ನಂಜನಗೂಡು: ತಾಲ್ಲೂಕಿನ ಯಾಲಹಳ್ಳಿ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದಲ್ಲಿ ಗುರುವಾರ ಹಿರಿಯ ಪರೀಕ್ಷಕ ರಮೇಶ್ ಅವರು ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ವಿತರಿಸಿದರು.
ಬಳಿಕ ಮಾತನಾಡಿ, ‘ನೀರಾವರಿ ಜಮೀನು ಹೊಂದಿರುವ ರೈತರ ಜಾನುವಾರುಗಳಿಗೆ ಮೇವಿಗೆ ತೊಂದರೆ ಉಂಟಾಗಬಾರದೆಂಬ ಉದ್ದೇಶದಿಂದ ಪಶುಪಾಲನ ಇಲಾಖೆಯಿಂದ ಉಚಿತವಾಗಿ ಬಿತ್ತನೆ ಬೀಜದ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ರೈತರು ಮೇವನ್ನು ಬೆಳೆದು ಜಾನುವಾರಗಳಿಗೆ ಮೇವಿನ ಕೊರತೆಯಾಗದಂತೆ ನಿರ್ವಹಿಸಬೇಕೆಂದು’ ಎಂದು ಹೇಳಿದರು.
ಗ್ರಾಮ ಪಂಚಾಯತಿ ಸದಸ್ಯ ಸಿ ಗುರುಪ್ರಸಾದ್, ಗುರು ಮಲ್ಲಪ್ಪ, ಪುಟ್ಟರಾಜು ಇದ್ದರು.