‘ಗೊಮ್ಮಟೇಶ್ವರ ಮೂರ್ತಿ ಕುರಿತು ದಿ ನ್ಯೂ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಯೂಬ್ಖಾನ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಬೃಹತ್ ಪ್ರತಿಭಟನಾ ಜಾಥಾಗೆ ಕರೆ ನೀಡಿರುವ ಸಂದೇಶ ವೈರಲ್ ಆಗಿರುವುದು ಹಾಗೂ ಹಿಜಾಬ್ ಬೆಂಬಲಿಸಿ ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂಬ ವದಂತಿ ಆಧರಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.