<p><strong>ಮೈಸೂರು: </strong>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯ ಪ್ರತಿನಿಧಿ ಸಭೆ ಜುಲೈ 1 ಮತ್ತು 2ರಂದು ನಗರದ ಹೈವೆ ವೃತ್ತದ ಬಳಿ ಇರುವ ನಲಪಾಡ್ ಹೋಟೆಲ್ನಲ್ಲಿ ನಡೆಯಲಿದೆ.</p>.<p>ಎಸ್ಡಿಪಿಐ ರಾಷ್ಟ್ರ ಘಟಕದ ಉಪಾಧ್ಯಕ್ಷ ಶರಫುದ್ದೀನ್ ಲಕ್ನೋ ಜುಲೈ 1ರಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಕಾರ್ಯಕಾರಣಿ ಸಮಿತಿ ಸದಸ್ಯರು ಭಾಗವಹಿಸುವರು. 3 ವರ್ಷದ ಅವಧಿಗೆ ಪಕ್ಷದ ನಾಯಕರು, 21 ಮಂದಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗುವುದು ಎಂದು ಎಸ್ಡಿಪಿಐ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪಕ್ಷದ ಕಾರ್ಯಚಟುವಟಿಕೆ, ಭವಿಷ್ಯದ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವಕ್ಕೆ ಆದ್ಯತೆ ನೀಡಲಾಗಿದೆ. ಎಸ್ಡಿಪಿಐ ಇತರೆ ರಾಜಕೀಯ ಪಕ್ಷಗಳಂತಲ್ಲ. ಇದೊಂದು ಚಳವಳಿ ಎಂದರು.</p>.<p><strong>ವಾರ್ಡ್ ಮೀಸಲಾತಿ ಅವೈಜ್ಞಾನಿಕ:</strong> ನಗರ ಪಾಲಿಕೆ ವಾರ್ಡ್ ಮರುವಿಂಗಡಣೆ ಸಮಯದಲ್ಲಿ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ನಿಗದಿಪಡಿಸಲಾಗಿದೆ. ಉದಯಗಿರಿಯಲ್ಲಿ ಅಲ್ಪಸಂಖ್ಯಾತರು ಹೆಚ್ಚಿದ್ದರೂ, ಮೀಸಲು ಕ್ಷೇತ್ರವಾಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಮರುವಿಂಗಡಣೆಗೆ ತಕರಾರಿಲ್ಲ. ಕೆಲವು ವಾರ್ಡ್ಗಳಲ್ಲಿ ಕಡಿಮೆ ಜನರಿದ್ದು, ಮತ್ತೆ ಕೆಲವೆಡೆ ಹೆಚ್ಚು ಜನರಿದ್ದಾರೆ. ಪ್ರತಿ ವಾರ್ಡ್ಗೆ 15,000 ಜನಸಂಖ್ಯೆ ಎಂದು ನಿಯಮ ಮಾಡಿರುವುದು ಸೂಕ್ತವಾಗಿದೆ. ಆದರೆ ಆಗಿರುವ ಲೋಪಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಎಸ್ಡಿಪಿಐ ರಾಜ್ಯ ಘಟಕದ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ‘ದಲಿತರು ಮತ್ತು ಅಲ್ಪಸಂಖ್ಯಾತರಲ್ಲಿ ರಾಜಕೀಯ ಪ್ರಜ್ಞೆ ಮೂಡಿದರೆ ತಮ್ಮ ಅಸ್ತಿತ್ವಕ್ಕೆ ಪೆಟ್ಟುಬೀಳುತ್ತದೆ ಎಂದು ಎಸ್ಡಿಪಿಐ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹಮದ್, ನಗರ ಘಟಕದ ಅಧ್ಯಕ್ಷ ಆಝಾಂ ಪಾಷ, ಪಾಲಿಕೆ ಸದಸ್ಯ ಎಸ್.ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯ ಪ್ರತಿನಿಧಿ ಸಭೆ ಜುಲೈ 1 ಮತ್ತು 2ರಂದು ನಗರದ ಹೈವೆ ವೃತ್ತದ ಬಳಿ ಇರುವ ನಲಪಾಡ್ ಹೋಟೆಲ್ನಲ್ಲಿ ನಡೆಯಲಿದೆ.</p>.<p>ಎಸ್ಡಿಪಿಐ ರಾಷ್ಟ್ರ ಘಟಕದ ಉಪಾಧ್ಯಕ್ಷ ಶರಫುದ್ದೀನ್ ಲಕ್ನೋ ಜುಲೈ 1ರಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಕಾರ್ಯಕಾರಣಿ ಸಮಿತಿ ಸದಸ್ಯರು ಭಾಗವಹಿಸುವರು. 3 ವರ್ಷದ ಅವಧಿಗೆ ಪಕ್ಷದ ನಾಯಕರು, 21 ಮಂದಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗುವುದು ಎಂದು ಎಸ್ಡಿಪಿಐ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪಕ್ಷದ ಕಾರ್ಯಚಟುವಟಿಕೆ, ಭವಿಷ್ಯದ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವಕ್ಕೆ ಆದ್ಯತೆ ನೀಡಲಾಗಿದೆ. ಎಸ್ಡಿಪಿಐ ಇತರೆ ರಾಜಕೀಯ ಪಕ್ಷಗಳಂತಲ್ಲ. ಇದೊಂದು ಚಳವಳಿ ಎಂದರು.</p>.<p><strong>ವಾರ್ಡ್ ಮೀಸಲಾತಿ ಅವೈಜ್ಞಾನಿಕ:</strong> ನಗರ ಪಾಲಿಕೆ ವಾರ್ಡ್ ಮರುವಿಂಗಡಣೆ ಸಮಯದಲ್ಲಿ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ನಿಗದಿಪಡಿಸಲಾಗಿದೆ. ಉದಯಗಿರಿಯಲ್ಲಿ ಅಲ್ಪಸಂಖ್ಯಾತರು ಹೆಚ್ಚಿದ್ದರೂ, ಮೀಸಲು ಕ್ಷೇತ್ರವಾಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಮರುವಿಂಗಡಣೆಗೆ ತಕರಾರಿಲ್ಲ. ಕೆಲವು ವಾರ್ಡ್ಗಳಲ್ಲಿ ಕಡಿಮೆ ಜನರಿದ್ದು, ಮತ್ತೆ ಕೆಲವೆಡೆ ಹೆಚ್ಚು ಜನರಿದ್ದಾರೆ. ಪ್ರತಿ ವಾರ್ಡ್ಗೆ 15,000 ಜನಸಂಖ್ಯೆ ಎಂದು ನಿಯಮ ಮಾಡಿರುವುದು ಸೂಕ್ತವಾಗಿದೆ. ಆದರೆ ಆಗಿರುವ ಲೋಪಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಎಸ್ಡಿಪಿಐ ರಾಜ್ಯ ಘಟಕದ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ‘ದಲಿತರು ಮತ್ತು ಅಲ್ಪಸಂಖ್ಯಾತರಲ್ಲಿ ರಾಜಕೀಯ ಪ್ರಜ್ಞೆ ಮೂಡಿದರೆ ತಮ್ಮ ಅಸ್ತಿತ್ವಕ್ಕೆ ಪೆಟ್ಟುಬೀಳುತ್ತದೆ ಎಂದು ಎಸ್ಡಿಪಿಐ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹಮದ್, ನಗರ ಘಟಕದ ಅಧ್ಯಕ್ಷ ಆಝಾಂ ಪಾಷ, ಪಾಲಿಕೆ ಸದಸ್ಯ ಎಸ್.ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>