ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ವರ್ಗದವರ ಏಳಿಗೆಗೆ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಉಳುವವನೇ ಒಡೆಯ ನೀತಿ, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ, ಶಿಶುವಿಹಾರ, ಗುತ್ತಿಗೆ ಟೆಂಡರ್ ಪದ್ಧತಿಯಲ್ಲಿ ಮೀಸಲಾತಿ ಮೊದಲಾದವುಗಳನ್ನು ಜಾರಿಗೆ ತಂದು ಅನುಕೂಲ ಕಲ್ಪಿಸಿದೆ’ ಎಂದು ತಿಳಿಸಿದರು.