ಮೈಸೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಹಾಗೂ ಅವರ ಬೆಂಬಲಿಗರು ಇಲ್ಲಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಹೊರ ಬಂದ ಅವರನ್ನು ಅಭಿಮಾನಿಗಳು ಸುತ್ತುವರೆದು 'ಚಿನ್ನಮ್ಮ ಚಿನ್ನಮ್ಮ' ಎಂದು ಕೂಗಿ ಜಯಘೋಷ ಮೊಳಗಿಸಿದರು. ಸೆಲ್ಫಿ ತೆಗೆದುಕೊಂಡು ಸಂಭ್ರಮಪಟ್ಟರು.