<p><strong>ಮೈಸೂರು: </strong>ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಗಂಧದ ಮರ ಕಳವು ಮಾಡಲು ಯತ್ನಿಸುತ್ತಿದ್ದ ಕುಮಾರ ಎಂಬ ವ್ಯಕ್ತಿಯನ್ನು ವಿ.ವಿ.ಯ ಭದ್ರತಾ ಸಿಬ್ಬಂದಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಶುಕ್ರವಾರ ಬೆಳಗಿನ ಜಾವ ವಿಶ್ವವಿದ್ಯಾಲಯ ಲಲಿತಕಲಾ ಕಾಲೇಜಿನ ಉತ್ತರ ಭಾಗದ ಮರದ ತೋಪಿನಲ್ಲಿ ಮರ ಬಿದ್ದ ಶಬ್ದ ಕೇಳಿಬಂದಿದೆ. ಇದರಿಂದ ಎಚ್ಚೆತ್ತ ಭದ್ರತಾ ಉಸ್ತುವಾರಿ ಅರುಣ್ಕುಮಾರ್, ಭದ್ರತಾ ಸಿಬ್ಬಂದಿ ವೆಂಕೇಗೌಡ ಮತ್ತು ಮಹದೇವ ಅವರು ಮರ ಬಿದ್ದ ಸ್ಥಳಕ್ಕೆ ಹೋಗಿದ್ದಾರೆ. ಈ ವೇಳೆ ಆರೋಪಿಯು ಗಿಡಗಳ ಮರೆಯಲ್ಲಿ ಕುಳಿತಿದ್ದು, ಸಿಬ್ಬಂದಿಯನ್ನು ನೋಡಿ ಓಡಲು ಯತ್ನಿಸಿದ್ದಾನೆ.</p>.<p>ಸಿಬ್ಬಂದಿಯು ವ್ಯಕ್ತಿಯನ್ನು ಹಿಡಿದು, ಆತನು ತಂದಿದ್ದ ಸಲಕರಣೆಗಳು, ಕಡಿದಿದ್ದ 2 ಗಂಧದ ತುಂಡುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಈ ಸಂಬಂಧ ಸರಸ್ವತಿಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಗಂಧದ ಮರ ಕಳವು ಮಾಡಲು ಯತ್ನಿಸುತ್ತಿದ್ದ ಕುಮಾರ ಎಂಬ ವ್ಯಕ್ತಿಯನ್ನು ವಿ.ವಿ.ಯ ಭದ್ರತಾ ಸಿಬ್ಬಂದಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಶುಕ್ರವಾರ ಬೆಳಗಿನ ಜಾವ ವಿಶ್ವವಿದ್ಯಾಲಯ ಲಲಿತಕಲಾ ಕಾಲೇಜಿನ ಉತ್ತರ ಭಾಗದ ಮರದ ತೋಪಿನಲ್ಲಿ ಮರ ಬಿದ್ದ ಶಬ್ದ ಕೇಳಿಬಂದಿದೆ. ಇದರಿಂದ ಎಚ್ಚೆತ್ತ ಭದ್ರತಾ ಉಸ್ತುವಾರಿ ಅರುಣ್ಕುಮಾರ್, ಭದ್ರತಾ ಸಿಬ್ಬಂದಿ ವೆಂಕೇಗೌಡ ಮತ್ತು ಮಹದೇವ ಅವರು ಮರ ಬಿದ್ದ ಸ್ಥಳಕ್ಕೆ ಹೋಗಿದ್ದಾರೆ. ಈ ವೇಳೆ ಆರೋಪಿಯು ಗಿಡಗಳ ಮರೆಯಲ್ಲಿ ಕುಳಿತಿದ್ದು, ಸಿಬ್ಬಂದಿಯನ್ನು ನೋಡಿ ಓಡಲು ಯತ್ನಿಸಿದ್ದಾನೆ.</p>.<p>ಸಿಬ್ಬಂದಿಯು ವ್ಯಕ್ತಿಯನ್ನು ಹಿಡಿದು, ಆತನು ತಂದಿದ್ದ ಸಲಕರಣೆಗಳು, ಕಡಿದಿದ್ದ 2 ಗಂಧದ ತುಂಡುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಈ ಸಂಬಂಧ ಸರಸ್ವತಿಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>