ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಧದ ಮರ ಕಳ್ಳನನ್ನು ಹಿಡಿದ ಭದ್ರತಾ ಸಿಬ್ಬಂದಿ

Last Updated 8 ಡಿಸೆಂಬರ್ 2018, 14:32 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಗಂಧದ ಮರ ಕಳವು ಮಾಡಲು ಯತ್ನಿಸುತ್ತಿದ್ದ ಕುಮಾರ ಎಂಬ ವ್ಯಕ್ತಿಯನ್ನು ವಿ.ವಿ.ಯ ಭದ್ರತಾ ಸಿಬ್ಬಂದಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಶುಕ್ರವಾರ ಬೆಳಗಿನ ಜಾವ ವಿಶ್ವವಿದ್ಯಾಲಯ ಲಲಿತಕಲಾ ಕಾಲೇಜಿನ ಉತ್ತರ ಭಾಗದ ಮರದ ತೋಪಿನಲ್ಲಿ ಮರ ಬಿದ್ದ ಶಬ್ದ ಕೇಳಿಬಂದಿದೆ. ಇದರಿಂದ ಎಚ್ಚೆತ್ತ ಭದ್ರತಾ ಉಸ್ತುವಾರಿ ಅರುಣ್‌ಕುಮಾರ್, ಭದ್ರತಾ ಸಿಬ್ಬಂದಿ ವೆಂಕೇಗೌಡ ಮತ್ತು ಮಹದೇವ ಅವರು ಮರ ಬಿದ್ದ ಸ್ಥಳಕ್ಕೆ ಹೋಗಿದ್ದಾರೆ. ಈ ವೇಳೆ ಆರೋಪಿಯು ಗಿಡಗಳ ಮರೆಯಲ್ಲಿ ಕುಳಿತಿದ್ದು, ಸಿಬ್ಬಂದಿಯನ್ನು ನೋಡಿ ಓಡಲು ಯತ್ನಿಸಿದ್ದಾನೆ.

ಸಿಬ್ಬಂದಿಯು ವ್ಯಕ್ತಿಯನ್ನು ಹಿಡಿದು, ಆತನು ತಂದಿದ್ದ ಸಲಕರಣೆಗಳು, ಕಡಿದಿದ್ದ 2 ಗಂಧದ ತುಂಡುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಸರಸ್ವತಿಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT