<p><strong>ಮೈಸೂರು:</strong> ‘ಪರಿಶಿಷ್ಟ ಪಂಗಡದವರು ಸಂವಿಧಾನಕ್ಕೆ ಅಪಾಯವಾಗದಂತೆ ನೋಡಿಕೊಳ್ಳುವುದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕೋರಿದರು.</p>.<p>ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಶನಿವಾರ ಆಯೋಜಿಸಿದ್ದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪರಿಶಿಷ್ಟ ಪಂಗಡದ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಧರ್ಮದ ರಕ್ಷಣೆಯ ಹೆಸರಿನಲ್ಲಿ ಅಧಿಕಾರ ಮಾಡುವವರಿಗಿಂತ ಬದುಕಿನ ರಕ್ಷಣೆ ಮಾಡುವವರು ಮುಖ್ಯವಾಗುತ್ತಾರೆ. ಇದನ್ನು ಗಮನಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹಾಗೂ ಹಿಂದುಳಿದ ವರ್ಗಗಳ ಜನರ ಬದುಕು ಹಸನಾಗಿದೆ. ಈ ಕಾರಣದಿಂದ ಸಮಾಜದ ನಾವೆಲ್ಲರೂ ಕಾಂಗ್ರೆಸ್ ಬೆಂಬಲಿಸಬೇಕು’ ಎಂದರು.</p>.<p>‘ಧರ್ಮ ರಕ್ಷಣೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಬಿಜೆಪಿ ಅಭಿವೃದ್ಧಿಗೆ ಆದ್ಯತೆ ನೀಡಲಿಲ್ಲ. ನಾವು ಬದುಕಿದರೆ ದೇಶ ಉಳಿಯುತ್ತದೆ ಎಂಬುದನ್ನು ಮತದಾರರು ತಿಳಿದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಪರಿಶಿಷ್ಟ ಪಂಗಡದವರಿಗೆ ನಮ್ಮ ಸರ್ಕಾರದಿಂದ ಹಲವು ಸೌಲಭ್ಯಗಳು ಸಿಗುತ್ತಿವೆ. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಲಾಗಿದೆ. ಕೆಎಐಡಿಬಿಯಿಂದ ಶೇ 50ರಷ್ಟು ರಿಯಾಯಿತಿ ದರದಲ್ಲಿ ಭೂಮಿ ನೀಡಲಾಗುತ್ತಿದೆ. ಕೆಎಸ್ಎಫ್ಸಿಯಲ್ಲಿ ₹10 ಕೋಟಿವರೆಗೂ ಸಾಲ ನೀಡುತ್ತಿರುವುದರಿಂದ ಈ ಸಮಾಜದವರು ಕೈಗಾರಿಕೋದ್ಯಮಿಗಳು ಆಗುತ್ತಿದ್ದಾರೆ’ ಎಂದರು.</p>.<p>ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ‘ನಾಯಕ ಸಮಾಜದ ಸಮಸ್ಯೆಗಳ ಪರಿಹಾರಕ್ಕೆ ಚುನಾವಣೆ ಮುಗಿದ ಬಳಿಕ ಮತ್ತೊಂದು ಸಭೆ ಕರೆಯಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯವರೇ ಆಗಿರುವ ಕಾರಣ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಈ ಸರ್ಕಾರದಲ್ಲಿ ಸಮಾಜದವರಿಗೆ ಸೂಕ್ತ ಪ್ರಾತಿನಿಧ್ಯ ದೊರೆತಿದೆ’ ಎಂದು ಹೇಳಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಬಸವರಾಜು, ‘ನಾಯಕ ಸಮಾಜದ ಜನಸಂಖ್ಯೆ ಜಾಸ್ತಿ ಇದ್ದರೂ ಸಮಸ್ಯೆಗಳು ಬಹಳಷ್ಟಿವೆ. ಅವುಗಳಿಗೆ ಪರಿಹಾರ ಕಲ್ಪಿಸುವ ಕೆಲಸ ಆಗಬೇಕು. ಈ ಭಾಗದ ಸಮಾಜದವರು ಸತೀಶ ಜಾರಕಿಹೊಳಿ ನಾಯಕತ್ವವನ್ನು ನಂಬಿದೆ’ ಎಂದು ತಿಳಿಸಿದರು.</p>.<p>‘ಕಾಂಗ್ರೆಸ್ ಸರ್ಕಾರದಲ್ಲಿ ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆಂಬ ನಿರೀಕ್ಷೆಯಿಂದ ಬೆಂಬಲಿಸುತ್ತಿದ್ದೇವೆ. ಮುಂದೆ ಮುಖ್ಯಮಂತ್ರಿ ಅಗುವ ಅವಕಾಶ ಬರುವುದರಿಂದ ಇಡೀ ಸಮಾಜ ಬೆಂಬಲಿಸುತ್ತದೆ’ ಎಂದು ಹೇಳಿದರು.</p>.<p>ಮುಖಂಡ ಕೆಲ್ಲಂಬಳ್ಳಿ ಶ್ರೀನಿವಾಸ ನಾಯಕ ಹಾಗೂ ರಮ್ಮನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ನಾಗರಾಜು, ‘ಈ ಭಾಗದ ಸಮಾಜದ ಮುಖಂಡರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p>.<div><blockquote>ಸಂವಿಧಾನವನ್ನು ಒಪ್ಪಿಕೊಂಡು ನಡೆಯುತ್ತಿದ್ದೇವೆ. ಅದು ನಮಗೆ ರಕ್ಷಣೆ ನೀಡುತ್ತಿದೆ. ಅದನ್ನು ನಾವು ರಕ್ಷಿಸಿಕೊಳ್ಳಬೇಕಾಗಿದೆ </blockquote><span class="attribution">-ಸತೀಶ ಜಾರಕಿಹೊಳಿ ಲೋಕೋಪಯೋಗಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಪರಿಶಿಷ್ಟ ಪಂಗಡದವರು ಸಂವಿಧಾನಕ್ಕೆ ಅಪಾಯವಾಗದಂತೆ ನೋಡಿಕೊಳ್ಳುವುದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕೋರಿದರು.</p>.<p>ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಶನಿವಾರ ಆಯೋಜಿಸಿದ್ದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪರಿಶಿಷ್ಟ ಪಂಗಡದ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಧರ್ಮದ ರಕ್ಷಣೆಯ ಹೆಸರಿನಲ್ಲಿ ಅಧಿಕಾರ ಮಾಡುವವರಿಗಿಂತ ಬದುಕಿನ ರಕ್ಷಣೆ ಮಾಡುವವರು ಮುಖ್ಯವಾಗುತ್ತಾರೆ. ಇದನ್ನು ಗಮನಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹಾಗೂ ಹಿಂದುಳಿದ ವರ್ಗಗಳ ಜನರ ಬದುಕು ಹಸನಾಗಿದೆ. ಈ ಕಾರಣದಿಂದ ಸಮಾಜದ ನಾವೆಲ್ಲರೂ ಕಾಂಗ್ರೆಸ್ ಬೆಂಬಲಿಸಬೇಕು’ ಎಂದರು.</p>.<p>‘ಧರ್ಮ ರಕ್ಷಣೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಬಿಜೆಪಿ ಅಭಿವೃದ್ಧಿಗೆ ಆದ್ಯತೆ ನೀಡಲಿಲ್ಲ. ನಾವು ಬದುಕಿದರೆ ದೇಶ ಉಳಿಯುತ್ತದೆ ಎಂಬುದನ್ನು ಮತದಾರರು ತಿಳಿದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಪರಿಶಿಷ್ಟ ಪಂಗಡದವರಿಗೆ ನಮ್ಮ ಸರ್ಕಾರದಿಂದ ಹಲವು ಸೌಲಭ್ಯಗಳು ಸಿಗುತ್ತಿವೆ. