<p><strong>ಮೈಸೂರು:</strong> ‘ಕೃಷಿಕ್ ಸಂಸ್ಥೆಯಿಂದ ಗ್ರಾಮೀಣ ಪ್ರದೇಶದ ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ವೃತ್ತಿ ಮಾರ್ಗದರ್ಶನ, ತರಬೇತಿ ನೀಡಲಾಗುತ್ತಿದೆ’ ಎಂದು ಕೃಷಿಕ್ ಸರ್ವೋದಯ ಫೌಂಡೇಶನ್ ಅಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಹೇಳಿದರು.</p>.<p>ಇಲ್ಲಿನ ಕೃಷಿಕ್ ಸರ್ವೋದಯ ಫೌಂಡೇಶನ್ನಿಂದ ನಡೆದ 2023–24ರ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಾಗರಿಕ ಸೇವಾ ಪರೀಕ್ಷೆಯ ಪಠ್ಯ ವಿಷಯ ಮತ್ತು ಪರೀಕ್ಷಾ ವಿಧಾನಗಳಲ್ಲಿ ಆಗಿರುವ ಬದಲಾವಣೆಯನ್ನು ಗಮನಿಸಿ ತಜ್ಞರ ಜೊತೆ ಸಮಾಲೋಚಿಸಿ ತರಬೇತಿ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಂಡು ಬರಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಪ್ರತಿ ವರ್ಷ ₹50 ಲಕ್ಷ ಮೊತ್ತದಷ್ಟು ವಿದ್ಯಾರ್ಥಿ ವೇತನವನ್ನು ಎಲ್ಲ ಶಾಖೆಗಳಿಂದ ನೀಡಲಾಗುತ್ತಿದೆ. ಈ ಬಾರಿ ಮೈಸೂರು ಶಾಖೆಯಿಂದ ಮೆಡಿಕಲ್, ಎಂಜಿನಿಯರಿಂಗ್, ಬಿಎ, ಬಿಎಸ್ಸಿ, ಬಿಕಾಂ, ಡಿಪ್ಲೊಮಾ ಮುಂತಾದ ಪದವಿ ಓದುತ್ತಿರುವ 44 ವಿದ್ಯಾರ್ಥಿಗಳಿಗೆ ಒಟ್ಟು ₹7.15 ಲಕ್ಷದಷ್ಟು ವಿದ್ಯಾರ್ಥಿ ವೇತನ ನೀಡಲಾಗಿದೆ’ ಎಂದರು.</p>.<p>ಕೆಎಸ್ಎಫ್ ಕಾರ್ಯದರ್ಶಿ ಎಚ್.ಕಿಶೋರ್ ಚಂದ್ರ, ಪತ್ರಕರ್ತ ಎಸ್.ಟಿ.ರವಿಕುಮಾರ್ ಮಾತನಾಡಿದರು.</p>.<p>ಕೆಎಸ್ಎಫ್ ಆಡಳಿತ ವರ್ಗದ ಎನ್.ನಂಜೇಗೌಡ, ಕೆ.ಎಂ.ಚಂದ್ರೇಗೌಡ, ವೈ.ಕೆ.ಕೆಂಚೇಗೌಡ, ಎಸ್.ವಿ.ಗೌಡಪ್ಪ, ಜಿ.ಗೋವಿಂದರಾಜು, ಜ್ಯೋತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕೃಷಿಕ್ ಸಂಸ್ಥೆಯಿಂದ ಗ್ರಾಮೀಣ ಪ್ರದೇಶದ ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ವೃತ್ತಿ ಮಾರ್ಗದರ್ಶನ, ತರಬೇತಿ ನೀಡಲಾಗುತ್ತಿದೆ’ ಎಂದು ಕೃಷಿಕ್ ಸರ್ವೋದಯ ಫೌಂಡೇಶನ್ ಅಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಹೇಳಿದರು.</p>.<p>ಇಲ್ಲಿನ ಕೃಷಿಕ್ ಸರ್ವೋದಯ ಫೌಂಡೇಶನ್ನಿಂದ ನಡೆದ 2023–24ರ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಾಗರಿಕ ಸೇವಾ ಪರೀಕ್ಷೆಯ ಪಠ್ಯ ವಿಷಯ ಮತ್ತು ಪರೀಕ್ಷಾ ವಿಧಾನಗಳಲ್ಲಿ ಆಗಿರುವ ಬದಲಾವಣೆಯನ್ನು ಗಮನಿಸಿ ತಜ್ಞರ ಜೊತೆ ಸಮಾಲೋಚಿಸಿ ತರಬೇತಿ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಂಡು ಬರಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಪ್ರತಿ ವರ್ಷ ₹50 ಲಕ್ಷ ಮೊತ್ತದಷ್ಟು ವಿದ್ಯಾರ್ಥಿ ವೇತನವನ್ನು ಎಲ್ಲ ಶಾಖೆಗಳಿಂದ ನೀಡಲಾಗುತ್ತಿದೆ. ಈ ಬಾರಿ ಮೈಸೂರು ಶಾಖೆಯಿಂದ ಮೆಡಿಕಲ್, ಎಂಜಿನಿಯರಿಂಗ್, ಬಿಎ, ಬಿಎಸ್ಸಿ, ಬಿಕಾಂ, ಡಿಪ್ಲೊಮಾ ಮುಂತಾದ ಪದವಿ ಓದುತ್ತಿರುವ 44 ವಿದ್ಯಾರ್ಥಿಗಳಿಗೆ ಒಟ್ಟು ₹7.15 ಲಕ್ಷದಷ್ಟು ವಿದ್ಯಾರ್ಥಿ ವೇತನ ನೀಡಲಾಗಿದೆ’ ಎಂದರು.</p>.<p>ಕೆಎಸ್ಎಫ್ ಕಾರ್ಯದರ್ಶಿ ಎಚ್.ಕಿಶೋರ್ ಚಂದ್ರ, ಪತ್ರಕರ್ತ ಎಸ್.ಟಿ.ರವಿಕುಮಾರ್ ಮಾತನಾಡಿದರು.</p>.<p>ಕೆಎಸ್ಎಫ್ ಆಡಳಿತ ವರ್ಗದ ಎನ್.ನಂಜೇಗೌಡ, ಕೆ.ಎಂ.ಚಂದ್ರೇಗೌಡ, ವೈ.ಕೆ.ಕೆಂಚೇಗೌಡ, ಎಸ್.ವಿ.ಗೌಡಪ್ಪ, ಜಿ.ಗೋವಿಂದರಾಜು, ಜ್ಯೋತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>