‘ದಶಕಗಳಿಂದಲೂ ಸೀವೇಜ್ ಫಾರಂನಲ್ಲಿ ಕಸ ಸಂಗ್ರಹವಾಗಿ ಈ ಭಾಗದ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ನಂತರ ನಡೆದ ಸತತ ಪ್ರಯತ್ನದ ಫಲವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ₹ 56 ಕೋಟಿ ಅನುದಾನ ನೀಡಿದ್ದಾರೆ. ಪರಿಣಾಮ, ಒಂದು ವರ್ಷದೊಳಗೆ ಕಸವೆಲ್ಲವೂ ಸಿಮೆಂಟ್ ಕಾರ್ಖಾನೆಗೆ ಹೋಗಲಿದೆ. ಇದಕ್ಕಾಗಿ ಯೋಜನೆ ರೂಪಿಸಲಾಗಿದೆ. ಜೊತೆಗೆ, ಇದೇ ತಿಂಗಳು ಕೆಸರೆ ಬಡಾವಣೆಯ ಘಟಕ ಕಾರ್ಯಾರಂಭ ಮಾಡಲಿದೆ. ನಂತರದ ಕೆಲ ದಿನಗಳಲ್ಲಿ ರಾಯನಕೆರೆ ಘಟಕ ಆರಂಭವಾಗಲಿದೆ’ ಎಂದು ತಿಳಿಸಿದರು.