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಲಾಗಿದೆ. ಕೆಎಐಡಿಬಿಯಿಂದ ಶೇ 50ರಷ್ಟು ರಿಯಾಯಿತಿ ದರದಲ್ಲಿ ಭೂಮಿ ನೀಡಲಾಗುತ್ತಿದೆ. ಕೆಎಸ್ಎಫ್ಸಿಯಲ್ಲಿ ₹10 ಕೋಟಿವರೆಗೂ ಸಾಲ ನೀಡುತ್ತಿರುವುದರಿಂದ ಈ ಸಮಾಜದವರು ಕೈಗಾರಿಕೋದ್ಯಮಿಗಳು ಆಗುತ್ತಿದ್ದಾರೆ’ ಎಂದರು.</p>.<p>ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ‘ನಾಯಕ ಸಮಾಜದ ಸಮಸ್ಯೆಗಳ ಪರಿಹಾರಕ್ಕೆ ಚುನಾವಣೆ ಮುಗಿದ ಬಳಿಕ ಮತ್ತೊಂದು ಸಭೆ ಕರೆಯಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯವರೇ ಆಗಿರುವ ಕಾರಣ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಈ ಸರ್ಕಾರದಲ್ಲಿ ಸಮಾಜದವರಿಗೆ ಸೂಕ್ತ ಪ್ರಾತಿನಿಧ್ಯ ದೊರೆತಿದೆ’ ಎಂದು ಹೇಳಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಬಸವರಾಜು, ‘ನಾಯಕ ಸಮಾಜದ ಜನಸಂಖ್ಯೆ ಜಾಸ್ತಿ ಇದ್ದರೂ ಸಮಸ್ಯೆಗಳು ಬಹಳಷ್ಟಿವೆ. ಅವುಗಳಿಗೆ ಪರಿಹಾರ ಕಲ್ಪಿಸುವ ಕೆಲಸ ಆಗಬೇಕು. ಈ ಭಾಗದ ಸಮಾಜದವರು ಸತೀಶ ಜಾರಕಿಹೊಳಿ ನಾಯಕತ್ವವನ್ನು ನಂಬಿದೆ’ ಎಂದು ತಿಳಿಸಿದರು.</p>.<p>‘ಕಾಂಗ್ರೆಸ್ ಸರ್ಕಾರದಲ್ಲಿ ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆಂಬ ನಿರೀಕ್ಷೆಯಿಂದ ಬೆಂಬಲಿಸುತ್ತಿದ್ದೇವೆ. ಮುಂದೆ ಮುಖ್ಯಮಂತ್ರಿ ಅಗುವ ಅವಕಾಶ ಬರುವುದರಿಂದ ಇಡೀ ಸಮಾಜ ಬೆಂಬಲಿಸುತ್ತದೆ’ ಎಂದು ಹೇಳಿದರು.</p>.<p>ಮುಖಂಡ ಕೆಲ್ಲಂಬಳ್ಳಿ ಶ್ರೀನಿವಾಸ ನಾಯಕ ಹಾಗೂ ರಮ್ಮನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ನಾಗರಾಜು, ‘ಈ ಭಾಗದ ಸಮಾಜದ ಮುಖಂಡರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p>.<div><blockquote>ಸಂವಿಧಾನವನ್ನು ಒಪ್ಪಿಕೊಂಡು ನಡೆಯುತ್ತಿದ್ದೇವೆ. ಅದು ನಮಗೆ ರಕ್ಷಣೆ ನೀಡುತ್ತಿದೆ. ಅದನ್ನು ನಾವು ರಕ್ಷಿಸಿಕೊಳ್ಳಬೇಕಾಗಿದೆ </blockquote><span class="attribution">-ಸತೀಶ ಜಾರಕಿಹೊಳಿ ಲೋಕೋಪಯೋಗಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>