸವದ ಅಂಗವಾಗಿ ಪ್ರತಿದಿನವೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮೇ 30ರಂದು ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆಗಳೊಂದಿಗೆ ಉತ್ಸವ ಸಮಾರೋಪಗೊಳ್ಳಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-38-542432528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು</strong>: ಬ್ರಹ್ಮೋತ್ಸವದ ಅಂಗವಾಗಿ ಬುಧವಾರ ಲಕ್ಷ್ಮಿ ನರಸಿಂಹಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.</p>.<p>ದೇವಸ್ಥಾನದ ಆವರಣದಿಂದ ಆರಂಭವಾದ ರಥೋತ್ಸವವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮಂಗಳವಾದ್ಯ, ವೇದಘೋಷ, ಜಯ ಘೋಷಗಳ ನಡುವೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಧಾರ್ಮಿಕ ಸಂಭ್ರಮವನ್ನು ಹೆಚ್ಚಿಸಿತು.</p>.<p>ರಥೋತ್ಸವದ ಸಂದರ್ಭ ಪಟ್ಟಣದ ವಿವಿಧ ಸಮುದಾಯಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ದೇವರ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನದ ಮುಖ್ಯ ಅರ್ಚಕರಾದ ಹಾಗೂ ಮಲ್ಲೇಶ್ವರಂ ಅವರು ವೇದಮಂತ್ರ ಉಚ್ಚಾರಣೆಗಳೊಂದಿಗೆ ವಿಶೇಷ ಪೂಜೆ, ಹೋಮ, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.</p>.<p>ಸತತವಾಗಿ ಐದನೇ ವರ್ಷದ ಬ್ರಹ್ಮೋತ್ಸವ ಆಚರಣೆ ನಿಮಿತ್ತ ಈ ಬಾರಿಯ ರಥೋತ್ಸವಕ್ಕೆ ವಿಶೇಷ ಮಹತ್ವ ದೊರಕಿದ್ದು, ಭಕ್ತರಲ್ಲಿ ಹೆಚ್ಚಿನ ಉತ್ಸಾಹ ಕಂಡುಬಂದಿತು. ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸರಗೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು, ಜಿಲ್ಲೆ, ತಾಲ್ಲೂಕುಗಳ ವಿವಿಧ ಭಾಗಗಳಿಂದ ಸಾವಿರಕ್ಕೂ ಹೆಚ್ಚು ಭಕ್ತರು ಬಂದು ದೇವರ ದರ್ಶನ ಪಡೆದರು.</p>.<p>ದೇವಾಲಯದ ಆವರಣದಲ್ಲಿ ದಿನವಿಡೀ ಭಕ್ತಿಯ ವಾತಾವರಣ ಮನೆಮಾಡಿದ್ದು, ಭಕ್ತರು ದೇವರ ನಾಮಸ್ಮರಣೆ, ಪೂಜೆ ಹಾಗೂ ಪ್ರಸಾದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಕ್ರಮವನ್ನು ವೀಕ್ಷಿಸಲು ಅನುಕೂಲವಾಗುವಂತೆ ದೇವಸ್ಥಾನದ ವಿವಿಧ ಭಾಗಗಳಲ್ಲಿ ಬೃಹತ್ ಪರದೆಗಳನ್ನು ಅಳವಡಿಸಲಾಗಿದ್ದು, ಕಾರ್ಯಕ್ರಮಗಳನ್ನು ಸಾರ್ವಜನಿಕರು ವೀಕ್ಷಿಸಿದರು.</p>.<p>ಬ್ರಹ್ಮೋತ್ಸವದ ಅಂಗವಾಗಿ ಪ್ರತಿದಿನವೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮೇ 30ರಂದು ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆಗಳೊಂದಿಗೆ ಉತ್ಸವ ಸಮಾರೋಪಗೊಳ್ಳಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-38-542432528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>