<p><strong>ಮೈಸೂರು:</strong> 'ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು, ನರೇಂದ್ರ ಮೋದಿ ಪ್ರಧಾನಿ ಆಗಿ 11 ವರ್ಷ ಕಳೆದಿದೆ. ವಾಜಪೇಯಿ ಸಹ ಆರು ವರ್ಷ ಪಿ.ಎಂ. ಆಗಿದ್ದರು. ಹೀಗಿದ್ದು ಏಕೆ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿಟಿ/ ಟಿಎಸ್ಪಿ ಅನುದಾನ ಖರ್ಚು ಮಾಡಿಲ್ಲ?' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಪ್ರಶ್ನಿಸಿದರು.</p><p>ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮಂಗಳವಾರ ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. </p><p>'ಬಡ್ತಿಯಲ್ಲಿ ಮೀಸಲಾತಿಗೆ ಸಂಬಂಧಿಸಿ ರತ್ನಪ್ರಭಾ ನೇತೃತ್ವದಲ್ಲಿ ಸಮಿತಿ ರಚಿಸಿ, ಅದರ ಶಿಫಾರಸಿನಂತೆ ವರದಿ ಜಾರಿ ಮಾಡಿದ್ದು ನಮ್ಮ ಸರ್ಕಾರ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಏಕೆ ಈ ಕೆಲಸ ಆಗಿಲ್ಲ' ಎಂದು ಪ್ರಶ್ನಿಸಿದರು.</p><p>ಬ್ಯಾಗ್ ಲಾಗ್ ಹುದ್ದೆ ಭರ್ತಿ ಸಂಬಂಧ ಮಹದೇವಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಶೀಘ್ರ ಭರ್ತಿ ಮಾಡುತ್ತೇವೆ ಎಂದರು.</p><p>'ಮೈಸೂರು ವಿ.ವಿ.ಗೆ ನಿವೃತ್ತ ಸಿಬ್ಬಂದಿಗೆ ವೇತನ ನೀಡಲು ಹಣ ಬಿಡುಗಡೆ ಮಾಡಲಾಗಿದೆ. ಈ ದುಃಸ್ಥಿತಿಗೆ ಹಿಂದಿನ ಕುಲಪತಿಗಳು ಕಾರಣ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು' ಎಂದು ಭರವಸೆ ನೀಡಿದರು.</p><p>'ಕೇಂದ್ರ ಎಂಟು ವರ್ಷ ಜಿಎಸ್ಟಿ ಹಣ ಮಜಾ ಮಾಡಿ ಈಗ ಕಡಿತಗೊಳಿಸಿದೆ. ರಾಜ್ಯಕ್ಕೆ 6 ಸಾವಿರ ಕೋಟಿ ಆದಾಯ ಕಡಿಮೆ ಆಗಿದೆ' ಎಂದು ಟೀಕಿಸಿದರು.</p><p>'ಕಳೆದ 20 ವರ್ಷದಿಂದ ನರೇಗಾ ಅನುದಾನವನ್ನು ಕೇಂದ್ರವೇ ಕೊಡುತ್ತಿತ್ತು. ಈಗ ರಾಜ್ಯವೂ ಶೇ 40ರಷ್ಟು ಪಾಲು ಭರಿಸುವಂತೆ ಹೇಳಿದ್ದಾರೆ. ಆರ್ಥಿಕ ವರ್ಷದ ಮಧ್ಯದಲ್ಲಿ ಈ ಘೋಷಣೆ ಮಾಡಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ 2500 ಕೋಟಿ ರೂಪಾಯಿ ನಷ್ಟ ಆಗಲಿದೆ. ಈ ಬಗ್ಗೆ ಪ್ರಧಾನಿಗೆ ಈಗಾಗಲೇ ಪತ್ರ ಬರೆದಿದ್ದೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> 'ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು, ನರೇಂದ್ರ ಮೋದಿ ಪ್ರಧಾನಿ ಆಗಿ 11 ವರ್ಷ ಕಳೆದಿದೆ. ವಾಜಪೇಯಿ ಸಹ ಆರು ವರ್ಷ ಪಿ.ಎಂ. ಆಗಿದ್ದರು. ಹೀಗಿದ್ದು ಏಕೆ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿಟಿ/ ಟಿಎಸ್ಪಿ ಅನುದಾನ ಖರ್ಚು ಮಾಡಿಲ್ಲ?' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಪ್ರಶ್ನಿಸಿದರು.</p><p>ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮಂಗಳವಾರ ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. </p><p>'ಬಡ್ತಿಯಲ್ಲಿ ಮೀಸಲಾತಿಗೆ ಸಂಬಂಧಿಸಿ ರತ್ನಪ್ರಭಾ ನೇತೃತ್ವದಲ್ಲಿ ಸಮಿತಿ ರಚಿಸಿ, ಅದರ ಶಿಫಾರಸಿನಂತೆ ವರದಿ ಜಾರಿ ಮಾಡಿದ್ದು ನಮ್ಮ ಸರ್ಕಾರ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಏಕೆ ಈ ಕೆಲಸ ಆಗಿಲ್ಲ' ಎಂದು ಪ್ರಶ್ನಿಸಿದರು.</p><p>ಬ್ಯಾಗ್ ಲಾಗ್ ಹುದ್ದೆ ಭರ್ತಿ ಸಂಬಂಧ ಮಹದೇವಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಶೀಘ್ರ ಭರ್ತಿ ಮಾಡುತ್ತೇವೆ ಎಂದರು.</p><p>'ಮೈಸೂರು ವಿ.ವಿ.ಗೆ ನಿವೃತ್ತ ಸಿಬ್ಬಂದಿಗೆ ವೇತನ ನೀಡಲು ಹಣ ಬಿಡುಗಡೆ ಮಾಡಲಾಗಿದೆ. ಈ ದುಃಸ್ಥಿತಿಗೆ ಹಿಂದಿನ ಕುಲಪತಿಗಳು ಕಾರಣ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು' ಎಂದು ಭರವಸೆ ನೀಡಿದರು.</p><p>'ಕೇಂದ್ರ ಎಂಟು ವರ್ಷ ಜಿಎಸ್ಟಿ ಹಣ ಮಜಾ ಮಾಡಿ ಈಗ ಕಡಿತಗೊಳಿಸಿದೆ. ರಾಜ್ಯಕ್ಕೆ 6 ಸಾವಿರ ಕೋಟಿ ಆದಾಯ ಕಡಿಮೆ ಆಗಿದೆ' ಎಂದು ಟೀಕಿಸಿದರು.</p><p>'ಕಳೆದ 20 ವರ್ಷದಿಂದ ನರೇಗಾ ಅನುದಾನವನ್ನು ಕೇಂದ್ರವೇ ಕೊಡುತ್ತಿತ್ತು. ಈಗ ರಾಜ್ಯವೂ ಶೇ 40ರಷ್ಟು ಪಾಲು ಭರಿಸುವಂತೆ ಹೇಳಿದ್ದಾರೆ. ಆರ್ಥಿಕ ವರ್ಷದ ಮಧ್ಯದಲ್ಲಿ ಈ ಘೋಷಣೆ ಮಾಡಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ 2500 ಕೋಟಿ ರೂಪಾಯಿ ನಷ್ಟ ಆಗಲಿದೆ. ಈ ಬಗ್ಗೆ ಪ್ರಧಾನಿಗೆ ಈಗಾಗಲೇ ಪತ್ರ ಬರೆದಿದ್ದೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>