<p><strong>ಮೈಸೂರು:</strong> ವೈಜ್ಞಾನಿಕ ಹಾಗೂ ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್ಐಆರ್) ಅಧ್ಯಕ್ಷರೂ ಆಗಿರುವ ಪ್ರಧಾನಿ ಮೋದಿ ಸಲಹೆ ಮೇರೆಗೆ ವರ್ಚುವಲ್ ಪ್ರಯೋಗಾಲಯ ಸ್ಥಾಪಿಸಲು ಕಾರ್ಯಕ್ರಮ ರೂಪಿಸಿದ್ದೇವೆ ಎಂದು ನವದೆಹಲಿಯ ಡಿಎಸ್ಐಆರ್ ಕಾರ್ಯದರ್ಶಿ ಹಾಗೂ ಸಿಎಸ್ಐಆರ್ ಮಹಾನಿರ್ದೇಶಕ ಡಾ.ಶೇಖರ್ ಸಿ.ಮಂಡೆ ತಿಳಿಸಿದರು.</p>.<p>ಮಂಗಳವಾರ ಇಲ್ಲಿ ನಡೆದ ಮೈಸೂರು ವಿಶ್ವವಿದ್ಯಾಲಯದ 101ನೇ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ‘ಬಹುಮಾಧ್ಯಮ ಡಿಜಿಟಲ್ ವೇದಿಕೆಗಳ ಮೂಲಕ ವೈಜ್ಞಾನಿಕ ಜ್ಞಾನ ಪಸರಿಸಲು ಇದರಿಂದ ಸಾಧ್ಯವಾಗಲಿದೆ. ವಿದ್ಯಾರ್ಥಿಗಳ ಸ್ವ–ಕಲಿಕೆ ಕೌಶಲ ವೃದ್ಧಿಯಾಗುವುದರ ಜೊತೆಗೆ ಕ್ರಿಯಾಶೀಲತೆಯನ್ನೂ ಹೆಚ್ಚಿಸಲಿದೆ’ ಎಂದರು.</p>.<p>‘ಮುಂದಿನ ದಿನಗಳಲ್ಲಿ ಎಲ್ಲವೂ ತಂತ್ರಜ್ಞಾನ ಆಧಾರಿತವಾಗಿರಲಿದೆ. ಹೀಗಾಗಿ, ತಾವು ಯಾವುದೇ ವಿಷಯ ಕಲಿಯುತ್ತಿದ್ದರೂ ತಂತ್ರಜ್ಞಾನ ಕೇಂದ್ರಿತ ಆವಿಷ್ಕಾರದ ಜೊತೆ ಸಂಬಂಧ, ಸಂಪರ್ಕ ಹೊಂದಿರುತ್ತೀರಿ’ ಎಂದು ನುಡಿದರು.</p>.<p>‘ತಂತ್ರಜ್ಞಾನ ಬಳಸುವುದರಲ್ಲಿ ಈ ಕಾಲದ ವಿದ್ಯಾರ್ಥಿಗಳು ನಿಪುಣರಾಗಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ–2020 ಕೂಡ ತಂತ್ರಜ್ಞಾನ ಬಳಕೆಗೆ ಒತ್ತು ನೀಡಿದೆ’ ಎಂದು ತಿಳಿಸಿದರು.</p>.<p>‘ವಿಶೇಷವೆಂದರೆ ಕೋವಿಡ್ಗೆ ಮುನ್ನವೇ ಮೈಸೂರು ವಿಶ್ವವಿದ್ಯಾಲಯ ಆನ್ಲೈನ್ ಶಿಕ್ಷಣ ಶುರು ಮಾಡಿತ್ತು. ಕೋವಿಡ್ನಿಂದಾಗಿ ಜಾಗತಿಕವಾಗಿ ಆನ್ಲೈನ್ ಕಲಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಸಹಾಯವಾಗಿದೆ. ಯಾವುದೇ ರೀತಿಯ ಕಲಿಕೆ ಇದ್ದರೂ ಶಿಕ್ಷಕರ ಪಾತ್ರ ಅನನ್ಯವಾದದು. ಶಿಕ್ಷಣ ನೀಡುವುದು ಮಾತ್ರವಲ್ಲ; ಬೋಧನೆಯಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ’ ಎಂದು ಪ್ರತಿಪಾದಿಸಿದರು.</p>.<p>‘ಏನೇ ಕೆಲಸ ಮಾಡಿದರೂ ಅದರಲ್ಲಿ ಮಾನವೀಯತೆ ಇರಬೇಕು. ಪರಿಸರ, ಪ್ರಕೃತಿಯನ್ನೂ ಮಾನವೀಯತೆಯಿಂದ ಕಾಣಬೇಕು. ಜೊತೆಗೆ ಅನುಕಂಪವೂ ಇರಲಿ’ ಎಂದು ಕಿವಿಮಾತು ಹೇಳಿದರು.</p>.<p>ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋತ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ.ಜ್ಞಾನಪ್ರಕಾಶ್ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ವೈಜ್ಞಾನಿಕ ಹಾಗೂ ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್ಐಆರ್) ಅಧ್ಯಕ್ಷರೂ ಆಗಿರುವ ಪ್ರಧಾನಿ ಮೋದಿ ಸಲಹೆ ಮೇರೆಗೆ ವರ್ಚುವಲ್ ಪ್ರಯೋಗಾಲಯ ಸ್ಥಾಪಿಸಲು ಕಾರ್ಯಕ್ರಮ ರೂಪಿಸಿದ್ದೇವೆ ಎಂದು ನವದೆಹಲಿಯ ಡಿಎಸ್ಐಆರ್ ಕಾರ್ಯದರ್ಶಿ ಹಾಗೂ ಸಿಎಸ್ಐಆರ್ ಮಹಾನಿರ್ದೇಶಕ ಡಾ.ಶೇಖರ್ ಸಿ.ಮಂಡೆ ತಿಳಿಸಿದರು.</p>.<p>ಮಂಗಳವಾರ ಇಲ್ಲಿ ನಡೆದ ಮೈಸೂರು ವಿಶ್ವವಿದ್ಯಾಲಯದ 101ನೇ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ‘ಬಹುಮಾಧ್ಯಮ ಡಿಜಿಟಲ್ ವೇದಿಕೆಗಳ ಮೂಲಕ ವೈಜ್ಞಾನಿಕ ಜ್ಞಾನ ಪಸರಿಸಲು ಇದರಿಂದ ಸಾಧ್ಯವಾಗಲಿದೆ. ವಿದ್ಯಾರ್ಥಿಗಳ ಸ್ವ–ಕಲಿಕೆ ಕೌಶಲ ವೃದ್ಧಿಯಾಗುವುದರ ಜೊತೆಗೆ ಕ್ರಿಯಾಶೀಲತೆಯನ್ನೂ ಹೆಚ್ಚಿಸಲಿದೆ’ ಎಂದರು.</p>.<p>‘ಮುಂದಿನ ದಿನಗಳಲ್ಲಿ ಎಲ್ಲವೂ ತಂತ್ರಜ್ಞಾನ ಆಧಾರಿತವಾಗಿರಲಿದೆ. ಹೀಗಾಗಿ, ತಾವು ಯಾವುದೇ ವಿಷಯ ಕಲಿಯುತ್ತಿದ್ದರೂ ತಂತ್ರಜ್ಞಾನ ಕೇಂದ್ರಿತ ಆವಿಷ್ಕಾರದ ಜೊತೆ ಸಂಬಂಧ, ಸಂಪರ್ಕ ಹೊಂದಿರುತ್ತೀರಿ’ ಎಂದು ನುಡಿದರು.</p>.<p>‘ತಂತ್ರಜ್ಞಾನ ಬಳಸುವುದರಲ್ಲಿ ಈ ಕಾಲದ ವಿದ್ಯಾರ್ಥಿಗಳು ನಿಪುಣರಾಗಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ–2020 ಕೂಡ ತಂತ್ರಜ್ಞಾನ ಬಳಕೆಗೆ ಒತ್ತು ನೀಡಿದೆ’ ಎಂದು ತಿಳಿಸಿದರು.</p>.<p>‘ವಿಶೇಷವೆಂದರೆ ಕೋವಿಡ್ಗೆ ಮುನ್ನವೇ ಮೈಸೂರು ವಿಶ್ವವಿದ್ಯಾಲಯ ಆನ್ಲೈನ್ ಶಿಕ್ಷಣ ಶುರು ಮಾಡಿತ್ತು. ಕೋವಿಡ್ನಿಂದಾಗಿ ಜಾಗತಿಕವಾಗಿ ಆನ್ಲೈನ್ ಕಲಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಸಹಾಯವಾಗಿದೆ. ಯಾವುದೇ ರೀತಿಯ ಕಲಿಕೆ ಇದ್ದರೂ ಶಿಕ್ಷಕರ ಪಾತ್ರ ಅನನ್ಯವಾದದು. ಶಿಕ್ಷಣ ನೀಡುವುದು ಮಾತ್ರವಲ್ಲ; ಬೋಧನೆಯಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ’ ಎಂದು ಪ್ರತಿಪಾದಿಸಿದರು.</p>.<p>‘ಏನೇ ಕೆಲಸ ಮಾಡಿದರೂ ಅದರಲ್ಲಿ ಮಾನವೀಯತೆ ಇರಬೇಕು. ಪರಿಸರ, ಪ್ರಕೃತಿಯನ್ನೂ ಮಾನವೀಯತೆಯಿಂದ ಕಾಣಬೇಕು. ಜೊತೆಗೆ ಅನುಕಂಪವೂ ಇರಲಿ’ ಎಂದು ಕಿವಿಮಾತು ಹೇಳಿದರು.</p>.<p>ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋತ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ.ಜ್ಞಾನಪ್ರಕಾಶ್ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>